ಮಂಡ್ಯ | ಕೆ ಆರ್ ಪೇಟೆಯಲ್ಲಿ ಕಳಪೆ ಕಾಮಗಾರಿ; ಎಇಯನ್ನು ತರಾಟೆಗೆ ತೆಗೆದುಕೊಂಡ ಮುಖಂಡರು

Date:

Advertisements

ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಹೇಮಾವತಿ ಜಲಾಶಯದ ಎಡದಂಡೆ ನಾಲೆಯ 54 ನೇ ವಿತರಣಾ ನಾಲೆ ನವೀಕರಣ ಕಾಮಗಾರಿ ಸಂಪೂರ್ಣ ಕಳಪೆ ಹಾಗೂ ಅವೈಜ್ಞಾನಿಕವಾಗಿ ಕೂಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಮಂಡ್ಯ ಜಿಲ್ಲಾಧ್ಯಕ್ಷ ಡಿ ಎಸ್ ವೇಣು ಆರೋಪಿಸಿ, ಕಾಮಗಾರಿ ಸ್ಥಳದಲ್ಲಿದ್ದ ಹೇಮಾವತಿ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಚಂದ್ರೇಗೌಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆಇದೆ.

ಕೆ ಆರ್ ಪೇಟೆ ತಾಲೂಕಿನ ಕಸಬಾ ಹೋಬಳಿಯ ಹಿರೀಕಳಲೆ, ಗಾಂಧಿನಗರ, ಗಂಗನಹಳ್ಳಿ ಕೃಷ್ಣಾಪುರ ಲಿಂಗಾಪುರ
ಮಾಕವಳ್ಳಿ, ಮಲ್ಲೇನಹಳ್ಳಿ, ಕರೋಠಿ, ಹೆಗ್ಗಡಹಳ್ಳಿ ಗ್ರಾಮದ ವ್ಯಾಪ್ತಿಗೆ ಬರುವ ಹೇಮಾವತಿ ಎಡದಂಡೆ ನಾಲೆಯ ಸರಪಳಿ 118.500 ಕಿಮೀ ನಲ್ಲಿ ಡಿ54 ವಿತರಣಾ ನಾಲೆಯ ಆಧುನೀಕರಣ ಕಾಮಗಾರಿಯನ್ನು ಅವರು ವೀಕ್ಷಿಸಿದರು.

k r pete

ಈ ಭಾಗದ ರೈತರು ನಾಲೆಯಲ್ಲಿ ನೀರು ಹರಿದರೆ ಕುಂದೂರುನಿಂದ ಮಲ್ಲೇನಹಳ್ಳಿವರೆಗೆ ಅಂತರ್ಜಲ ಹೆಚ್ಚಾಗಿ ಎಲ್ಲ ಕೊಳವೆಬಾವಿಗಳ ನೀರು ಮರುಪೂರಣವಾಗುತ್ತವೆ. ಇದರಿಂದ ಈ ನಾಲೆಯ ವ್ಯಾಪ್ತಿಗೆ ಸೇರುವ ಅಧಿಕೃತ ಜಮೀನಿನ ಎರಡು ಪಟ್ಟು ಜಮೀನುಗಳಿಗೆ ನೀರು ಒದಗುತ್ತದೆ ಎಂಬ ದೂರ ದೃಷ್ಟಿಯಿಂದ ಸತತ 20 ವರ್ಷಗಳ ಸ್ಥಳೀಯ ರೈತರ ಹೋರಾಟದ ಫಲವಾಗಿ ಹಿಂದಿನ ಸರ್ಕಾರದ ಮಾಜಿ ಸಚಿವ ಕೆ ಸಿ ನಾರಾಯಣಗೌಡ ಸುಮಾರು 55 ಕೋಟಿ ವೆಚ್ಚದಲ್ಲಿ 54 ನೇ ವಿತರಣಾ ನಾಲೆಯ ನವೀಕರಣ ಕಾಮಗಾರಿ ಎರಡು ವರ್ಷ ಹಿಂದೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಆದರೆ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ ಅದುವೇ ಕಳಪೆ ಕಾಮಗಾರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ರೈತ ಮುಖಂಡ ಕರೋಟಿ ತಮ್ಮಗೌಡ ಮಾತನಾಡಿ, “ಕಾಮಗಾರಿ ಗುಣಮಟ್ಟದಲ್ಲಿ ಇಲ್ಲ. ಕಳಪೆ ಕಾಮಗಾರಿ ನಡೆಸುತ್ತಿದ್ದಾರೆ. ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಇಲಾಖೆಗೆ ಸಂಬಂಧಪಟ್ಟ ಇಂಜಿನಿಯರಾಗಲೀ, ಇತರೆ ಯಾವುದೇ ಸಹಾಯಕ ಅಧಿಕಾರಿ ಖುದ್ದಾಗಿ ಸ್ಥಳದಲ್ಲಿದ್ದು ಕಾಮಗಾರಿಯ ಗುಣಮಟ್ಟ ವೀಕ್ಷಿಸಿಕೊಳ್ಳದೆ ಇರುವುದರಿಂದ.ಗುತ್ತಿಗೆದಾರ ಹಣ ಲೂಟಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಅನುದಾನದ ನೀಲಿ ನಕ್ಷೆಯಂತೆ ಕಾಮಗಾರಿ ನೆರವೇರಿಸದೆ ಕಳಪೆ ಕಾಮಗಾರಿ ನಡೆಯುತ್ತಿದ್ದು, ಕೆಲ ದಿನಗಳಲ್ಲಿ ನಡೆದ ಕಾಮಗಾರಿಗಳು ಸೂಕ್ತ ನಿರ್ವಹಣೆ ಇಲ್ಲದೆ ಈಗಾಗಲೆ ಸಿಮೆಂಟ್ ಬಿರುಕು ಬಿಟ್ಟು ಬೀಳುವ ಸ್ಥಿತಿಯಲ್ಲಿದೆ. ಕಳಪೆ ಕಾಮಗಾರಿ ಕಣ್ಣಿಗೆ ಕಂಡರು ಅಧಿಕಾರಿಗಳು ಮೌನ ವಹಿಸಿರುವುದು ನೋಡಿದರೆ ಅಧಿಕಾರಿಗಳು ಗುತ್ತಿಗೆದಾರನ ಕೈಗೊಂಬೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಅನುಮಾನ ಕಾಡುತ್ತಿದೆ ಎಂದರು.

k r pete 1

ಕಾಮಗಾರಿ ಹೀಗೆ ಸಾಗಿದರೆ ಒಂದು ವರ್ಷವೂ ಬಾಳಿಕೆ ಬರುವ ಲಕ್ಷಣ ಕಾಣುತ್ತಿಲ್ಲ ಸರ್ಕಾರ ರೈತರಿಗೆ ಸಾರ್ವಜನಿಕರಿಗೆ ಸದ್ಬಳಕೆ ಆಗಬೇಕೆಂಬ ದೂರ ದೃಷ್ಟಿಯಿಂದ ಬಹುಕೋಟಿ ಅನುದಾನ ನೀಡಲಾಗಿದೆ. ಹಾಗಾಗಿ ಶಾಸಕ ಹೆಚ್ ಟಿ ಮಂಜು ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿ ಹಾಗೂ ಗುತ್ತಿಗೆದಾರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರ ಕೆ ಆರ್ ಪೇಟೆ ಜಯಣ್ಣ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮಿಪುರ ಶಿವಪ್ರಸಾದ್, ತಾಲ್ಲೂಕು ಉಪಾಧ್ಯಕ್ಷ ಹೊಸಹೊಳಲು ಗೋಪಿ, ಕಸಬಾ ಅಧ್ಯಕ್ಷ ಅನಿಲ್, ಯುವ ಮುಖಂಡರಾದ ಗುಂಡಣ್ಣ, ಕುಂದನಹಳ್ಳಿ ಶಿವಕುಮಾರ್, ಕರೋಠಿ ಅಜಯ್,ಸಹಾಯಕ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X