ಮೈಸೂರು| ‘ ನಿಂಬಿಯ ಬನಾದ ಮ್ಯಾಗ ‘ ಏಪ್ರಿಲ್ 1 ರಂದು ತೆರೆಗೆ

Date:

Advertisements

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ಧಿಗೋಷ್ಠಿ ನಡೆಸಿದ ಚಿತ್ರತಂಡ ‘ ನಿಂಬಿಯ ಬನಾದ ಮ್ಯಾಗ ” ಇದೇ ಏಪ್ರಿಲ್ ಒಂದರಂದು ತೆರೆ ಕಾಣುತ್ತಿದೆ. ನಟ ಸಾರ್ವಭೌಮ ಡಾ ರಾಜಕುಮಾರ್ ಅವರ ದೊಡ್ಡ ಮಗಳಾದ ಲಕ್ಷ್ಮಿ ಗೋವಿಂದ ರಾಜ ರವರ ಪುತ್ರ ಷಣ್ಮುಖ ಗೋವಿಂದರಾಜ್ ನಾಯಕ ನಟನಾಗಿ ನಟಿಸಿರುವ ಚೊಚ್ಚಲ ಚಲನಚಿತ್ರವಾಗಿದೆ ಎಂದು ಮಾಹಿತಿ ನೀಡಿದರು.

ನಾಯಕ ನಟ ಷಣ್ಮುಖ ಗೋವಿಂದರಾಜ್ ಮಾತನಾಡಿ ” ಸಿನಿಮಾ ಮಾಡಲು ಇಷ್ಟವಿದ್ದರೂ ನನ್ನನ್ನು ಹಾಕಿಕೊಳ್ಳಲು ಯಾರು ಮುಂದೆ ಬರುತ್ತಿರಲಿಲ್ಲ. ತಂದೆ ತಾಯಿಯು ಸಹ ನಟನೆ ಬಗ್ಗೆ ನನ್ನನ್ನು ಕೇಳಲಿಲ್ಲ . ನಾನೊಂದು ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದೆ. ನನ್ನನ್ನು ನಿರ್ಮಾಪಕರಾದ ಮಹಾದೇಶ ಹಾಗೂ ನಿರ್ದೇಶಕ ಅಶೋಕ್ ಕಡಬ ಸಂಪರ್ಕಿಸಿ, ನಿಮಗಾಗಿ ಒಂದು ಚಿತ್ರಕಥೆ ಇದೆ ದಯವಿಟ್ಟು ನೀವೇ ಅದರಲ್ಲಿ ನಾಯಕ ನಟನ ಪಾತ್ರ ಮಾಡಬೇಕು ಎಂದು ಕೇಳಿಕೊಂಡರು.

ತಂದೆ, ತಾಯಿಗೆ ಒಪ್ಪಿಸಿ ಚಿತ್ರಕಥೆ ಕೇಳಿದಾಗ ನಟಿಸಲು ತಿಳಿಸಿದರು. ಇದೊಂದು ಸುಂದರ ಸಂಸಾರಿಕ ಚಿತ್ರವಾಗಿದ್ದು, ತಂದೆ ತಾಯಿ ಮಗನ ಸುತ್ತ ಹೆಣೆದ ಕಥೆಯಾಗಿದೆ. ಸುಂದರವಾದ ನಾಲ್ಕು ಹಾಡುಗಳು ಮೂಡಿಬಂದಿವೆ. ತಾತ ರಾಜ್ ಕುಮಾರ, ಶಿವಣ್ಣ,ಪುನೀತ್, ರಾಘಣ್ಣನವರು ಹಾಕಿಕೊಟ್ಟ ಮಾರ್ಗದಲ್ಲೇ ನಡೆಯುತ್ತೇನೆ ” ಎಂದು ತಿಳಿಸಿದರು.

Advertisements

ನಿರ್ಮಾಪಕ ಮದೇಶ್ ಮಾತನಾಡಿ ‘ ಕರ್ನಾಟಕದ 70 ಸಿನಿಮಾ ಮಂದಿರದಲ್ಲಿ ಬಿಡುಗಡೆಯಾಗುತ್ತಿದೆ. ಸಿನಿಮಾ ಸುಮಾರು ಒಂದು ಕೋಟಿ ಬಜೆಟ್ ನಲ್ಲಿ ಮೂಡಿ ಬಂದಿದೆ.ಸಿನಿ ರಸಿಕರು ಚಿತ್ರ ಮಂದಿರದಲ್ಲಿ ವೀಕ್ಷಿಸಿ ಬೆಂಬಲಿಸಬೇಕು ‘ ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಸಮಾಜದಲ್ಲಿ ಒಡೆದ ಮನಸ್ಸುಗಳನ್ನು ಬೆಸೆಯುವ ಶಕ್ತಿ ಪತ್ರಕರ್ತರಿಗಿದೆ : ಎಂ ಎ ನಿರಂಜನ್

ಸುದ್ದಿಗೋಷ್ಠಿಯಲ್ಲಿ ಹಿರಿಯ ನಿರ್ಮಾಪಕ ಎಸ್ ಎ ಶ್ರೀನಿವಾಸ್. ಸುನಾದ್ ರಾಜ್. ಸಂದೀಪ್ ಮಲಾನಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X