ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ನೂರಾನಿ ಗಂಧೋತ್ಸವ; ಎಲ್ಲೆಡೆ ಸಂಭ್ರಮಾಚರಣೆ

Date:

Advertisements

ಸುಪ್ರಸಿದ್ಧ ಭಕ್ತಿಯ ತಾಣ ಚಿಂತಾಮಣಿ ನಿಮ್ಮಕಾಯಲಹಳ್ಳಿ ಗ್ರಾಮದ ಹಜರತ್ ಸೈಯದ್ ಜಲಾಲ್ ಖಾಕಿ ಷಾ ಮೌಲಾ ಬಾಬಾ ದರ್ಗಾದ ಮೊದಲನೇ ದಿನದ ನೂರಾನಿ ಗಂಧೋತ್ಸವವನ್ನು ಗುರುವಾರ ರಾತ್ರಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಹಿಂದೂ ಮುಸ್ಲಿಮರ ಭಾವೈಕ್ಯತೆಯ ಸಂಗಮವಾಗಿರುವ ಚಿಂತಾಮಣಿ ತಾಲ್ಲೂಕಿನ ನಿಮ್ಮಕಾಯಲಹಳ್ಳಿಯಲ್ಲಿ ಹಲವು ವರ್ಷಗಳಿಂದ ನೂರಾನಿ ಗಂಧೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಎಂದಿನಂತೆ ದರ್ಗಾ ಮುಜಾವರ್ ಎಸ್ ಮೌಲಾ ಅಲಿ ಅವರೊಂದಿಗೆ ಎಲ್ಲಾ ಮುಜಾವರ್‌ಗಳು ಒಟ್ಟಾಗಿ ಸೇರಿ ಮುಸ್ಲಿಂ ಸಂಪ್ರದಾಯದಂತೆ ಗಂಧೋತ್ಸವನ್ನು ಆಚರಣೆ ಮಾಡಲಾಯಿತು.

ಗಂಧೋತ್ಸವ ೧

ಕುರಾನ್‌ ಪಠಣೆ, ತಮಟೆ ವಾದ್ಯದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗಂಧೋತ್ಸವ ಮೆರವಣಿಗೆ ಸಾಗಿತು. ಪಕೀರರು ಹಾಗೂ ಗ್ರಾಮದ ಯುವಕರು ಗಂಧದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ನಂತರ ದರ್ಗಾಗೆ ತೆರಳಿ ಗಂಧವನ್ನು ಅರ್ಪಿಸಿದ ಪ್ರಮುಖರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Advertisements

ಗಂಧೋತ್ಸವದಲ್ಲಿ ದರ್ಗಾ ಮುಜಾವರಗಳಾದ ಪ್ಯಾರೆಜಾನ್, ಮಹಬೂಬ್ ಸಾಬ್, ಶಫಿವುಲ್ಲಾ, ರಫೀಕ್, ಜಿಯಾ ಉಲ್ಲಾ, ತಾಜ್ ಪೀರ್, ಜಬೀ, ಮುಬಾರಕ್, ಇಲಿಯಾಸ್, ರಹಮತ್, ದರ್ಗಾ ಅಧ್ಯಕ್ಷ ಅಮೀರ್ ಜಾನ್ ಸೇರಿದಂತೆ ದರ್ಗಾ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಮುಖಂಡರು, ಸ್ಥಳೀಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X