ಜೀರೊ ಟ್ರಾಫಿಕ್‌ ಜೊತೆಗೆ ಹಾರ-ತುರಾಯಿ ಸನ್ಮಾನ ಬೇಡ; ಸಿದ್ದರಾಮಯ್ಯ

Date:

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಅವರಿಗೆ ಹೋದಲೆಲ್ಲ ಅಭಿಮಾನಿಗಳು, ಹಾರ ತುರಾಯಿಗಳನ್ನು ಹಾಕಿ ಸನ್ಮಾನಿಸುತ್ತಿದ್ದಾರೆ. ಹಾಗಾಗಿ ಸನ್ಮಾನ ರೂಪದಲ್ಲಿ ಬರುವ ಹಾರ ತುರಾಯಿ ಸ್ವೀಕರಿಸದಿರಲು ಮತ್ತು ಜೀರೊ ಟ್ರಾಫಿಕ್‌ ಸೌಲಭ್ಯ ಬೇಡ ಎಂದು ನಿರ್ಧರಿಸಿದ್ದಾರೆ.

ಈ ಕುರಿತು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಸಿದ್ದರಾಮಯ್ಯ ಅವರು, “ನಾಳೆಯಿಂದ ಸಾರ್ವಜನಿಕರಿಂದ ಗೌರವ – ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು – ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ, ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ” ಎಂದು ಹೇಳಿದ್ದಾರೆ.

“ಪ್ರೀತಿ, ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ, ಅಭಿಮಾನ ಸದಾ ನನ್ನ ಮೇಲಿರಲಿ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜೀರೊ ಟ್ರಾಫಿಕ್ ಸೌಲಭ್ಯ ಹಿಂದಕ್ಕೆ

“ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೊ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಸಂವಿಧಾನ ನಮಗೆ ಹಕ್ಕು ತತ್ವಗಳನ್ನು ನೀಡಿದ್ದು, ಅವುಗಳ...

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿಗೆ ಆ್ಯಸಿಡ್​​ ಬೆದರಿಕೆ; ದೂರು ದಾಖಲು

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಅವರಿಗೆ ಆ್ಯಸಿಡ್​​ ಹಾಕುವುದಾಗಿ ಅಪರಿಚಿತರು...

ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂದು ಅವರೇ ಸಾಬೀತುಪಡಿಸಿದ್ದಾರೆ: ಡಿ ಕೆ ಶಿವಕುಮಾರ್

ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ...

ಕಾಂಗ್ರೆಸ್ ನಂತರ, ಸಿಪಿಐಗೆ ಐಟಿ ಇಲಾಖೆ ನೋಟಿಸ್

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾಗೆ (ಸಿಪಿಐ) ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್...