ಯಾರು ಯಾರಿಗೂ ಲಂಚ ಕೊಡುವ ಹಾಗಿಲ್ಲ – ತೆಗೆದುಕೊಳ್ಳುವ ಹಾಗಿಲ್ಲ: ಡಿಕೆ ಶಿವಕುಮಾರ್

Date:

Advertisements

ಯಾರು ಯಾರಿಗೂ ಲಂಚ ಕೊಡೋ ಹಾಗಿಲ್ಲ. ತಕೊಳೊ ಹಾಗಿಲ್ಲ. ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಭ್ರಷ್ಟಾಚಾರದ ವಿರುದ್ಧ ಜನರು ಮಾಹಿತಿ ನೀಡಲು ಫಲಕಗಳನ್ನು ಅಳವಡಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ರಾಮನಗರ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. “ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳಿದ್ದೀರಿ. ಜನರ ಸಮಸ್ಯೆಗಳನ್ನು ಪರಿಹರಿಸುವುದು ರಾಜಕಾರಣಿ ಮತ್ತು ಅಧಿಕಾರಿಗಳ ಕರ್ತವ್ಯ. ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು” ಎಂದು ಹೇಳಿದರು.

“ಬಿಜೆಪಿ ಆಡಳಿತವನ್ನು ಜನರು ನೋಡಿದ್ದಾರೆ. ರಾಜ್ಯಕ್ಕೆ ಭ್ರಷ್ಟಾಚಾರದ ರಾಜಧಾನಿ ಎನ್ನುವ ಹಣೆಪಟ್ಟಿಯನ್ನು ಬಿಜೆಪಿ ಸರ್ಕಾರ ತಂದಿದೆ. ಅದನ್ನು ಬದಲಾಯಿಸಬೇಕು. ಅಧಿಕಾರಿಗಳು ಲಂಚದಿಂದ ದೂರ ಉಳಿಯಬೇಕು” ಎಂದರು.

Advertisements

“ಎಲ್ಲ ಅಧಿಕಾರಿಗಳಿಗೂ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ ಮಾಡಬೇಕು. ಕಚೇರಿಯ ಎಲ್ಲ ಅಧಿಕಾರಿಗಳ ಮಾಹಿತಿಯನ್ನು ಅವರ ಫೋಟೋ, ಹೆಸರು, ವಿಳಾಸಗಳೊಂದಿಗೆ ಪುಸ್ತಕ ಮಾಡಿಡಬೇಕು” ಎಂದು ಅವರು ಹೇಳಿದರು.

“ಒಂದು ತಿಂಗಳು ಅವಕಾಶ ಕೊಡುತ್ತೇನೆ. ಅಷ್ಟದಲ್ಲಿ ಎಲ್ಲ ಅಧಿಕಾರಿಗಳು ಹೆಡ್‌ ಕ್ವಾಟ್ರಸ್‌ನಲ್ಲಿ ಮನೆ ಮಾಡಿಕೊಳ್ಳಬೇಕು. ಗ್ರಾಮ ಪಂಚಾಯತಿಯಿಂದ ಹಿಡಿದು, ಉನ್ನತ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ಯಾರಾದರೂ ಹೆಡ್‌ ಕ್ವಾಟ್ರಸ್‌ ಬಿಟ್ಟು ಹೋದರೆ, ಜಿಲ್ಲಾಧಿಕಾರಿಗಳು ನಮಗೆ ಮಾಹಿತಿ ನೀಡಬೇಕು” ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X