ಸಂಘಟನೆಯವರು ನಾಲ್ಕೈದು ದಿನ ಬರುತ್ತಾರೆ, ಆಮೇಲೆ ನಮಗೆ ಯಾರೂ ಇರಲ್ಲ: ಸುಹಾಸ್ ಶೆಟ್ಟಿ ತಂದೆ

Date:

Advertisements

“ಸಂಘಟನೆಯವರು ನಾಲ್ಕೈದು ದಿನ ಬರುತ್ತಾರೆ, ಮಾತನಾಡಿಸುತ್ತಾರೆ. ಆಮೇಲೆ ನಮಗೆ ಯಾರೂ ಇರಲ್ಲ” ಎಂದು ಕೊಲೆಯಾದ ರೌಡಿಶೀಟರ್, ಸಂಘಪರಿವಾರದ ನಾಯಕ ಸುಹಾಸ್ ಶೆಟ್ಟಿ ತಂದೆ ಮಹೇಶ್ ಶೆಟ್ಟಿ ಅವರು ಹೇಳಿದ್ದಾರೆ.

ನಿನ್ನೆ ಸುಹಾಸ್ ಶೆಟ್ಟಿ ಅಂತ್ಯ ಸಂಸ್ಕಾರ ನಡೆಯಿತು. ಇದಕ್ಕೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುಹಾಸ್ ಶೆಟ್ಟಿ ತಂದೆ, “ಯುವಕರು ಹಿಂದೂ ಹಿಂದೂ ಎಂದುಕೊಂಡು ಹಿಂದುತ್ವದ ಹಿಂದೆ ಹೋಗುತ್ತಾರೆ. ಆದರೆ ಇಂತಹ ಘಟನೆ ನಡೆದಾಗ ಯಾರೂ ಇರುವುದಿಲ್ಲ” ಎಂದರು.

ಇದನ್ನು ಓದಿದ್ದೀರಾ? ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: 5ಕ್ಕೂ ಹೆಚ್ಚು ಆರೋಪಿಗಳು ಪೊಲೀಸ್ ವಶಕ್ಕೆ?

Advertisements

“ನಮ್ಮ ಮಗನಿಗೆ ಈಗ 31 ವರ್ಷ. ಅವನೇ ನಮ್ಮ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ. ಈಗ ಆತನ ಕೊಲೆಯ ಬಳಿಕ ನಾವು ಜೀವನ ಪೂರ್ತಿ ಕೊರಗಬೇಕು” ಎಂದು ಅಳಲು ತೋಡಿಕೊಂಡರು.

“ಕೆಲವು ಹಿಂದುತ್ವ ಸಂಘಟನೆಯ ಮುಖಂಡರುಗಳು ನಾಲ್ಕೈದು ದಿನ ನಿಮ್ಮ ಜೊತೆ ನಾವಿದ್ದೇವೆ ಎಂದು ಹೇಳಿಕೊಂಡು ಬರುತ್ತಾರೆ. ಆದರೆ ಎಲ್ಲ ಆದ ಮೇಲೆ ಅವರೂ ಇರಲ್ಲ, ಬೇರೆ ಯಾರೂ ಇರಲ್ಲ” ಎಂದು ಹೇಳಿದರು.

ಹಾಗೆಯೇ “ನನ್ನ ಮಗನ ಸಾವಿಗೆ ನ್ಯಾಯ ಬೇಕು. ಸದ್ಯ ಇರುವ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ” ಎಂದರು.

ಇನ್ನು ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳ‌ ಗುಂಪಿನಿಂದ ಕೊಲೆಗೀಡಾದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 5ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹಿಂದೂಗಳು ಕೂಡ ಭಾಗಿಯಾಗಿರುವುದಾಗಿ ಬೆಳಕಿಗೆ ಬಂದಿದೆ ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ‌.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X