ಚಿಕ್ಕಬಳ್ಳಾಪುರ | ಬಿಸಿಯೂಟ ನೌಕರರ ವೇತನ ಹೆಚ್ಚಿಸದ ಕೇಂದ್ರದ ವಿರುದ್ಧ ಪ್ರತಿಭಟನೆ

Date:

Advertisements

2014 ರಿಂದ ಈವರೆಗೆ ಕೇಂದ್ರ ಸರಕಾರ ಬಿಸಿಯೂಟ ನೌಕರರ ಗೌರವಧನ ಹೆಚ್ಚಳ ಮಾಡಿಲ್ಲ. ಕೇಂದ್ರ ಸರಕಾರ 26 ಸಾವಿರಕ್ಕೆ ಗೌರವಧನ ಹೆಚ್ಚಿಸಬೇಕು. ಅಲ್ಲಿಯವರೆಗೆ ರಾಜ್ಯ ಸರಕಾರವೇ ಪಾಂಡಿಚೆರಿ ಹರಿಯಾಣ, ತಮಿಳುನಾಡು ಮಾದರಿಯಲ್ಲಿ 7 ರಿಂದ 12 ಸಾವಿರ ವೇತನ ಕೊಡಬೇಕು ಎಂದು ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಪದಾಧಿಕಾರಿಗಳು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು.

ಸಿಐಟಿಯು ನೇತೃತ್ವದಲ್ಲಿ ಗುರುವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ನೌಕರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳ, ಮಧ್ಯಾನದ ಬಿಸಿಯೂಟ ಯೋಜನೆ ಪ್ರಾರಂಭವಾಗಿ 24 ವರ್ಷಗಳು ಕಳೆಯುತ್ತಿವೆ. ಲಕ್ಷಾಂತರ ಮಕ್ಕಳಿಗೆ ಹಾಲು ನೀಡಿ, ಶಾಲೆಯನ್ನು ಸ್ವಚ್ಛಗೊಳಿಸಿ, ಬಿಸಿ ಬಿಸಿ ಆಹಾರ ನೀಡಿ, ಶಾಲೆಯಲ್ಲಿ ನೀಡುವ ದಿನನಿತ್ಯದ ಎಲ್ಲಾ ಕೆಲಸ ಮಾಡಿ, ಶೈಕ್ಷಣಿಕ ಆಸಕ್ತಿ ಮೂಡಿಸುವಲ್ಲಿ ತಾಯ್ತತನದ ಪ್ರೀತಿ ನೀಡುವ ಪರಿಶ್ರಮ ಕೆಲಸವಾಗಿದೆ. ಇಂತಹ ಕೆಲಸ ಮಾಡುತ್ತಿರುವ ನೌಕರರಿಗೆ ಕನಿಷ್ಠ ವೇತನವನ್ನೂ ನೀಡದೆ ಶೋಷಣೆ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.

ಅಕ್ಷರ ದಾಸೋಹ ಮನವಿ

ಮೇಲ್ನೋಟಕ್ಕೆ ಸರ್ಕಾರದ ಸುತ್ತೋಲೆಯಲ್ಲಿ 4 ಗಂಟೆ ಕೆಲಸವೆಂದು ನಿಗದಿಯಾಗಿದೆ. ಆದರೆ, ಪ್ರತಿ ಶಾಲೆಯಲ್ಲಿ ದಿನಕ್ಕೆ 6 ಗಂಟೆ ಕೆಲಸ ಮಾಡುತ್ತೇವೆ. ಅಜೀಂ ಪ್ರೇಮ್‌ಜಿ ಪ್ರತಿಷ್ಠಾನ ನೀಡುತ್ತಿರುವ ಕೋಳಿ ಮೊಟ್ಟೆ ಬೇಯಿಸಿ ಸುಲಿದು ಮಕ್ಕಳಿಗೆ ಕೊಡುವುದು, ಆಹಾರ ಪದಾರ್ಥಗಳನ್ನು ಸ್ವಚ್ಛಗೊಳಿಸುವುದು, ಕೆಲವೆಡೆ ನೂರಾರು ಮಕ್ಕಳಿಗೆ ಚಪಾತಿ ಮಾಡಿಕೊಡುವುದು ಶ್ರಮದಾಯಕ ಕೆಲಸವಾಗಿದೆ. ಬರಗಾಲ ಬೇಸಿಗೆ ಕಾಲದಲ್ಲಿ ಕೆಲಸ ಮಾಡಬೇಕಾಗುತ್ತದೆ. ಆದ್ದರಿಂದ ಕನಿಷ್ಠ ವೇತನ 6 ಸಾವಿರ ನೀಡಲೇಬೇಕು ಎಂದು ಒತ್ತಾಯಿಸಿದರು.

Advertisements

ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವುದನ್ನು ನಿಲ್ಲಿಸಬೇಕು. ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು. ಖಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು. ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು ಎಂದರು.

ಅಕ್ಷರ ದಾಸೋಹ

ಶಾಲೆಗಳಲ್ಲಿ ಗ್ರೂಪ್ “ಡಿ” ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ, ಕೈತೊಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆಂದು ನೇಮಿಸಿ ನೇಮಕಾತಿ ಆದೇಶ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು. ಶಾಲಾ ಅವಧಿಯ ನಂತರ ನರೆಗಾ ಯೋಜನೆ ಅಡಿ ಶಾಲಾ ಕೈತೊಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಅಂಬೇಡ್ಕರ್ ವಿವಾದ | ಶಾ ಹೇಳಿಕೆಗೆ ಚಿಕ್ಕಬಳ್ಳಾಪುರ ದಲಿತ ಮುಖಂಡರ ವ್ಯಾಪಕ ಖಂಡನೆ

ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಎರಡು ಜನ ಅಡುಗೆಯವರು ಇರಲೇಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿ 18ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಮುನಿಕೃಷ್ಣಪ್ಪ, ಸಿದ್ದಗಂಗಪ್ಪ, ದೇವರಾಜು, ಶ್ರೀನಿವಾಸ್‌, ರಾಜಮ್ಮ, ಕಾಂತಪ್ಪ ಸೇರಿದಂತೆ ನೂರಾರು ಮಂದಿ ಅಕ್ಷರ ದಾಸೋಹ ನೌಕರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X