ತುಮಕೂರು | ಭೂಮಿ, ವಸತಿ ಕೊಡದೆ ನಮ್ಮ ವೋಟು ಕೊಡೆವು; ಅಲೆಮಾರಿ ಕುಟುಂಬಗಳ ಎಚ್ಚರಿಕೆ

Date:

  • ಗುಡಿಸಲಿನ ಬಾಗಿಲಿಗೆ ಕರಪತ್ರ, ಗ್ರಾಮದಲ್ಲಿ ಫ್ಲೆಕ್ಸ್‌ ಅಳವಡಿಕೆ
  • ಭೂಮಿ ವಸತಿ ನೀಡುವ ಕರಾರಿನೊಂದಿಗೆ ಬಂದಲ್ಲಿ ಮತ

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಮತ್ತು ಇತರೆ ಗ್ರಾಮಗಳ ಅಲೆಮಾರಿ ಕುಟುಂಬಗಳು ತಮ್ಮ ಬೇಡಿಕೆ ಈಡೇರದೆ ಮತದಾನ ಮಾಡುವುದಿಲ್ಲವೆಂದು ಘೋಷಿಸಿವೆ. ಅಲ್ಲಿನ ಜನರು ತಮ್ಮ ಪ್ರತಿ ಗುಡಿಸಲಿನಲ್ಲೂ ‘ಭೂಮಿ, ವಸತಿ ಕೊಡದೇ ನಮ್ಮ ಓಟು ಕೊಡೆವು’ ಎಂಬ ಕರಪತ್ರ ಅಳವಡಿಸಿದ್ದಾರೆ.

- Advertisement -

ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹನುಮಂತನಗರದ ರೇಷ್ಮೆ ಇಲಾಖೆಯ ಕಟ್ಟಡದಲ್ಲಿ ತಾತ್ಕಾಲಿಕವಾಗಿ ನೆಲೆಸಿರುವ ಕೆರೆಕೋಡಿ, ನಾಗವಲ್ಲಿ ಗ್ರಾಮದ ಅಲೆ ಮಾರಿಗಳು, ಕೊರಟಗೆರೆ ತಾಲೂಕಿನ ಅಮಲಾಪುರ, ಹುಲಿಕುಂಟೆ ಗ್ರಾಮದ ಅಲೆಮಾರಿ ಕುಟುಂಬಗಳು, ಇರಕಸಂದ್ರ ಗ್ರಾಮದ ಎಲ್ಲ ಜಾತಿಯ ವಸತಿ ರಹಿತರು ತಮ್ಮ ವಾಸ ಸ್ಥಳದಲ್ಲಿ ಫ್ಲೆಕ್ಸ್‌ ಅಳವಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅನೇಕ ವರ್ಷಗಳಿಂದ ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಅಲೆಮಾರಿ ಕುಟುಂಬಗಳು ಸೇರಿದಂತೆ ತಾಲೂಕಿನ ಇತರೆ ಹೋಬಳಿಯ ಅಲೆಮಾರಿ ಕುಟುಂಬಗಳು ನಿವೇಶನ ಮತ್ತು ವಸತಿಗಾಗಿ ಜನಪ್ರತಿನಿಧಿಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಅಲೆದು ಕಂಗಾಲಾಗಿದ್ದೇವೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

Koratagere

ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಅಥವಾ ಮುಖಂಡರು ನಮ್ಮಲ್ಲಿ ಮತ ಕೇಳಲು ಬಂದಾಗ, ನಮ್ಮ ಮತಗಳನ್ನು ಹಣ, ಹೆಂಡಕ್ಕೆ ಮಾರಿಕೊಳ್ಳಬಾರದೆಂದು ತೀರ್ಮಾನಿಸಿದ್ದೇವೆ. ಜೊತೆಗೆ ಭೂಮಿ, ವಸತಿ ಕೊಡದೆ ನಮ್ಮ ಮತಗಳನ್ನು ನೀಡಬಾರದೆಂದು ನಿರ್ಧರಿಸಿದ್ದೇವೆ ಎಂದು ಘೋಷಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾಮಪತ್ರ ಸಲ್ಲಿಕೆವರೆಗೂ ಮತದಾರರ ಪಟ್ಟಿ ಪರಿಷ್ಕರಿಸಬಹುದು: ಹೈಕೋರ್ಟ್‌

ತಾವು ವಾಸವಿರುವ ಜಾಗಗಳಲ್ಲಿ ಫ್ಲೆಕ್ಸ್ ಮತ್ತು ಮನೆಗಳ ಬಾಗಿಲುಗಳಿಗೆ ಪ್ಲೇ ಕಾರ್ಡ್ ಗಳನ್ನು ಹಾಕಿ, “ಭೂಮಿ ವಸತಿ ಕೊಡದೆ ನಮ್ಮ ವೋಟು ಕೊಡೆವು” ಎಂಬ ಅಭಿಯಾನದೊಂದಿಗೆ ಹೋರಾಟ ಪ್ರಾರಂಭಿಸಿದ್ದಾರೆ. ನಮ್ಮ ಮತಗಳು ಬೇಕಾದವರು ಗೆದ್ದ ನಂತರ ಭೂಮಿ ವಸತಿ ನೀಡುತ್ತೇವೆಂದು ಕರಾರಿನೊಂದಿಗೆ ಬಂದಲ್ಲಿ ಹಣ, ಹೆಂಡ ಪಡೆಯದೆ ನಾವು ಮತ ನೀಡುತ್ತೇವೆ ಎಂದು ಹುಲಿಕುಂಟೆ ಗ್ರಾಮದ ನಿವೇಶನ ಮತ್ತು ವಸತಿ ರಹಿತ ಅಲೆಮಾರಿ ಕುಟುಂಬಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...