ವಿಜಯಪುರ | ಬಿಜೆಪಿ ಅಧಿಕಾರದಲ್ಲೂ ವಕ್ಫ್‌ ಪರ ನೋಟಿಸ್ ನೀಡಲಾಗಿದೆ:‌ ಸಚಿವ ಎಂ ಬಿ ಪಾಟೀಲ್

Date:

Advertisements

ಬಿಜೆಪಿ ಅಧಿಕಾರಾವಧಿಯಲ್ಲೂ ವಕ್ಫ್ ಪರ ನೋಟಿಸ್ ‌ನೀಡಲಾಗಿದೆ. ಪಹಣಿಯಲ್ಲಿ ವಕ್ಫ್ ಎಂದು ನಮೂದು ಮಾಡಲಾಗಿದೆ. ಅವರ ಕಾಲದಲ್ಲಿ ಗೆಜೆಟ್ ಬಗ್ಗೆ ಹೋರಾಟ ಮಾಡಿಲ್ಲ? ಬಿಜೆಪಿಯ 2014ರ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಪರ ಭರವಸೆ ನೀಡಿದ್ದರು. ಸಚಿವೆ ಶೋಭಾ ಕರಂದ್ಲಾಜೆ ಸಂಸತ್‌ನಲ್ಲಿ ವಕ್ಫ ಪರವಾಗಿ ಪ್ರಶ್ನೆ ಕೇಳಿದ್ದರು. ನಂತರ ವಕ್ಫ ವಿರುದ್ಧ ಹೋರಾಟ ಮಾಡಿದ್ದಾರೆ. ಇದು ಅವರ ದ್ವಂದ್ವ ನೀತಿ, ರಾಜಕೀಯ ಬೇಳೆ ಬೇಯಿಸಿಕೊಳ್ಳುವ ತಂತ್ರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದರು.

ವಿಜಯಪುರ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ವಕ್ಫ್ ವಿಚಾರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಧ್ಯೆ ಪೈಪೋಟಿ ನಡೆದಿದೆ. ವಕ್ಫ್ ಹೋರಾಟದ ಕ್ರೆಡಿಟ್‌ಗಾಗಿ ಹೋರಾಟ ನಡೆದಿದೆ” ಎಂದು ಸಚಿವ ಎಂಬಿ ಪಾಟೀಲ್ ಕುಟುಕಿದರು.

ಇದನ್ನೂ ಓದಿ : ವಿಜಯಪುರ | ಇಂದಿರಾಗಾಂಧಿ ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವಕಂಡ ಧೀಮಂತ ನಾಯಕಿ: ಮಲ್ಲಿಕಾರ್ಜುನ ಎಸ್ ಲೋಣಿ

Advertisements

ವಕ್ಫ್ ಕಾಯ್ದೆ ವಿರೋಧಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಟಾಂಗ್ ಕೊಟ್ಟ ಕೈಗಾರಿಕಾ ಸಚಿವ ಎಂಬಿ ಪಾಟೀಲ್, “ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದು ಏನು? 1974ರಿಂದ ಇಲ್ಲಿಯವರೆಗೆ ಏಕೆ ಹೋರಾಟ ಮಾಡಿಲ್ಲ” ಎಂದು ಪ್ರಶ್ನಿಸಿದರು.

ಚುನಾವಣಾ ಫಲಿತಾಂಶ ಪ್ರಕಟ ವಿಚಾರವಾಗಿ ಮಾತನಾಡಿದ ಅವರು, “ಉಪ ಚುನಾವಣೆ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಕಾಂಗ್ರೆಸ್ ಗೆಲುವು ಸಾಧಿಸಲಿದೆಯೆಂಬ ವಿಶ್ವಾಸವಿದೆ” ಎಂದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಉದ್ಯಮಿ ಗೌತಮ್ ಅದಾನಿ ಮೇಲೆ ಅಮೆರಿಕಾ ಕೋರ್ಟ್‌ನಿಂದ ವಾರೆಂಟ್ ಜಾರಿ ವಿಚಾರವಾಗಿ ಮಾತನಾಡಿದ ಸಚಿವರು, “ಯಾರಾದರೇನು? ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಕ್ರಮ ಆಗುತ್ತದೆ. ಅದೊಂದು ಕಾನೂನು ಪ್ರಕ್ರಿಯೆ” ಎಂದು ಎಂ ಬಿ ಪಾಟೀಲ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X