ಬೆಳ್ತಂಗಡಿ | ಕೀಟ ನಿರ್ವಹಣಾ ತಂತ್ರಗಳಿಗಾಗಿ ʼಎನ್‌ಪಿಎಸ್‌ಎಸ್‌ʼ ಅಪ್ಲಿಕೇಶನ್!

Date:

Advertisements

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ರೈತರ ಬಳಕೆಗಾಗಿ ʼರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ(ಎನ್‌ಪಿಎಸ್‌ಎಸ್‌)ʼ ಎಂಬ ಹೊಸ ಅಪ್ಲಿಕೇಶನ್ ಒಂದನ್ನು ಅಭಿವೃದ್ಧಿಪಡಿಸಿದ್ದು, ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಜನರಿಗೆ ಇದರ ಕುರಿತಾಗಿ ಮಾಹಿತಿ ಒದಗಿಸಲು ರಾಜ್ಯಾದ್ಯಂತ ಕಾರ್ಯಾಗಾರಗಳನ್ನು ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೃಷಿ ತರಬೇತಿ ಕೇಂದ್ರದಲ್ಲಿ ಕಾರ್ಯಾಗಾರ ನಡೆಸಿದ್ದು, ಈ ಅಪ್ಲಿಕೇಶನ್, ಕೃತಕ ಬುದ್ಧಿಮತ್ತೆ(ಎಐ) ಮತ್ತು ಯಂತ್ರ ಕಲಿಕೆ(ಎಂಎಲ್)ಯಂತಹ ಸುಧಾರಿತ ತಂತ್ರಜ್ಞಾನಗಳನ್ನು ಸಂಯೋಜಿಸುವ ಮೂಲಕ ನಿಜಾವಧಿಯ ಕೀಟ ಮೇಲ್ವಿಚಾರಣೆ ಕುರಿತು ಸಮಯೋಚಿತ ಸಲಹೆಗಳು ಮತ್ತು ಪರಿಣಾಮಕಾರಿ ತಂತ್ರಗಳನ್ನು ನೀಡುತ್ತದೆ ಎಂದು ತಿಳಿಸಿದರು.

ಭಾರತ ಸರ್ಕಾರದ ಅಂಗಸಂಸ್ಥೆಯಾದ  ಪ್ರಾದೇಶಿಕ ಕೇಂದ್ರ ಸಮಗ್ರ ಕೀಟ ನಿರ್ವಹಣಾ ಕೇಂದ್ರ, ಬೆಂಗಳೂರು(ಆರ್‌ಸಿಐಪಿಎಂಸಿ) ಹಾಗೂ ಸಸ್ಯ ಸಂರಕ್ಷಣಾ, ಸಂಘರೋಧ ಮತ್ತು ಸಂಗ್ರಹಣೆ ನಿರ್ದೇಶನಾಲಯ ಭಾರತ ಸರ್ಕಾರ(ಡಿಪಿಪಿಕ್ಯೂಎಸ್‌)ಗಳು ಜಂಟಿಯಾಗಿ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ರಾಜ್ಯಾದ್ಯಂತ ಜನರಿಗೆ ಇದರ ಕುರಿತಾಗಿ ಮಾಹಿತಿ ಒದಗಿಸಲು ಕಾರ್ಯಾಗಾರಗಳನ್ನು ನಡೆಸುತ್ತಿದೆ. ಅದರಂತೆ ದಾವಣಗೆರೆ, ಉಡುಪಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕಾರ್ಯಾಗಾರ ನಡೆಸಲಾಗಿದ್ದು, ರಾಜ್ಯದ ಇತರೆ ಜಿಲ್ಲೆಗಳಲ್ಲೂ ನಡೆಸುವ ಯೋಜನೆಯಲ್ಲಿದೆ.

beb

ಎನ್‌ಪಿಎಸ್‌ಎಸ್‌ ಅಪ್ಲಿಕೇಶನ್‌, ಕೀಟ ಸಂಭವವನ್ನು ಆರಂಭದಲ್ಲೇ ಪತ್ತೆಹಚ್ಚಿ ತುರ್ತು ಕ್ರಮದ ಬಗ್ಗೆ ಮಾಹಿತಿ ಒದಗಿಸುತ್ತದೆ. ಈ ಮೂಲಕ ರೈತರಿಗೆ ಕೀಟ ಕಣ್ಗಾವಲು ಹಾಗೂ ಕೀಟ ನಿರ್ವಹಣೆ ಕುರಿತ ತಜ್ಞರ ಸಲಹೆಯನ್ನು ಸುಲಭ ಮತ್ತು ಸಕಾಲದಲ್ಲಿ ಪಡೆಯಬಹುದಾಗಿದೆ. ಅಲ್ಲದೆ ನುರಿತ ಕೃಷಿ ನಿರ್ವಾಹಕರು, ತರಬೇತಿ ಹೊಂದಿದ ಸಂಪನ್ಮೂಲ ವ್ಯಕ್ತಿಗಳು ಮತ್ತು ರೈತರು ಸಲ್ಲಿಸಿದ ನಿಜ ಅವಧಿಯ ಡೇಟಾವನ್ನು ಬಳಸಿಕೊಂಡು, ಕೀಟದಿಂದ ಉಂಟಾಗಲಿರುವ ಬೆಳೆ ನಷ್ಟವನ್ನು ಗುರುತಿಸಿ ಕೂಡಲೇ ಕಡಿಮೆ ಮಾಡಬಹುದಾಗಿದೆ. ಜತೆಗೆ ಇದು ವಿವಿಧ ಸಾರ್ವಜನಿಕ ಏಜೆನ್ಸಿಗಳಿಗೆ ರಾಷ್ಟ್ರೀಯ ಕೀಟ ಸನ್ನಿವೇಶದ ಭಂಡಾರವನ್ನೇ ಒದಗಿಸುತ್ತದೆ ಮತ್ತು ಕೀಟಗಳ ಹಾಟ್‌ಸ್ಪಾಟ್‌ಗಳನ್ನು ಗುರುತಿಸಲು ಸಹಾಯ ಮಾಡುತ್ತದೆ. ಆ ಮೂಲಕ ಸಸ್ಯ ಸಂರಕ್ಷಣಾ ಕ್ಷೇತ್ರದಲ್ಲಿ  ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಹಕಾರಿಯಾಗಿದೆ.

ಈ ಸುದ್ದಿ ಓದಿದ್ದೀರಾ?: ತುಮಕೂರು | ಆರ್‌ಟಿಒ ಬ್ರೋಕರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X