ಶಿವಮೊಗ್ಗ | ಮಹಿಳಾ ಸುರಕ್ಷತೆಯ ಅರಿವು ಕಾರ್ಯಕ್ರಮ

Date:

Advertisements

ಮಹಿಳಾ ಸಿಬ್ಬಂದಿಗಳಿಗೆ ಮಹಿಳಾ ಸುರಕ್ಷತೆಯ ಅರಿವು ಮೂಡಿಸುವ ಮೂಲಕ ಕಾನೂನಿನಲ್ಲಿ ಮಹಿಳೆ ಹಾಗೂ ಮಕ್ಕಳಿಗಿರುವ ವಿಶೇಷ ಹಕ್ಕುಗಳ ಬಗ್ಗೆ ಮತ್ತು ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನೀಷೇಧ ಕಾಯ್ದೆಗಳ ಬಗ್ಗೆ ಪಿಎಸ್ಐ ಸ್ವಪ್ನ ಮಾಹಿತಿ ನೀಡಿದರು.

ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ರಿಲಯನ್ಸ್ ಮಾರ್ಟ್‌ನಲ್ಲಿ ರಾಣಿ ಚೆನ್ನಮ್ಮ ಪಡೆ ಉಸ್ತುವಾರಿಗಳು ಮಹಿಳಾ ಸಿಬ್ಬಂದಿಗಳಿಗಾಗಿ ಹಮ್ಮಿಕೊಂಡಿದ್ದ ಮಹಿಳಾ ಸುರಕ್ಷತೆಯ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಾರ್ವಜನಿಕ ಸ್ಥಳದಲ್ಲಿ ನಿಮಗೆ ಯಾವುದೇ ಸಮಸ್ಯೆ, ಉಪಟಳ, ಕಿರಿಕಿರಿ ನೀಡುವವರಿದ್ದರೆ ಕೂಡಲೇ 112 ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಮಾಹಿತಿ ನೀಡಿದರೆ ತೊಂದರೆ ನೀಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.

Advertisements

“ಸಾಮಾಜಿಕ ಜಾಲತಾಣ, ಆನ್‌ಲೈನ್ ಚಾಟಿಂಗ್, ಫೇಸ್ ಬುಕ್, ಇನ್‌ಸ್ಟಾಗ್ರಾಂ ಬಳಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ನಿಮ್ಮ ಖಾಸಗಿ ಮಾಹಿತಿ, ಫೋಟೋಗಳನ್ನು ಹಂಚಿಕೊಳ್ಳಬೇಡಿ. ಅವುಗಳನ್ನು ನಿಮ್ಮ ವಿರುದ್ಧವೇ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ” ಎಂದು ಎಚ್ಚರಿಕೆ ನೀಡಿದರು.

“ಯಾರೇ ಆಗಲಿ, ತಮ್ಮನ್ನು ಬ್ಯಾಂಕ್ ಅಧಿಕಾರಿಗಳೆಂದು ಹೇಳಿಕೊಂಡು ನಿಮಗೆ ಕರೆ ಮಾಡಿ, ನಿಮ್ಮ ಬ್ಯಾಂಕ್ ಅಕೌಂಟ್ ನಂಬರ್, ಎಟಿಎಂ ನಂಬರ್, ಎಟಿಎಂ ಪಿನ್ ನಂಬರ್ ಕೊಡಿ ಎಂದು ಕೇಳಿದಾಗ ಯಾವುದೇ ಕಾರಣಕ್ಕೂ ಕೊಡಬೇಡಿ. ಒಂದು ವೇಳೆ ಮಾಹಿತಿ ನೀಡಿದ್ದೇ ಆದಲ್ಲಿ, ನಿಮ್ಮ ಖಾತೆಯಲ್ಲಿರುವ ಹಣವನ್ನು ವರ್ಗಾವಣೆ ಮಾಡಿಕೊಂಡು ನಿಮಗೆ ಮೋಸ ಮಾಡುತ್ತಾರೆ. ಯಾವುದೇ ಬ್ಯಾಂಕ್ ಅಧಿಕಾರಿಗಳು ನಿಮ್ಮ ಖಾಸಗಿ ಅಥವಾ ವೈಯಕ್ತಿಕ ಮಾಹಿತಿಗಳನ್ನು ಕೇಳುವುದಿಲ್ಲ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ನಂಜನಗೂಡು | ಆಕಳು ಕರುವಿನ ಬಾಲ ಕತ್ತರಿಸಿ ದುಷ್ಕರ್ಮಿಗಳು ಪರಾರಿ

“ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣ ಮಾಡುವಾಗ ಹಾಗೂ ಸಂತೆ, ಜಾತ್ರೆ, ಮಾರುಕಟ್ಟೆ, ಬಸ್‌ ಹಾಗೂ ರೈಲ್ವೆ ನಿಲ್ದಾಣದಂತಹ ಜನನಿಬಿಡ ಸ್ಥಳಗಳಲ್ಲಿ, ನಿಮ್ಮ ಬೆಲೆ ಬಾಳುವ ಆಭರಣ ಹಾಗೂ ನಿಮ್ಮ ವಸ್ತುಗಳ ಮೇಲೆ ಗಮನವಿರಲಿ. ಕಳ್ಳರು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳ್ಳತನ ಮಾಡುವ ಸಾಧ್ಯತೆ ಇರುತ್ತದೆ. ನಿಮ್ಮ ವಸ್ತುಗಳ ಮೇಲೆ ಗಮನ ಇರಬೇಕು” ಎಂದರು.

“ಎಲ್ಲರೂ ಕಾನೂನನ್ನು ಪಾಲಿಸಿ, ಕಾನೂನನ್ನು ಗೌರವಿಸಿದಾಗ ಕಾನೂನು ಕೂಡ ನಿಮ್ಮನ್ನು ರಕ್ಷಿಸುತ್ತದೆ. ನಿಮ್ಮ ಸುರಕ್ಷತೆಯೇ ನಮ್ಮ ಹೊಣೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚೆನ್ನಮ್ಮ ಪಡೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಹಾಗೂ ರಿಲಯನ್ಸ್ ಮಾರ್ಟ್‌ನ ಅಧಿಕಾರಿ, ಸಿಬ್ಬಂದಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X