ಹಾವೇರಿ | ಬರದ ನಡುವೆಯೂ ಬೆಳೆದಿದ್ದ ಈರುಳ್ಳಿ ಕಳವು; ಕಣ್ಣೀರು ಹಾಕಿದ ರೈತ ಮಾದೇವಪ್ಪ

Date:

Advertisements

ಈ ಹಿಂದೆ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಮತ್ತೆ ಏರಿಕೆಯಾಗಿದೆ. ಈರುಳ್ಳಿ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಜಮೀನಿಗೆ ನುಗ್ಗಿ ಈರುಳ್ಳಿ ಕದ್ದೊಯ್ದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದ್ದು, ಈರುಳ್ಳಿ ಬೆಳೆದಿದ್ದ ರೈತ ಕಣ್ಣೀರು ಹಾಕಿದ್ದಾರೆ.

ಹಾವೇರಿ ತಾಲೂಕಿನ ಯಲಹಚ್ಚ ಗ್ರಾಮದ ರೈತ ಮಾದೇವಪ್ಪ ಹಳೇರಿತ್ತಿ ಎಂಬವರು ತಮ್ಮ ಜಮೀನಿನಲ್ಲಿ ಈರುಳ್ಳಿ ಬೆಳೆದಿದ್ದರು. ಉತ್ತಮ ಇಳುವರಿ ಇದೆ. ಬೆಲೆ ಏರಿಕೆಯಿಂದ ಒಳ್ಳೆಯ ಲಾಭ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ, ರಾತ್ರೋರಾತ್ರಿ ಜಮೀನಿಗೆ ನುಗ್ಗಿರುವ ಖದೀಮರು ಈರುಳ್ಳಿಯನ್ನು ಕದ್ದೊಯ್ದಿದ್ದಾರೆ.

ಎರಡು ಎಕರೆ ಜಮೀನಿನಲ್ಲಿ ಮಾದೇವಪ್ಪ ಈರುಳ್ಳಿ ಬೆಳೆದಿದ್ದರು. ಇತ್ತೀಚೆಗೆ, ಮೊದಲ ಹಂತದ ಕಟಾವು ಮಾಡಿ, ಮಾರಾಟ ಮಾಡಿದ್ದರು. ಉತ್ತಮ ಲಾಭ ಪಡೆದಿದ್ದರು. ಜಮೀನಿನಲ್ಲಿರುವ ಈರುಳ್ಳಿಯಿಂದ ಇನ್ನೂ ಸುಮಾರು 80 ಸಾವಿರದವರೆಗೆ ಆದಾಯ ಬರುತ್ತದೆ ಎಂಬ ಭರವಸೆಯೂ ಅವರಲ್ಲಿತ್ತು. ಆದರೆ, ಕಳ್ಳರು ಅವರ ಶ್ರಮವನ್ನು ಲೂಟಿ ಮಾಡಿದ್ದಾರೆ.

Advertisements

ಈರುಳ್ಳಿ ಬೆಳೆಯನ್ನು ಕಾಯುತ್ತಾ ಮಾದೇವಪ್ಪ ಜಮೀನಿನಲ್ಲೇ ಮಲಗುತ್ತಿದ್ದರು. ಆದರೆ, ಬೇರೆಡೆ ಇದ್ದ ಜಮೀನಿನಲ್ಲಿ ಮೆಕ್ಕೆಜೋಳವನ್ನೂ ಬೆಳೆದಿದ್ದ ಮಾದೇವಪ್ಪ, ಜೋಳವನ್ನು ಕಟಾವು ಮಾಡಿದ್ದ ಕಾರಣ, ಅದನ್ನು ಕಾಯಲು ಹೋಗಿದ್ದರು. ಈ ಸಮಯಕ್ಕಾಗಿ ಕಾಯುತ್ತಿದ್ದ ಖದೀಮರು ಈರುಳ್ಳಿಯನ್ನು ಕದ್ದೊಯ್ದಿದ್ದಾರೆ.

ಮರುದಿನ ಬೆಳಗ್ಗೆ ಜಮೀನಿಗೆ ಬಂದಾಗ ಈರುಳ್ಳಿ ಕಳುವಾಗಿರುವುದು ಗೊತ್ತಾಗಿದೆ. ದಪ್ಪ ಗಾತ್ರದ ಈರುಳ್ಳಿಯನ್ನು ಕದ್ದಿರುವ ಕಳ್ಳರು, ಸಣ್ಣ ಈರುಳ್ಳಿಗಳನ್ನು ಜಮೀನಿನಲ್ಲೇ ಬಿಟ್ಟು ಹೋಗಿದ್ದಾರೆ. ಬರಗಾಲ, ವಿದ್ಯುತ್ ಸಮಸ್ಯೆಯ ನಡುವೆಯೂ ಈರುಳ್ಳಿ ಬೆಳೆದಿದ್ದ ರೈತ ಕಣ್ಣೀರು ಹಾಕಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X