ರಾಯಚೂರು | ಆನ್‌ಲೈನ್‌ ಬೆಟ್ಟಿಂಗ್ ಗೇಮ್‌ನಿಂದ ಯುವಕರು ಬೀದಿಪಾಲು: ನಿಷೇಧಕ್ಕೆ ಆಗ್ರಹಿಸಿ ಮನವಿ

Date:

Advertisements

ಆನ್‌ಲೈನ್ ಗೇಮ್ ಹಾಗೂ ಬೆಟ್ಟಿಂಗ್‌ಗಳಿಂದ ಯುವಕರು ಭಾರೀ ಅನಾಹುತಕ್ಕೆ ಹಾಳಾಗುತ್ತಿದ್ದು, ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ವೆಬ್‌ಸೈಟ್‌ಗಳನ್ನು ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ವತಿಯಿಂದ ರಾಯಚೂರು ತಹಶೀಲ್ದಾರ್ ಅವರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು, ಯುವಕರು, ಮಕ್ಕಳು ಹಾಗೂ ವಿದ್ಯಾರ್ಥಿಗಳು ಆನ್‌ಲೈನ್ ಗೇಮ್‌ಗಳಿಂದ ಬಹಳಷ್ಟು ಅನಾಹುತಗಳಿಗೆ ಒಳಗಾಗುತ್ತಿದ್ದಾರೆ. ಗೇಮ್‌ಗಳ ವೆಬ್‌ಸೈಟ್‌ಗಳನ್ನೂ ಕೂಡಲೇ ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ದಿನನಿತ್ಯ ಆನ್‌ಲೈನ್ ಗೇಮ್‌ಗಳು ವ್ಯಾಪಕವಾಗಿ ಹರಡುತ್ತಿದ್ದು, ಒಂದು ಚಟವಾಗಿ ಬೆಳೆಯುತ್ತಿದೆ. ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿವೆ. ಆನ್‌ಲೈನ್ ಗೇಮ್‌ಗಳಲ್ಲಿ ಶಾಲಾ ವಿದ್ಯಾರ್ಥಿಗಳು ಸಾಕಷ್ಟು ದುಡ್ಡು ಹಾಕಿ ಸೋತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಹೆಚ್ಚಾಗಿ ಸಂಭವಿಸುತ್ತಿವೆ. ಈಗಾಗಲೇ ರಾಜ್ಯದ ಕೆಲವು ಪೊಲೀಸ್ ಠಾಣೆಗಳಲ್ಲಿ ಅನಧಿಕೃತವಾಗಿ ಬೆಟ್ಟಿಂಗ್ ವ್ಯವಸ್ಥೆಯ ಬಗ್ಗೆ ದೂರುಗಳು ದಾಖಲಾಗುತ್ತಿದೆ. ಆನ್‌ಲೈನ್ ಗೇಮ್‌ಗಳ ಬುಕ್ಕಿಗಳ ಮೇಲೆ ಪ್ರಕರಣ ಶಿಸ್ತು ಕ್ರಮ ಜರುಗಿಸಬೇಕು. ಇದರ ಬಗ್ಗೆ ಹೆಚ್ಚಿನ ರೀತಿಯಲ್ಲಿ ಜನರಿಗೆ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ಆಗ್ರಹಿಸಿದರು.

Advertisements
mnv1 1

ರಾಜ್ಯಾದ್ಯಂತ ನಡೆಯುತ್ತಿರುವ ಆನ್‌ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್‌ಗಳನ್ನು ನಡೆಸುವ ಆ್ಯಪ್‌ಗಳನ್ನು ರಾಜ್ಯ ಸರಕಾರ ಕೂಡಲೇ ನಿಷೇಧಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಮಾನನಷ್ಟ ಪ್ರಕರಣ | ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ

ಮನವಿ ಸಲ್ಲಿಸುವ ವೇಳೆ ನಮ್ಮ ಕರ್ನಾಟಕ ಸೇನೆಯ ಕೊಂಡಪ್ಪ, ಶಿವರಾಜ್ ನಾಯಕ, ಎಂ ಎಸ್ ವೆಂಕಟೇಶ್, ಉಮೇಶ್ ಗೌಡ, ಶಿವನಗೌಡ ನಾಯಕ, ಮಂಜುನಾಥ, ವಿಜಯ ಇನ್ನಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X