ಬೀದರ್ | ಆನ್‌ಲೈನ್ ಗೇಮಿಂಗ್ : ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ

Date:

Advertisements

ಆನ್‌ಲೈನ್ ಗೇಮಿಂಗ್‌ನಲ್ಲಿ‌ ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡು ಮನನೊಂದ ಯುವಕ ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ.

ಬೀದರ್ ಜಿಲ್ಲೆಯ ಹುಲಸೂರ ತಾಲ್ಲೂಕಿನ ಬೇಲೂರ ಗ್ರಾಮದ ವಿಜಯಕುಮಾರ್ ಹೊಳ್ಳೆ (24) ಮೃತ ಯುವಕ.

ಡಿ.ಫಾರ್ಮ್‌ ಪದವೀಧರನಾದ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳಿಂದ ಆನ್‌ಲೈನ್ ಗೇಮಿಂಗ್‌ ವ್ಯಾಮೋಹಕ್ಕೆ ಸಿಲುಕಿ ₹10 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದ. ಮತ್ತೆ ಒಂದೂವರೆ ಲಕ್ಷ ಸಾಲ ಮಾಡಿಕೊಂಡಿದ್ದನು.

Advertisements

ಎರಡ್ಮೂರು ದಿನಗಳಲ್ಲಿ ಹಣ ಕೊಡುತ್ತೇವೆ ಎಂದು ಕುಟುಂಬಸ್ಥರು ಹೇಳಿದ್ದರು. ಆದರೆ ಸಾಲಕ್ಕೆ ಹೆದರಿದ ಯುವಕ ಬುಧವಾರ (ಡಿ.25) ರಂದು ಭಾಲ್ಕಿ ತಾಲ್ಲೂಕಿನ ಸಾಯಗಾಂವ ಗ್ರಾಮ ಸಮೀಪದ ಜ್ಯೋತಿ ತಾಂಡಾ ಬಳಿ ಹೋಗಿ ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು.

ಶೇ.80% ಸುಟ್ಟ ಗಾಯಗಳಿಂದ ನರಳುತ್ತಿದ್ದ ಯುವಕನನ್ನು ಸ್ಥಳೀಯರು ಭಾಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೀದರ್ ಬ್ರಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗೆ ಮಹಾರಾಷ್ಟ್ರದ ಉಮ್ಮರ್ಗಾ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ನಸುಕಿನ ಜಾವ ಸಾವನ್ನಪ್ಪಿದ್ದಾನೆ ಎಂದು ಮೃತರ ಸಹೋದರ ಸಚಿನ್ ಹೊಳ್ಳೆ ಈದಿನ.ಕಾಮ್ ಜೊತೆ ಮಾತನಾಡಿ ತಿಳಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದು ₹15 ಲಕ್ಷಕ್ಕೂ ಅಧಿಕ ಹಣ ಸಾಲ ಮಾಡಿದ, ಅನೇಕ ಸಲ ಬುದ್ಧಿವಾದ ಹೇಳಿ ಸಾಲ ತೀರಿಸಿದ್ದೇವೆ. ಆದರೂ ಕೇಳಲಿಲ್ಲ. ಕೊನೆಗೆ ಅದರಿಂದ ಹೊರಬರಲು ಸಾಧ್ಯವಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರು.

ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಆಗ್ರಹ :

‘ಕಳೆದ ಏಳೆಂಟು ವರ್ಷಗಳಿಂದ ಆನ್‌ಲೈನ್ ಗೇಮ್ಸ್ ಆಡುತ್ತಿದ್ದೇನೆ. ಇದರಿಂದ ಹಣ ಬರುತ್ತೆ ಎಂಬ ಆಸೆಯಿಂದ ಚಟಕ್ಕೆ ಬಿದ್ದು ಲಕ್ಷಾಂತರ ಹಣ ಕಳೆದುಕೊಂಡಿದ್ದೇನೆ.ಆದರೆ ಗೇಮ್ಸ್‌ನಿಂದ ಯಾವುದೇ ಲಾಭವಿಲ್ಲ. ಇಂತಹ ಮೋಸದಾಟ ಯಾರೂ ಆಡಬೇಡಿ ಎಂದು ಮೃತ ಯುವಕ ವಿಜಯಕುಮಾರ್ ನಿನ್ನೆ ಮನವಿ ಮಾಡಿದ್ದನು.

ಆನ್‌ಲೈನ್ ಗೇಮ್ಸ್ ಸಾಲಕ್ಕೆ ಹೆದರಿ ಲಕ್ಷಾಂತರ ಹಣ ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ವಿಷಯ ತಿಳಿದು ಬಸವಕಲ್ಯಾಣ ಶಾಸಕ ಶರಣು ಸಲಗರ ಶುಕ್ರವಾರ ಭೇಟಿ ನೀಡಿದ ವೇಳೆ ಫೇಸ್‌ಬುಕ್ ಲೈವ್‌ನಲ್ಲಿ ಈ ಮೇಲಿನಂತೆ ಹೇಳಿದ್ದ ಯುವಕ ಆನ್‌ಲೈನ್ ಗೇಮ್ಸ್ ನಿಷೇಧಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದನು.

ಈ ಸುದ್ದಿ ಓದಿದ್ದೀರಾ? ಯುವಜನರ ಜೀವಕ್ಕೆ ಕುತ್ತು ತರುತ್ತಿರುವ ಮೋಸದಾಟ: ಆನ್‌ಲೈನ್ ಗೇಮಿಂಗ್‌ ಬಗ್ಗೆ ಇರಲಿ ಎಚ್ಚರ

ಮೆಹಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಭಾರತದ ಅತ್ಯಂತ ಉನ್ನತ ಪ್ರಶಸ್ತಿಗಳು ಪಡೆದ ಕೆಲವೊಂದಿಷ್ಟು ದರಿದ್ರಗಳು ಈ ಆನ್ಲೈನ್ ಆಟದ ರಾಯಭಾರಿ ವಯಸ್ಸಿಕೊಂಡು ಪ್ರಚಾರ ಮಾಡಿ ಯುವಜನತೆ ಪ್ರಾಣಕ್ಕೆ ಕಂಟಕವಾಗಿತ್ತಿದ್ದಾರೆ.

    ಈ ಆಟ ಸರಕಾರ ನಿಷೇಧಿಸಬೇಕು.

  2. ಇ ಆನ್ಲೈನ್ ಆಟಕ್ಕೆ ಸರಕಾರವೇ ಸಂಪೂರ್ಣ ಜವಾಬ್ದಾರಿಯಾಗಿದೆ. ಇ ಆಟಗಳಿಂದ ಸರಕಾರದ ಬೊಕ್ಕಸಕ್ಕೆ ಕೋಟಿಗಟ್ಟಲೆ ದುಡ್ಡು ಜಿಎಸ್ಟಿ(GST)ರೂಪದಲ್ಲಿ ಆದಾಯ ಬರುತ್ತಿದೆ. ಇನ್ನು ಸಿನೆಮಾ ನಟರು ಇ ಆಟಗಳ ಪ್ರಚಾರ ಮಾಡುತ್ತಿದ್ದಾರೆ. ಯುವ ಜನಾಂಗದ ಭವಿಷ್ಯ ರೂಪಿಸಬೇಕಾದ ಸರಕಾರ ಮತ್ತು ಸಿನಿಮಾ ನಟರಿಗೆ ಧಿಕ್ಕಾರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X