ಕಲಬುರಗಿ | ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ವಿರುದ್ಧ ಮಹರ್ಷಿ ಶಂಬೂಕರ ಸ್ಮರಣೆ ಕಾರ್ಯಕ್ರಮ

Date:

Advertisements

ಜ.22ರಂದು ಅಯೋಧ್ಯೆಯಲ್ಲಿ ನಡೆಸಲಾಗುತ್ತಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವಿರೋಧಿಸಿ ಅದೇ ದಿನ ಬೆಳಗ್ಗೆ 11.30ಕ್ಕೆ ಕಲಬುರಗಿಯ ಜಗತ್ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಶೂದ್ರ ಸಮುದಾಯದ ಮಹರ್ಷಿ ಶಂಬೂಕ ಮುನಿಗೆ ಗೌರವ ಸಮರ್ಪಣೆ ಮಾಡಲಾಗುವುದು ಎಂದು ಡಿ.ಎಸ್.ಎಸ್ ರಾಜ್ಯ ಸಂಚಾಲಕ ಅರ್ಜುನ ಭದ್ರೆ ಹೇಳಿದರು.

ಕಲಬುರಗಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ರಾಮ ಮಂದಿರ ನಿರ್ಮಾಣ ಹಾಗೂ ಶ್ರೀರಾಮನ ಹೆಸರಿನಲ್ಲಿ ದೇಶಾದ್ಯಂತ ಬಿಜೆಪಿ ಮತ್ತು ಆರ್.ಎಸ್.ಎಸ್ ನಡೆಸುತ್ತಿರುವ ರಾಜಕಾರಣ ವರ್ಣಾಶ್ರಮ ವ್ಯವಸ್ಥೆ ಗಟ್ಟಿಗೊಳಿಸುವ ಸಂಚಾಗಿದೆ. ರಾಮಾಯಣದಲ್ಲಿ ಶೂದ್ರ ಶಂಬೂಕನ ಹತ್ಯೆಗೈದು ಆತನ ರಕ್ತ ಕುಡಿದು ಸಂಭ್ರಮಿಸಿದ ಘಟನೆಯ ಪ್ರಸ್ತಾಪವಿದೆ. ಈ ವಿದ್ಯಮಾನವು ವರ್ಣಾಶ್ರಮ ವ್ಯವಸ್ಥೆಯಲ್ಲಿ ದಲಿತರು ಸೇರಿದಂತೆ ಶೂದ್ರರಿಗೆ ಬದುಕುವ ಹಕ್ಕಿಲ್ಲ ಎಂಬುದು ಸಾಬೀತುಪಡಿಸುವಂತಿದೆ” ಎಂದರು.

“75 ವರ್ಷಗಳ ಹಿಂದೆ ತಮಿಳುನಾಡಿನಲ್ಲಿ ಪ್ರಖರ ವಿಚಾರವಾದಿ ಪೆರಿಯಾರ್ ಅವರು ರಾಮಾಯಣ ವಿರೋಧಿ ಚಳವಳಿ ನಡೆಸಿದ್ದು ಇಂದಿಗೂ ಪ್ರಸ್ತುತ ಎನಿಸುವಂತಿದೆ. ಪೆರಿಯಾರ್ ಹೋರಾಟವನ್ನು ಮುಂದುವರೆಸುವ ಜವಾಬ್ದಾರಿಯಾಗಿ ಜ.22ರಂದು ಮಹರ್ಷಿ ಶಂಬೂಕರ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

Advertisements

“ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆದಿವಾಸಿ ಜನಾಂಗಕ್ಕೆ ಸೇರಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಬಿಜೆಪಿ ತನ್ನ ವರ್ಣಾಶ್ರಮ ವ್ಯವಸ್ಥೆಯ ಮೇಲಿನ ಪ್ರೀತಿ ಸಾಬೀತುಪಡಿಸುತ್ತಿದೆ. ರಾಮ ಮಂದಿರ ನಿರ್ಮಾಣ ಕಾರ್ಯ ಅಪೂರ್ಣವಾಗಿದ್ದರೂ ತುರ್ತಾಗಿ ಮಂದಿರ ಉದ್ಘಾಟಿಸಲಾಗುತ್ತಿದೆ. ಇಂತಹ ಅಪಕೃತ್ಯ ಮಾಡದಂತೆ ದೇಶದ ನಾಲ್ಕು ಶಂಕರಾಚಾರ್ಯರ ಪೀಠಗಳು ಎಚ್ಚರಿಕೆ ನೀಡಿದ್ದೂ ಅಲ್ಲದೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದಿರುವುದು ಬಿಜೆಪಿಯ ರಾಜಕೀಯ ಲೆಕ್ಕಾಚಾರಗಳಿಗೆ ಕನ್ನಡಿ ಹಿಡಿದಂತಿದೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಅನಂತಕುಮಾರ್‌ ಹೆಗಡೆ ಹುಚ್ಚ, ವಿಜಯೇಂದ್ರ ಹುಚ್ಚಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಿ: ಸಚಿವ ಶಿವರಾಜ್ ತಂಗಡಗಿ

ಪತ್ರಿಕಾಗೋಷ್ಠಿಯಲ್ಲಿ ಮಹಾಂತೇಶ ಬಡದಾಳ, ಮಹೇಶ್ ಕೋಕಿಲೆ, ಸೂರ್ಯಕಾಂತ ಆಜಾದ್ ಪುರ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X