ನಮ್ಮ ಮೆಟ್ರೋ | ನೇರಳ ಮಾರ್ಗ ಪರಿಪೂರ್ಣ; ಬೈಯಪ್ಪನಹಳ್ಳಿ-ಕೆ.ಆರ್‌.ಪುರಂ ನಡುವೆ ಅ.7ರಿಂದ ಸಂಚಾರ ಆರಂಭ

Date:

Advertisements

ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಮತ್ತಷ್ಟು ಹಿಗ್ಗಿದೆ. ಹಲವು ಕಾರಣಗಳಿಂದ ಚಾಲನೆಯಾಗದೇ ಉಳಿದಿದ್ದ ಬೈಯಪ್ಪನಹಳ್ಳಿ-ಕೆ.ಆರ್.ಪುರಂ ನಡುವಿನ ನೇರಳೆ ಮಾರ್ಗವೂ ಇದೀಗ ಸಂಚಾರಕ್ಕೆ ತೆರೆದುಕೊಳ್ಳುತ್ತಿದೆ. ಈ ಮಾರ್ಗದಲ್ಲಿ ಅಕ್ಟೋಬರ್ 7ರಿಂದ ಮೆಟ್ರೋ ಸಂಚಾರಕ್ಕೆ ಚಾಲನೆ ದೊರೆಯಲಿದೆ ಎಂದು ಬೆಂಗಳೂರು ರೈಲು ಮೆಟ್ರೋ ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.

ಇತ್ತೀಚೆಗೆ, ಕೆ.ಆರ್.ಪುರಂ ಮತ್ತು ವೈಟ್‌ಫೀಲ್ಡ್‌ ನಡುವಿನ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಆದರೆ, ಕೆ.ಆರ್.ಪುರಂ ಮತ್ತು ಬೈಯಪ್ಪನಹಳ್ಳಿ ನಡುವಿನ ಮಾರ್ಗದಲ್ಲಿ ನಿರ್ಮಾಣ ಕಾರ್ಯ ಮತ್ತು ತಪ್ಪಿದ್ದ ಸಂಪರ್ಕ ಕೊಂಡಿ ಕೆಲಸಗಳ ಬಾಕಿ ಉಳಿದಿದ್ದರಿಂದ ಈ ಮಾರ್ಗದಲ್ಲಿ ಸಂಚಾರಕ್ಕೆ ಚಾಲನೆ ನೀಡಲಾಗಿರಲಿಲ್ಲ.

ಇದೀಗ, ಈ ಮಾರ್ಗದಲ್ಲಿ ಎಲ್ಲ ಕೆಲಸಗಳು ಪೂರ್ಣಗೊಂಡಿದ್ದು, ಶನಿವಾರ ಮೆಟ್ರೋ ಸಂಚಾರಕ್ಕೆ ಚಾಲನೆ ದೊರೆಯಲಿದೆ. ಬೈಯಪ್ಪನಹಳ್ಳಿ-ಕೆ.ಆರ್.ಪುರಂ ನಡುವಿನ ಮಾರ್ಗವು ತೆರೆದುಕೊಳ್ಳುವುದರ ಜತೆಗೆ ಸುಮಾರು 40 ಕಿಲೋ ಮೀಟರ್ ಉದ್ದದ್ದ ನೇರಳೆ ಮಾರ್ಗವು ಸಂಪೂರ್ಣವಾಗಿ ಪೂರ್ಣಗೊಳ್ಳಲಿದೆ.

Advertisements

ಈ ಸುದ್ದಿ ಓದಿದ್ದೀರಾ? ಮತದಾರ ಪಟ್ಟಿಗೆ ಹೆಸರು ನೋಂದಾಯಿಸಲು ಅರ್ಜಿ ಸಲ್ಲಿಕೆಗೆ ನ.6ರವರೆಗೆ ಅವಕಾಶ

ಇಂದಿನವರೆಗೆ, ಎಂಜಿ ರಸ್ತೆ, ಕೆಂಗೇರಿ ಭಾಗದಿಂದ ಕಾಡುಗೋಡಿಗೆ ಸಂಚರಿಸುವವರು ಬೈಯಪ್ಪನಹಳ್ಳಿಯಲ್ಲಿ ಇಳಿದು ಅಲ್ಲಿಂದ ಬಸ್ ಮೂಲಕ ಕೆ.ಆರ್.ಪುರಂಗೆ ತೆರಳಿ, ಅಲ್ಲಿಂದ ಮೆಟ್ರೋ ಮೂಲಕ ಕಾಡುಗೋಡಿ ತಲುಪಬೇಕಿತ್ತು. ಈಗ ಬೈಯಪ್ಪನಹಳ್ಳಿ-ಕೆ.ಆರ್.ಪುರಂ ನಡುವೆಯೂ ಮೆಟ್ರೋ ಸಂಚರಿಸುವುದರಿಂದ ಪ್ರಯಾಣಿಕರಿಗೆ ಬಸ್ ಹತ್ತುವ ಕಸರತ್ತು ಇಲ್ಲವಾಗಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X