ಕೊಡಗು | ಕಾಫಿ ಕೊಯ್ಲಿಗೆ ಸಿಗುತ್ತಿಲ್ಲ ಕಾರ್ಮಿಕರು; ವೇತನದ ಜಾಹೀರಾತು ಹಿಡಿದು ನಿಂತ ಮಾಲೀಕರು

Date:

Advertisements

ಕರ್ನಾಟಕವೂ ಸೇರಿದಂತೆ ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಮ್ಮರವಾಗಿದೆ. ಉದ್ಯೋಗಗಳ ಕೊರತೆ ಮತ್ತು ಉದ್ಯೋಗಾಕಾಂಕ್ಷಿಗಳ ಹೆಚ್ಚಳದಿಂದ ಉದ್ಯೋಗಿಗಳಿಗೆ ವೇತನವೂ ಅಗತ್ಯಕ್ಕಿಂತ ಕಡಿಮೆಯೇ ಇದೆ. ಕೂಲಿ ಕೆಲಸ ಮಾಡುವವರೂ ಕೂಡ ಶ್ರಮಕ್ಕೆ ತಕ್ಕ ಕೂಲಿ ಸಿಗದೆ ಬೇಸತ್ತಿದ್ದಾರೆ. ಹೀಗಾಗಿ, ಶ್ರಮಕ್ಕೆ ತಕ್ಕ ಪ್ರತಿಫಲ ಅರಸಿ ವಲಸೆ ಹೋಗುತ್ತಿದ್ದಾರೆ. ಇಂತಹ ವಲಸೆ ಕೊಡಗು ಜಿಲ್ಲೆಯಲ್ಲೂ ನಡೆದಿದ್ದು, ಸ್ಥಳೀಯ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕೂಲಿಕಾರರೇ ಇಲ್ಲದಂತಾಗಿದೆ. ಕಾಫಿ ಎಸ್ಟೇಟ್ ಮಾಲೀಕರು ಕೂಲಿ ಕಾರ್ಮಿಕರಿಗಾಗಿ ಹುಡುಕಾಡುತ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕಾಫಿ ಬೀಜಗಳ ಕೊಯ್ಲಿಗೆ ಕಾರ್ಮಿಕರು ಸಿಗದೆ, ಎಸ್ಟೇಟ್‌ ಮಾಲೀಕರೊಬ್ಬರು ಹೆಚ್ಚು ವೇತನ ಹಾಗೂ ಓವರ್ ಟೈಮ್ (ಓಟಿ) ಕೆಲಸಕ್ಕೆ ಹೆಚ್ಚುವರಿ ವೇತನ ನೀಡುವುದಾಗಿ ಜಾಹೀರಾತು ಹಿಡಿದು ರಸ್ತೆ ಬದಿಯಲ್ಲಿ ನಿಂತಿರುವುದು ಕಂಡುಬಂದಿದೆ. ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಜಾಹೀರಾತು ಹಿಡಿದಿರುವ ಕಾಫಿ ತೋಟದ ಮಾಲೀಕ ತನ್ನ ಜಾಹೀರಾತಿನಲ್ಲಿ, ‘ಕೆಲಸಗಾರರು ಬೇಕಾಗಿದ್ದಾರೆ! ರೊಬೊಸ್ಟಾ ಪಿಕಿಂಗ್ – ಕೆ.ಜಿಗೆ 4.22 ರೂ. ಮಹಿಳಾ ಕಾರ್ಮಿಕರಿಗೆ ದಿನಕ್ಕೆ 415+OT ವೇತನ, ಪುರುಷ ಕಾರ್ಮಿಕರಿಗೆ 615+OT ವೇತನ’ ನೀಡುವುದಾಗಿ ಬರೆದುಕೊಂಡಿದ್ದಾರೆ.

Advertisements

ಅವರ ಚಿತ್ರವನ್ನು ಕೊಡಗು ಕನೆಕ್ಟ್‌ ಎಂಬ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಚಿತ್ರದ ಜೊತೆಗೆ, “ಕೂಲಿ ಹೆಚ್ಚಿದ್ದರೂ ಕಾಫಿ ಕೊಯ್ಲು ಮಾಡಲು ಕಾರ್ಮಿಕರು ಸಿಗುತ್ತಿಲ್ಲ. ಕಾರ್ಮಿಕರ ಕೊರತೆ ಹೆಚ್ಚಾಗಿದೆ. ಕೊಡಗಿನ ಕಾಫಿ ಬೆಳೆಗಾರರೊಬ್ಬರು ವಿನೂತನ ಜಾಹೀರಾತು ನೀಡಿ ಕಾರ್ಮಿಕರನ್ನು ಸೆಳೆಯುತ್ತಿದ್ದಾರೆ” ಎಂದು ಬರೆಯಲಾಗಿದೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. “ಕರ್ನಾಟಕವೂ ಸೇರಿದಂತೆ ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಮ್ಮರವಾಗಿದೆ.” ಇದು ನಿಮ್ಮ ಬರಹದ ಮೊದಲನೇ ಸಾಲು.
    ವಿಪರ್ಯಾಸವೆಂದರೆ, ಹೆಚ್ಚು ವೇತನ ಕೊಟ್ಟರು ಜನರು ಕೆಲಸಕ್ಕೆ ಬಾರದಿರುವುದು. ಅಂದರೆ ಜನರಿಗೆ, ಕೆಲಸ ಮಾಡುವ ಆಸೆ ಇಲ್ಲಾ ಅಥವಾ ನಿರುದ್ಯೋಗ ಇಲ್ಲಾ. ಎರಡೂ ಒಟ್ಟಿಗೆ ಇರಲು ಹೇಗೆ ಸಾಧ್ಯ!!??

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X