ಉಡುಪಿ | ಮನೆಯಲ್ಲಿ ಕೂಡಿ ಹಾಕಿ ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ, ದೂರು ದಾಖಲು

Date:

Advertisements

ಹಣದ ವ್ಯವಹಾರಕ್ಕೆ ಸಂಬಧಿಸಿದಂತೆ ಯಕ್ಷಗಾನ ಕಲಾವಿದರೊಬ್ಬರನ್ನು ಮನೆಯಲ್ಲಿ ಬಲವಂತವಾಗಿ ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ಪಡುಬಿದ್ರಿಯಲ್ಲಿ ಸಂಭವಿಸಿದೆ. ಸದ್ಯ ಕಲಾವಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಡುಬಿದ್ರಿ ನಡ್ನಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಸಿಹಿತ್ತು ಶ್ರೀಭಗವತಿ ಯಕ್ಷಗಾನ ಮೇಳದ ಕಲಾವಿದರಾಗಿರುವ ಇವರು, ಸ್ನೇಹಿತ ಕಲಾವಿದ ಸಚಿನ್‌ನಿಂದ ಬಡ್ಡಿಗೆ ಸಾಲ ಪಡೆದುಕೊಂಡಿದ್ದರು. .

ಆದರೆ ನಿಗದಿತ ಸಮಯದೊಳಗೆ ಸಾಲವನ್ನು ಕಟ್ಟುತ್ತಿಲ್ಲ ಎಂಬ ಕಾರಣದಿಂದ ಸಚಿನ್, ಆತನ ಉದ್ಯಾವರದಲ್ಲಿರುವ ಮನೆಗೆ ಕರೆದುಕೊಂಡು ಹೋಗಿ, ಅಲ್ಲಿ ಮನೆಯಲ್ಲಿ ಬಲವಂತವಾಗಿ ಕೂಡಿ ಹಾಕಿದ್ದಾನೆ. ಅಲ್ಲಿ ಸಚಿನ್, ಆತನ ತಂದೆ ಕುಶಾಲ್ ಹಾಗೂ ಇನ್ನೊರ್ವ ಅಪರಿಚಿತ ವ್ಯಕ್ತಿ ಬೆತ್ತದಿಂದ ಬೆನ್ನಿಗೆ, ತಲೆಗೆ, ಕಾಲಿಗೆ ಹೊಡೆದಿದ್ದಾರೆ.

Advertisements

ಬಳಿಕ ಖಾಲಿ ಬಾಂಡ್ ಪೇಪರ್‌ಗೆ ಬಲವಂತವಾಗಿ ಸಹಿ ಪಡೆದುಕೊಂಡಿದ್ದಾರೆ ಎಂದು ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ ನಿತಿನ್ ಆಚಾರ್ಯ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X