ಪಹಲ್ಗಾಮ್‌ ದಾಳಿ | ಬೀದರ್‌ನಲ್ಲಿ ಸಚಿವ ಈಶ್ವರ ಖಂಡ್ರೆ ನೇತ್ರತ್ವದಲ್ಲಿ ʼಕ್ಯಾಂಡಲ್‌ ಮಾರ್ಚ್‌ʼ

Date:

Advertisements

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೀದರ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೀದರನಲ್ಲಿ ಶನಿವಾರ ಸಂಜೆ ಕ್ಯಾಂಡಲ್ ಮಾರ್ಚ್ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ರಹೀಂ ಖಾನ್‌, ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ನಗರಸಭೆ ಅಧ್ಯಕ್ಷ ಮುಹಮ್ಮದ್‌ ಗೌಸ್‌ ನೇತೃತ್ವದಲ್ಲಿ ‘ಕ್ಯಾಂಡಲ್‌ ಮಾರ್ಚ್‌’ ಮಾಡಲಾಯಿತು.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದ ಕಾಂಗ್ರೆಸ್‌ ಕಾರ್ಯಕರ್ತರು ಮೇಣದ ಬತ್ತಿ ಬೆಳಗಿಸಿ, ಎರಡು ನಿಮಿಷ ಮೌನ ಆಚರಿಸಿ, ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಮೇಣದ ಬತ್ತಿಯೊಂದಿಗೆ ಹೆಜ್ಜೆ ಹಾಕಿದರು.

Advertisements

ಸಚಿವ ಈಶ್ವರ ಖಂಡ್ರೆ ಮಾತನಾಡಿ, ʼಭಯೋತ್ಪಾದನೆ ಎಂಬುದು ಮಾನವೀಯತೆಗೆ ವಿರುದ್ಧವಾದ ಅತ್ಯಂತ ಹೀನ ಮತ್ತು ಅಸ್ವೀಕೃತ ಕೃತ್ಯವಾಗಿದೆ. ಈ ದೇಶದ ಏಕತೆ, ಅಖಂಡತೆ ಮತ್ತು ಶಾಂತಿಯನ್ನು ಭಂಗಪಡಿಸುವ ದುಷ್ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಯುವುದು ಸರ್ಕಾರದ ಮುಖ್ಯ ಜವಾಬ್ದಾರಿಯಾಗಿದೆ. ಜನರಿಗೆ ಭದ್ರತೆ ಒದಗಿಸುವಲ್ಲಿ ವೈಫಲ್ಯ ಕಂಡಾಗ, ಕಾರ್ಯತ್ಮಕ ಕ್ರಮ ಕೈಗೊಳ್ಳಬೇಕು. ಸರ್ಕಾರ ಜನರ ಭದ್ರತೆಗೆ ಬದ್ಧವಾಗಿದೆ ಎಂಬ ವಿಶ್ವಾಸವನ್ನು ಜನತೆಗೆ ನೀಡಬೇಕಾದ ಅಗತ್ಯವಿದೆʼ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸವ ಜಯಂತಿಯೊಂದಿಗೆ ಪಂಚಾಚಾರ್ಯರ ಯುಗಮಾನೋತ್ಸವಕ್ಕೆ ಖಂಡನೆ; ಹೋರಾಟದ ಎಚ್ಚರಿಕೆ

ಕರ್ನಾಟಕ ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಬಸವರಾಜ ಭತಮುರ್ಗೆ, ಕ್ರಿಶ್ಚಿಯನ್‌ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್‌ ಜಾಹಗೀರದಾರ್‌, ಕಾಂಗ್ರೆಸ್‌ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪೂಜಾ ಜಾರ್ಜ್‌ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X