ಉಡುಪಿ | ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್‌ ವಿವಾದ, ಮತ್ತೆ ಮುನ್ನೆಲೆಗೆ

Date:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ.

- Advertisement -

ಶಿಲ್ಪಿ ಕೃಷ್ಣ ನಾಯಕ್ ಕ್ರಿಶ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮೂಲಕ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದು ಕೊಂಡು ಕಾಮಗಾರಿ ನಡೆಸುತ್ತಿದ್ದು, ನಂತರ ಕೃಷ್ಣ ನಾಯ್ಕ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ 2024ರ ಜೂ.21ರಂದು ಕಾರ್ಕಳದ ಕೃಷ್ಣ ಶೆಟ್ಟಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ಬಗ್ಗೆ ತನಿಖೆ ನಡೆಸಿದ್ದು, ಶಿಲ್ಪಿಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯ ಬದಲು ಹಿತ್ತಾಳೆ ಲೋಹದಿಂದ ನಿರ್ಮಾಣ ಮಾಡಿರುವುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ. ಅದೇ ರೀತಿ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ.ಕುಮಾರ್ ವರ್ಕ್ ಆರ್ಡರ್‌ನಲ್ಲಿದ್ದ ಷರತ್ತುಗಳನ್ನು ಪಾಲಿಸದೆ, 2023ರ ಅ.12ರಂದು ಪರಶುರಾಮ ಮೂರ್ತಿಯ ಸೊಂಟದಿಂದ ಮೇಲ್ಭಾಗವನ್ನು ಉಮ್ಮಿಕಲ್ ಬೆಟ್ಟದಿಂದ ತೆಗೆದುಕೊಂಡು ಹೋಗಿ ಅಲೆವೂರು ಗ್ರಾಮದ ಪ್ರಗತಿ ನಗರ ಎಂಬಲ್ಲಿರುವ ನಿರ್ಮಿತಿ ಕೇಂದ್ರಕ್ಕೆ ಸಂಬಂಧಿಸಿರುವ ಶೆಡ್‌ನಲ್ಲಿ 2024ರ ಫೆ.25ರ ತನಕ ಇರಿಸಿಕೊಂಡಿದ್ದರು.

ಆದರೆ ಮೂರ್ತಿಯ ಸೊಂಟದಿಂದ ಮೇಲ್ಭಾಗವನ್ನು ಶಿಲ್ಪಿ ಕೃಷ್ಣ ನಾಯ್ಕಗೆ ಹಸ್ತಾಂತರ ಮಾಡಿದ್ದು, ಆತ ಅದನ್ನು ಬೆಂಗಳೂರಿಗೆ ಸಾಗಾಟ ಮಾಡಿರುವುದಾಗಿ ಅರುಣ್ ಕುಮಾರ್ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಈ ಮೂಲಕ ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ.ಕುಮಾರ್ ಅಪರಾಧಿಕ ಒಳಸಂಚು ಮತ್ತು ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿರುವುದು ಕಂಡುಬಂದಿದೆ. ಅವರ ವಿರುದ್ಧ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಯಂತೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಪೊಲೀಸರು ಕಾರ್ಕಳದ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪತ್ರಿಕಾ ರಂಗ ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎ.ವಸಂತ್ ಕುಮಾರ

ಪತ್ರಿಕಾ ರಂಗ ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸತ್ಯವನ್ನು ವರದಿ ಮಾಡಬೇಕು....

ಮುದ್ದೇಬಿಹಾಳ | ಸೆ.21ರಂದು ಕ್ರಾಂತಿ ಜ್ಯೋತಿ ಪ್ರವಾದಿ ಮುಹಮ್ಮದ್ ಸೀರತ್ ಸಮಾರಂಭ

ಜಮಾಅತೆ ಇಸ್ಲಾಮಿ ಹಿಂದ್ ಮುದ್ದೇಬಿಹಾಳ ಘಟಕದ ವತಿಯಿಂದ ‘ಕ್ರಾಂತಿಯ ಜ್ಯೋತಿ ಪ್ರವಾದಿ...

ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ...

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...