ಉಡುಪಿ | ಉದ್ಯೋಗ ಖಾತ್ರಿ ಯೋಜನೆಗೆ ಧಕ್ಕೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Date:

ಯು.ಪಿ.ಎ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆಯಾದ ಮನರೇಗಾ ಯೋಜನೆಯ ಹೆಸರು ಹಾಗೂ ಮೂಲ ಸ್ವರೂಪವನ್ನು ಬದಲಾಯಿಸಿ ಯೋಜನೆಯನ್ನು ದುರ್ಬಲಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆರ್ಡೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, “ಕೃಷಿಕರು ತಮ್ಮ ಸ್ವಂತ ಜಮೀನಿನಲ್ಲಿ ಬಾವಿ, ಹೈನುಗಾರಿಕೆ, ತೋಟ ನಿರ್ಮಾಣ, ಎಡೆಸಸಿ ಮುಂತಾದ ಕಾರ್ಯಗಳ ಮೂಲಕ ಸ್ವತಃ ಉದ್ಯೋಗ ಸೃಷ್ಟಿಸಿಕೊಂಡು ಆದಾಯ ಗಳಿಸಲು ಅವಕಾಶ ನೀಡಿದ ಏಕೈಕ ಯೋಜನೆ ಉದ್ಯೋಗ ಖಾತ್ರಿ ಯೋಜನೆ. ಬಡವರ ಬದುಕಿಗೆ ಆಸರೆಯಾದ ಇಂತಹ ಜನಪರ ಯೋಜನೆಯನ್ನು ರದ್ದುಪಡಿಸುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು. ಯು.ಪಿ.ಎ ಸರ್ಕಾರ ಬಡವರಿಗೆ 100 ದಿನಗಳ ಕೆಲಸ ನೀಡುವ ಮೂಲಕ ಜನಸ್ನೇಹಿ ಆಡಳಿತ ನೀಡಿತ್ತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ನಂತರ ಮಾತನಾಡಿದ ಕಾಪು ಉತ್ತರ ಬ್ಲಾಕ್ ಉಸ್ತುವಾರಿ ನೀರೆ ಕೃಷ್ಣ ಶೆಟ್ಟಿ, ದೇಶದ ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ, ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಹಾಗೂ ಕೃಷಿಕರಿಗೆ ನೇರ ಆದಾಯ ತರುವ ಶಕ್ತಿ ಹೊಂದಿರುವ ಯೋಜನೆ ಉದ್ಯೋಗ ಖಾತ್ರಿ ಯೋಜನೆ ಎಂದರು. ಹಳ್ಳಿಗಳ ರಸ್ತೆ, ನೀರು ಸಂರಕ್ಷಣೆ, ಕೃಷಿ ಆಧಾರಿತ ಉದ್ಯೋಗಗಳು ಹಾಗೂ ಸ್ವಂತ ಜಮೀನಿನಲ್ಲಿ ಅಭಿವೃದ್ಧಿ ಕಾರ್ಯಗಳು ಈ ಯೋಜನೆಯ ಫಲವಾಗಿ ಸಾಧ್ಯವಾಗಿವೆ ಎಂದು ತಿಳಿಸಿದರು.

ಈ ಐತಿಹಾಸಿಕ ಯೋಜನೆಯನ್ನು ಜಾರಿಗೆ ತಂದ ಕಾಂಗ್ರೆಸ್ ನೇತೃತ್ವದ ಯು.ಪಿ.ಎ ಸರ್ಕಾರ ಹಾಗೂ ಅದರ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರನ್ನು ಸ್ಮರಿಸಿದ ಅವರು, ದೇಶದ ಆರ್ಥಿಕತೆಗೆ ದೃಢ ಮುನ್ನುಡಿ ಬರೆದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಕೊಡುಗೆಯನ್ನೂ ನೆನಪಿಸಿದರು. ಬಡವರ ಬದುಕಿಗೆ ಆಸರೆಯಾದ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನಗಳನ್ನು ದೇಶದ ಜನತೆ ಒಪ್ಪುವುದಿಲ್ಲ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಮಂಡಲ ಪ್ರಧಾನ ಶಾಂತಾರಾಮ ಸೂಡರು, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತ ರೈ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಪೂಜಾರಿ, ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಸಾಲಿಯಾನ್, ದಯಾನಂದ್ ಶೆಟ್ಟಿ, ಶೋಭಾ ಗಾಮ್ಸ್, ಲಕ್ಷ್ಮಿ, ಉದಯ್ ಕುಲಾಲ್, ರಾಘವೇಂದ್ರ, ಗಾಯತ್ರಿ, ಜಯ ಶ್ರೀ ಕುಲಾಲ್, ಎಸ್ಟಿ ಘಟಕದ ಬ್ಲಾಕ್ ಅಧ್ಯಕ್ಷ ರಾಮದಾಸ್ ನಾಯ್ಕ್, ಮಾಜಿ ಸಚಿವರ ಆಪ್ತ ಸಹಾಯಕ ನಬೀಲ್ ಉದ್ಯಾವರ, ರಾಜು ಸುವರ್ಣ, ಕಾರ್ತಿಕ್ ಆಚಾರ್ಯ, ಶಿವು ಕುಮಾರ್ ಸೇರಿದಂತೆ ಉದ್ಯೋಗ ಖಾತ್ರಿ ಯೋಜನೆಯ ಪಾಲಾನುಭವಿಗಳು ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...