ಕಲಬುರಗಿ | ಸಿಎಂ ವಿರುದ್ಧ ತನಿಖೆಗೆ ಅನುಮತಿ : ರಾಜ್ಯಪಾಲರ ನಡೆಗೆ ಕಾಂಗ್ರೆಸ್‌ ಕಿಡಿ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿ ಕಲಬುರಗಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

ನಗರದ ಜಗತ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಶಾಸಕರು, ಮುಖಂಡರು ಸೇರಿದ ಪಕ್ಷದ ನೂರಾರು ಕಾರ್ಯಕರ್ತರು ಸೇರಿ ಮಾನವ ಸರಪಳಿ ನಿರ್ಮಿಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2024 08 18 at 10.22.01 AM
ಕಲಬುರಗಿಯ ಜಗತ್‌ ವೃತ್ತದ ಮುಖ್ಯ ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್,ಮಾಜಿ ಸಚಿವ ರೇವುನಾಯಕ್ ಬೆಳಮಗಿ ಹಾಗೂ ಕಾಂಗ್ರೆಸ್‌ ಮುಖಂಡರಾದ ಸುಭಾಷ್ ರಾಠೋಡ್, ಅರುಣಕುಮಾರ್ ಪಾಟೀಲ್, ನೀಲಕಂಠರಾವ್ ಮೂಲಗೆ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

Advertisements

ಬೀದರ್‌ : ಸಂಸದ ಸಾಗರ್‌ ಖಂಡ್ರೆ ನೇತ್ರತ್ವದಲ್ಲಿ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಶನಿವಾರ ಬೀದರನಲ್ಲಿ ಸಂಸದ ಸಾಗರ ಈಶ್ವರ ಖಂಡ್ರೆ ನೇತೃತ್ವದಲ್ಲಿ ಬೀದರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯು ನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಯಿತು. ಬಳಿಕ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಸಲ್ಲಿಸಿದರು.

WhatsApp Image 2024 08 18 at 10.24.14 AM
ಬೀದರ್‌ನಲ್ಲಿ ಸಂಸದ ಸಾಗರ್‌ ಖಂಡ್ರೆ ನೇತ್ರತ್ವದಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಸಂಸದ ಸಾಗರ ಖಂಡ್ರೆ ಮಾತನಾಡಿ, ʼಜನಪರ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಹಣಿಯಲು ಆಗದಿರುವ ಕಾರಣ ರಾಜಭವನ ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿಗಳ ಹೆಸರಿಗೆ ಕಳಂಕ ತರುವ ಕೆಲಸ ಬಿಜೆಪಿ ಹಾಗೂ ಕೇಂದ್ರ ಸರ್ಕಾರದವರು ಮಾಡುತ್ತಿದ್ದಾರೆʼ ಎಂದು ಕಿಡಿಕಾರಿದರು.

ʼಸಂವಿಧಾನದ ಮುಖ್ಯಸ್ಥರಾಗಿ ಹೀಗೆ ಅಸಂವಿಧಾನಿಕ ನಡೆ ಅನುಸರಿಸುತ್ತಿರುವ ರಾಜ್ಯಪಾಲರ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಕೂಡಲೇ ರಾಷ್ಟ್ರಪತಿಗಳು ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ದಾರುಣ ಘಟನೆ: ದಲಿತ ಯುವಕನಿಗೆ ಕ್ಷೌರ ಮಾಡಲು ನಿರಾಕರಿಸಿ ಕೊಲೆ

ಪ್ರತಿಭಟನೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಅಭಿಷೇಕ ಪಾಟೀಲ್‌, ಸಂಜಯ ಜಾಗಿರದಾರ್‌ ಸೇರಿದಂತೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X