ರಾಯಚೂರು | ಕ್ರೀಡೆಯಿಂದ ದೈಹಿಕ ಒತ್ತಡ ನಿವಾರಣೆ : ಮಾರುತಿ ಬಗಾಡೆ

Date:

Advertisements

ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡರೆ ಮಾನಸಿಕ, ದೈಹಿಕ ಒತ್ತಡ ನಿವಾರಣೆ ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಮಾರುತಿ ಬಗಾಡೆ ಹೇಳಿದರು.

ನಗರದ ಕೃಷಿ ವಿಶ್ವ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರಾಯಚೂರು ಜಿಲ್ಲಾ ವಕೀಲರ ಸಂಘದಿಂದ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಕೀಲರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ವಕೀಲರು ತಮ್ಮ ದೈನಂದಿನ ಕೆಲಸದ ಜೊತೆಗೆ ಕ್ರೀಡಾ ಮನೋಭಾವನೆ ಮೈಗೂಡಿಸಿಕೊಳ್ಳಬೇಕುʼ ಎಂದರು.

ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಹತ್ತಿಕಾಳು ಪ್ರಭು ಸಿದ್ದಪ್ಪ ಮಾತನಾಡಿ, ʼವಕೀಲರು ದಿನನಿತ್ಯ ನ್ಯಾಯಾಲಯದ ಕೆಲಸದ ಒತ್ತಡಲ್ಲಿರುತ್ತಾರೆ. ಆದರೆ ಇಲ್ಲಿ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ತಮ್ಮಲ್ಲಿನ ಪ್ರತಿಭೆ ಅನಾವರಣ ಮಾಡುತ್ತಿರುವುದು ಶ್ಲಾಘನೀಯʼ ಎಂದರು.

Advertisements

ವಕೀಲರ ಸಂಘದ ಮುಖಂಡ ಎನ್. ಶಿವಶಂಕರ್ ಮಾತನಾಡಿ, ʼಪ್ರಥಮ ಬಾರಿಗೆ ವಕೀಲರಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಲ್ಲರೂ ಆಸಕ್ತಿಯಿಂದ ಪಾಲ್ಗೊಂಡಿದ್ದಾರೆ. ಸೋಲು–ಗೆಲುವು ಸಾಮಾನ್ಯ, ಎರಡೂ ಸಮಾನವಾಗಿ ಸ್ವೀಕರಿಸಬೇಕುʼ ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಆಗ್ರಹ; ಅನಿರ್ದಿಷ್ಟಾವಧಿ ಸತ್ಯಾಗ್ರಹ

ಕಾರ್ಯಕ್ರಮದಲ್ಲಿ ರಾಯಚೂರು ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಸಂಘದ ಉಪಾಧ್ಯಕ್ಷ ನಜೀರ್ ಅಹ್ಮದ್, ಪದಾಧಿಕಾರಿಗಳಾದ ಹನುಮಂತಪ್ಪ ಮೇಟಿ, ಶ್ರೀಧರ್ ಎಲಿ, ಸೈಯದ್ ನವಾಜ್, ರಾಮು, ಅಶೋಕ, ಮಲ್ಲಿಕಾರ್ಜುನ ಗೋನಾಳ, ರವಿ ಪಾಟೀಲ್‌ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X