ಶಿವಮೊಗ್ಗ | ಆನಂದಪುರದಲ್ಲಿ ಆರೋಪಿ ಸಚಿನ್ ಅಲಿಯಾಸ್ ಶ್ಯಾಡೋಗೆ ಪೊಲೀಸರ ಗುಂಡೇಟು

Date:

Advertisements

ಸಾಗರ ತಾಲೂಕಿನ ಆನಂದಪುರದಲ್ಲಿ ಬೆನ್ಜ್ ಲಾರಿಗೆ ಅಡ್ಡ ಹಾಕಿ ಸುಲಿಗರ, ಬೆದರಿಕೆ, ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಎಸ್ಕೇಪ್, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಬೆನ್ನಲ್ಲೆ ಸಚಿನ್ ಅಲಿಯಾಸ್ ಶ್ಯಾಡೋಗೆ ಕಾಲಿಗೆ ಗುಂಡೇಟು ಹೊಡೆಯಲಾಗಿದೆ.

ಗೂಂಡಾ ಆಕ್ಟ್ ನಲ್ಲಿ ಒಂದು ವರ್ಷದ ಹಿಂದೆ ಜೈಲಿಗೆ ತೆರಳಿದ್ದ ಸಚಿನ್ ಶ್ಯಾಡೋ 20 ದಿನಗಳ ಹಿಂದೆ ರಿಲೀಸ್ ಆಗಿ ಬಂದಿದ್ದ. ದೊಡ್ಡಪೇಟೆ, ತುಂಗ ನಗರ , ಜಯನಗರ, ಕೋಟೆ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ, ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣಗಳು ದಾಖಲಾಗಿತ್ತು.

20 ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ಸ್ಯಾಡೋ ಆನಂದಪುರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಲಾರಿಯನ್ನ ಅಡ್ಡಹಾಕಿ ಚಾಲಕನ ಮೊಬೈಲ್ ಮತ್ತು ಹಣ ಕಿತ್ತುಕೊಂಡು ಓಡಿಹೋಗಿದ್ದ.ಪೆಟ್ರೋಲ್ ಬಂಕ್ ನಲ್ಲಿ ಹಣ ನೀಡದೆ ಟೋಪಿಹಾಕಿ ಪರಾರಿಯಾಗಿದ್ದ ಸಚಿನ್ ಯಾನೆ ಸ್ಯಾಡೋ ವಿರುದ್ಧ ಪೆಟ್ರೋಲ್ ಬಂಕ್ ನ ಸಂಘದ ಅಧ್ಯಕ್ಷ ಮತ್ತು ಎಂಎಲ್ ಸಿ ಅರುಣ್ ಎಸ್ಪಿ ಅವರಿಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ಆನಂದಪುರ ಮತ್ತು ಎಸ್ಪಿಗೆ ಸಚಿನ್ ದೂರು ನೀಡಿದ್ದರು.

Advertisements

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಪೊಲೀಸರ ಗುಂಡಿನ ಸದ್ದು ಕೇಳಿ ಬಂದಿದೆ. ಶ್ಯಾಡೋ ಸಚಿನ್‌ ಎಂಬ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

1001700605

ಸ್ಯಾಡೋ ಸಚಿನ್ ಎಂಬುವವನ ಮೇಲೆ 30 ಪ್ರಕರಣವಿದ್ದು ಪ್ರಕರಣದ ಆರೋಪಿಯನ್ನು ಮಂಗಳವಾರ ಮಧ್ಯಾಹ್ನ ಮೆಣಸಿನಸರ ಬಳಿ ಈತನನ್ನ ಬಂಧಿಸುವ ಸಂದರ್ಭದಲ್ಲಿ ಆರೋಪಿಯು ಹೆಡ್ ಕಾನ್ಸೆಬಲ್ ಆಶೋಕ್ ರವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪಿಎಸ್‌ಐ ಯುವರಾಜ್ ರ ಮೇಲೆ ಹಲ್ಲೆ ಮಾಡಲು ಯತ್ನ ಮಾಡಿದ್ದಾನೆ ಎಂಬ ಮಾಹಿತಿಯಾಗಿದೆ.

ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ.ಒಂದು ಸುತ್ತು ಪಿಎಸ್ಐ ಗುಂಡು ಹಾರಿಸಿದ್ದಾರೆ. ನಂತರ ಆತನ ಎಡಗಾಲಿಗೆ ಗುಂಡು ಹಾರಿಸಿ ರಕ್ಷಣೆ ಮಾಡಲಾಗಿದೆ. ಗಾಯಗೊಂಡ ಸಿಬ್ಬಂದಿ ಮತ್ತು ಸಿಬ್ಬಂದಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X