ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

Date:

Advertisements

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ ಖಾಕಿ ಪಡೆ ಸುತ್ತುವರಿದಿದೆ. ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಂಬಂಧ ನೋಟಿಸ್ ನೀಡಿದ್ದರೂ ವಿಚಾರಣೆಗೆ ಠಾಣೆಗೆ ಹಾಜರಾಗದ ಹಿನ್ನೆಲೆ ಯೂಟ್ಯೂಬರ್ ಸಮೀರ್.ಎಮ್.ಡಿ ಬಂಧನ ಮಾಡಲು ವಾರೆಂಟ್ ಜತೆಗೆ ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅನಂದ್.ಎಮ್ ರವರ ನೇತೃತ್ವದ ತಂಡ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಯೂಟ್ಯೂಬರ್ ಸಮೀರ್.ಎಮ್.ಡಿ ಬಾಡಿಗೆ ಮನೆಗೆ ಆ.21 ರಂದು ಸುತ್ತುವರಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸ್ವತಃ ಹೋರಾಟಗಾರ ಗಿರೀಶ್ ಮಟ್ಟಣ್ಣಣವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಾಕಿದ್ದಾರೆ‌.

Advertisements

ಸಮೀರ್‌ ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದಿದ್ದ ಖಾಕಿ ಪಡೆ ಕೊನೆಗೂ ಮನೆಯನ್ನು ಕಂಡುಹಿಡಿದು ಸಮೀರ್‌ ತಾಯಿಯನ್ನು ವಿಚಾರಣೆ ಮಾಡಿ ಮಾಹಿತಿ ಪಡೆದಿದ್ದಾರೆ. ಸಮೀರ್‌ ಬೇರೊಂದು ಪ್ರಕರಣದ ನಿಮಿತ್ತ ಹಿರಿಯ ವಕೀಲರನ್ನು ಕಾಣುವ ಸಲುವಾಗಿ ಬೆಳಿಗ್ಗೆಯೆ ಮನೆಯಿಂದ ತೆರಳಿದ್ದರು ಅಂತ ಅವರ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಮೀರ್‌ ಪರ ವಕೀಲರ ಸಮ್ಮುಖದಲ್ಲಿ ಪೊಲೀಸರು ಸಮೀರ್‌ ತಾಯಿಯವರನ್ನು ವಿಚಾರಿಸಿದ್ದು, ಸಮೀರ್‌ ತಾಯಿ ಸಕಾರಾತ್ಮಕವಾಗಿ ಸ್ಪಂದಿಸಿ ಮನೆಯೆಲ್ಲ ತೋರಿಸಿದ್ದಾರೆ. ಮುಂದುವರೆದು, ಮಗ ಬಂದ ಕೂಡಲೇ ಪೊಲೀಸರ ಬಳಿಗೆ ವಕೀಲರೊಂದಿಗೆ ಕಳುಹಿಸುವುದಾಗಿ ಸಮೀರ್‌ ತಾಯಿ ಹೇಳಿದ್ದರಿಂದ ಪೊಲೀಸರು ಸ್ಥಳದಿಂದ ನಿರ್ಗಮಿಸಿದ್ದಾರೆ.

ಸಮಿರ್‌ ಮನೆ ಮುಂದೆ ಬೆಳಿಗ್ಗೆಯಿಂದಲೇ ಜಮಾಯಿಸಿದ್ದ ಪೊಲೀಸರ ಬಳಿ ಆತನ ಮನೆ ಶೋಧಿಸಲು ಸರ್ಚ್‌ ವಾರೆಂಟ್‌ ಇರಲಿಲ್ಲ. ಅಲ್ಲದೆ, ಸಮೀರ್‌ನನ್ನು ಬಂಧಿಸಲು ಅರೆಸ್ಟ್‌ ವಾರೆಂಟ್‌ ಕೂಡ ಪೊಲೀಸರ ಬಳಿ ಇರಲಿಲ್ಲ ಎಂಬುದಾಗಿ ಸಮೀರ್‌ ತಾಯಿ ಮತ್ತು ಸಮೀರ್‌ ಪರ ವಕೀಲರು ಈದಿನ.ಕಾಂಗೆ ತಿಳಿಸಿದ್ದಾರೆ.

1001880739
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X