ಚಿಕ್ಕಬಳ್ಳಾಪುರ | ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ವಿತರಣೆ; ತನಿಖೆಗೆ ನ್ಯಾ. ಕೆ ಎನ್‌ ಫಣೀಂದ್ರ ಭರವಸೆ

Date:

Advertisements
  • ಕಳಪೆ ಮೊಟ್ಟೆ ಕುರಿತು ಉಪಲೋಕಾಯುಕ್ತರ ಗಮನ ಸೆಳೆದ ಉಪನ್ಯಾಸಕ ಎನ್ ಚಂದ್ರಶೇಖರ್
  • ಸ್ವಯಂಪ್ರೇರಿತ ದೂರು ದಾಖಲಿಸಿ, ಸೂಕ್ತ ಕ್ರಮ ಜರುಗಿಸುವುದಾಗಿ ನ್ಯಾ. ಕೆ ಎನ್ ಫಣೀಂದ್ರ ಭರವಸೆ

ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಗುತ್ತಿಗೆದಾರರು ಕಳಪೆ ಮೊಟ್ಟೆಗಳನ್ನು ಪೂರೈಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿ, ತನಿಖೆ ನಡೆಸಲಾಗುವುದು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಭರವಸೆ ನೀಡಿದ್ದಾರೆ.

ಉಪನ್ಯಾಸಕ ಎನ್ ಚಂದ್ರಶೇಖರ್ ಅವರು ಕಳಪೆ ಮೊಟ್ಟೆ ವಿಷಯ ಕುರಿತು ಉಪಲೋಕಾಯುಕ್ತರ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಉಪಲೋಕಾಯುಕ್ತರು, “ಈ ಕುರಿತು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ತನಿಖೆ ನಡೆಸಲಾಗುವುದು. ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು” ಎಂದು ಹೇಳಿದ್ದಾರೆ.

“ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆಗಳು ಸರಬರಾಜಾಗುತ್ತಿವೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಮುಗ್ದ, ಅಮಾಯಕ ಮಕ್ಕಳ ಆರೋಗ್ಯ ಮತ್ತು ಪ್ರಾಣದ ಬಗ್ಗೆ ಗಮನಿಸಬೇಕಾಗಿರುವುದು ಅನಿವಾರ್ಯವಾಗಿದೆ. ಯಾರ ಮಕ್ಕಳಾದರೇನು? ಮಕ್ಕಳು ಮಕ್ಕಳೇ ಅಲ್ಲವೇ? ಇದು ಸಂಬಂಧಪಟ್ಟವರ ಗಮನಕ್ಕೆ ಈವರೆಗೆ ಬಂದೇ ಇಲ್ಲವೇ” ಎಂದು ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ‌ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬೀದರ್ ವತಿಯಿಂದ...

ವಿಜಯಪುರ-ಬಬಲೇಶ್ವರ ಆ.27ರಿಂದ ಎರಡು ಬಸ್ಸುಗಳ ಸೇವೆ ಪ್ರಾರಂಭ

ವಿಜಯಪುರ-ಬಬಲೇಶ್ವರ ಮತ್ತು ಬಬಲೇಶ್ವರ-ವಿಜಯಪುರ ನಡುವೆ ಆಗಸ್ಟ್ 27 ರಿಂದ ಸಾಮಾನ್ಯ ಸಾರಿಗೆ...

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ....

ಹಾವೇರಿ | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ಜಾಗೃತಿ ಅಭಿಯಾನ: ಜೇಬ್ರಿನ್ ಖಾನ್

"ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ಆಗಸ್ಟ್...

Download Eedina App Android / iOS

X