ಬೀದರ್ | ಎಸ್ಪಿ ಚನ್ನಬಸವಣ್ಣ ಎಸ್.ಎಲ್. ವರ್ಗಾವಣೆ : ಪ್ರದೀಪ ಗುಂಟಿ ನೂತನ ಎಸ್ಪಿ

Date:

Advertisements

ಬೀದರ್ ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯನ್ನಾಗಿ ಪ್ರದೀಪ ಗುಂಟಿ ಅವರನ್ನು ನೇಮಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲಿನ ಎಸ್ಪಿ ಚನ್ನಬಸವಣ್ಣ ಎಸ್‌.ಎಲ್. ಅವರನ್ನು ಬೆಂಗಳೂರು ಪ್ರಧಾನ ಕಚೇರಿ ಆಡಳಿತ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಕಾರಾಗೃಹ ವಿಭಾಗದಲ್ಲಿದ್ದ ಪ್ರದೀಪ ಗುಂಟಿ ಅವರನ್ನು ಬೀದರ್‌ ಎಸ್ಪಿಯಾಗಿ ನೇಮಿಸಲಾಗಿದೆ.

ಬುಧವಾರ ನೂತನ ಎಸ್ಪಿ ಪ್ರದೀಪ ಗುಂಟಿ ಅವರಿಗೆ ಅಧಿಕಾರ ಹಸ್ತಾಂತರಿಸಿದ ಫೋಟೊವನ್ನು ಬೀದರ್‌ ಎಸ್ಪಿ ಅಧಿಕೃತ ಫೇಸ್ಬುಕ್‌ ಖಾತೆಯಲ್ಲಿ ಹಂಚಿಕೊಂಡಿರುವ ಚನ್ನಬಸವಣ್ಣ ಎಸ್‌.ಎಲ್. ಅವರು ʼಸರ್ಕಾರದಿಂದ ನನಗೆ ವರ್ಗಾವಣೆಯಾಗಿರುವ ಅಧಿಕೃತ ಆದೇಶ ಬಂದಿದೆ, ಕಳೆದ 1 ವರ್ಷ 5 ತಿಂಗಳು ನನ್ನ ಎಲ್ಲ ಸಹೋದ್ಯೋಗಿಗಳೊಂದಿಗೆ ತಮ್ಮ ಸೇವೆ ಮಾಡುವ ಸೌಭಾಗ್ಯ ದೊರೆತದ್ದು ನನ್ನ ವೃತ್ತಿ ಮತ್ತು ವೈಯಕ್ತಿಕ ಬದುಕಿನ ಅವಿಸ್ಮರಣೀಯ ಕ್ಷಣಗಳೆಂದು ಭಾವಿಸಿಕೊಂಡಿದ್ದೇನೆ. ಬೀದರ್ ಭಾರತದಲ್ಲಿ ಇರುವುದಷ್ಟೇ ಅಲ್ಲದೆ ಇಡೀ ಭಾರತವೇ ಬೀದರ್‌ನಲ್ಲಿದೆ ಎನ್ನುವುದು ಸೇವಾ ಅವಧಿಯಲ್ಲಿ ನನ್ನ ಅನುಭವಕ್ಕೆ ಬಂದಿದೆ. ಈ ಭ್ರಾತೃತ್ವ ಹೀಗೆ ಮುಂದುವರೆಯಲಿʼ ಎಂದು ಹಾರೈಸಿ ಜಿಲ್ಲೆಯ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

Advertisements

ವರ್ಗಾವಣೆ ಆದೇಶ ರದ್ದತಿಗೆ ಆಗ್ರಹ :

ಒಂದುವರೆ ವರ್ಷಗಳ ಅವಧಿಯಲ್ಲಿ ಎಸ್ಪಿಯಾಗಿದ್ದ ಚನ್ನಬಸವಣ್ಣ ಎಸ್. ಎಲ್‌ ಅವರು ಜಿಲ್ಲೆ ಸಮಗ್ರ ಅಪರಾಧ ಮುಕ್ತ ಮಾಡುವ ನಿಟ್ಟಿನಲ್ಲಿ ಇಲಾಖೆಯಲ್ಲಿ ಹತ್ತಾರು ಹೊಸ ಯೋಜನೆಗಳನ್ನು ರೂಪಿಸಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ. ಇಂಥ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್‌ ಅಧಿಕಾರಿಯನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿರುವುದು ಬೇಸರ ಮೂಡಿಸಿದೆ. ಕೂಡಲೇ ವರ್ಗಾವಣೆ ಆದೇಶ ರದ್ದುಗೊಳಿಸುವಂತೆ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಂಡು ಆಗ್ರಹಿಸುತ್ತಿದ್ದಾರೆ.

ಮಂಗಳವಾರ ವರ್ಗಾವಣೆ ಆದೇಶ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅನೇಕ ಸಾಮಾಜಿಕ ಹೋರಾಟಗಾರರು, ಪ್ರಜ್ಞಾವಂತರು ವರ್ಗಾವಣೆ ರದ್ದುಗೊಳಿಸಲು ಒತ್ತಾಯಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ವಿನಯ ಮಾಳಗೆ ಅವರು ಫೇಸ್‌ಬುಕ್ ಖಾತೆಯಲ್ಲಿ ʼನಿಮ್ಮ ವರ್ಗಾವಣೆ ಸುದ್ದಿ ಜಿಲ್ಲೆಯ ಪ್ರಜ್ಞಾವಂತರ ಪಾಲಿಗೆ ಇದು ನಿರಾಶೆಯ ಭಾವನೆ ಉಂಟು ಮಾಡಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ಬದಲಾವಣೆ ಬೀಸುತ್ತಿರುವ ಸಮಯದಲ್ಲಿ ಈ ವರ್ಗಾವಣೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮತ್ತು ಅಪರಾಧ ಮುಕ್ತ ಮಾಡುವ ಜಿಲ್ಲೆಯ ಗುರಿಯನ್ನು ಕುಸಿತಗೊಳಿಸುತ್ತದೆ. ನಿಮ್ಮ ಆಡಳಿತ ಕಾಲಾವಧಿಯಲ್ಲಿ ಅಕ್ರಮ ದಂಧೆಗಳು ಬಹುತೇಕ ಹತೋಟಿಗೆ ಬಂದಿತು, ಆದರೆ ನಿಮ್ಮ ವರ್ಗಾವಣೆಯಿಂದ  ಅಕ್ರಮ ದಂಧೆಕೋರರಿಗೆ ಮತ್ತೆ ಖುಷಿಪಡುವಂತಾಗಿದೆʼ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X