ದಾವಣಗೆರೆ | ಅಂಬೇಡ್ಕರ್ ಬಗ್ಗೆ ನಿಂದನಾತ್ಮಕ ಹೇಳಿಕೆ: ಕ್ರಮಕ್ಕೆ ಆಗ್ರಹಿಸಿ ರಾಷ್ಟ್ರಪತಿಗೆ ಪ್ರಜಾ ಪರಿವರ್ತನಾ ವೇದಿಕೆ ಪತ್ರ

Date:

Advertisements

ಅಂಬೇಡ್ಕರ್ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ವಜಾಗೊಳಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆಯ ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಷ್ಟ್ರಪತಿಯವರಿಗೆ ಪತ್ರ ಬರೆಯುವುದರ ಮೂಲಕ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

“ಸಂಸತ್ ಕಲಾಪದ ವೇಳೆ ಅಂಬೇಡ್ಕರ್ ರವರು ವ್ಯಸನ ಎಂಬುವ ರೀತಿ ಅಕ್ಷಮ್ಯದ ಮಾತುಗಳನ್ನು ಆಡಿರುವ ಅಮಿತ್ ಶಾ ಅವರು ವೈರುಧ್ಯಾತ್ಮಕ ಪದಗಳನ್ನು ಬಳಸಿದ್ದು, ಅವರು ಈ ಕೂಡಲೇ ರಾಷ್ಟ್ರದ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಮುಖಂಡರು ಈ ರೀತಿಯ ಅಂಬೇಡ್ಕರ್ ವಿರೋಧಿ ಭಾವನೆಯನ್ನು ಬಿಡಬೇಕು. ಈ ರೀತಿಯ ಅಂಬೇಡ್ಕರ್ ವಿರೋಧಿ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ನಮ್ಮ ಸಮುದಾಯಕ್ಕೆ ಅಂಬೇಡ್ಕರ್ ಅವರು ಭಗವಂತನಿಗಿಂತಲೂ ಕಡಿಮೆ ಏನಲ್ಲ. ಶತಮಾನಗಳಿಂದಲೂ ತುಳಿಯಲ್ಪಟ್ಟ ದಲಿತರ, ಶೋಷಿತರ, ಮಹಿಳೆಯರ, ಬಡವರ್ಗದ ಜನರಿಗೆ ಸಂವಿಧಾನ ನೀಡಿ, ಸಮಾನತೆಯನ್ನು ಕಲ್ಪಿಸಿದ ದೇವರಾಗಿದ್ದಾರೆ. ಅವರು ರಚಿಸಿದ ಸಂವಿಧಾನವನ್ನು ಧರ್ಮ ಗ್ರಂಥ ಎಂದುಕೊಂಡು ದೇವರಂತೆ ಆರಾಧಿಸುತ್ತೇವೆ” ಎಂದು ರಾಷ್ಟ್ರಪತಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

“ಅವಮಾನಕರ ಹೇಳಿಕೆ ನೀಡಿದ ಅಮಿತ್ ಶಾ ಅವರಿಗೆ ನಾಚಿಕೆಯಾಗಬೇಕು. ಈ ಕೂಡಲೇ ಅವರು ರಾಜೀನಾಮೆ ನೀಡಿ ಮನೆಗೆ ಹೋಗಬೇಕು. ಅವರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕು” ಎಂದು ಜಿಲ್ಲಾ ಉಪಾಧ್ಯಕ್ಷ ಲಿಂಗರಾಜು ಗಾಂಧಿನಗರ,
ರಾಕೇಶ್, ಅಯಾಜ್, ಸಾದಿಕ್ ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಪತ್ರ ರವಾನಿಸಿ ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X