ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಪಿಪಿ ರಾಜೀನಾಮೆ

Date:

Advertisements

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಪರವಾಗಿ ವಾದ ಮಂಡಿಸುತ್ತಿದ್ದ ಹೆಚ್ಚುವರಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಜಾಯ್ನಾ ಕೊಥಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ಎಸ್‌ಪಿಪಿಯಾಗಿ ಬಿ.ಎನ್‌ ಜಗದೀಶ್ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಅಲ್ಲದೆ, ನ್ಯಾಯಾಲಯದ ವಿಚಾರಣೆ ವೇಳೆ ಪ್ರಾಸಿಕ್ಯೂಷನ್‌ಅನ್ನು ಸಮರ್ಥಿಸಲು ಹೆಚ್ಚುವರಿ ಎಸ್‌ಪಿಪಿಗಳಾಗಿ ಅಶೋಕ್ ಎನ್ ನಾಯಕತ್ ಮತ್ತು ಜಾಯ್ನಾ ಕೊಥಾರಿ ಅವರನ್ನು ನೇಮಿಸಲಾಗಿತ್ತು. ಆದರೆ, ಇದೀಗ, ಅವರು ರಾಜೀನಾಮೆ ನೀಡಿದ್ದಾರೆ.

ಚುನಾವಣೆ ಮುಗಿದ ಬಳಿಕ, ಜರ್ಮನಿಗೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಬರೋಬ್ಬರಿ 43 ದಿನಗಳ ಬಳಿಕ ರಾಜ್ಯಕ್ಕೆ ಮರಳಿದ್ದರು. ಅವನ್ನು ಎಸ್‌ಐಟಿ ಬಂಧಿಸಿದ್ದು, ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X