ಬೀದರ್ | ಔರಾದ್ ಪಟ್ಟಣ ಪಂಚಾಯತಿಗೆ ಅಧ್ಯಕ್ಷ- ಉಪಾಧ್ಯಕ್ಷ ಅವಿರೋಧ ಆಯ್ಕೆ

Date:

Advertisements


ಔರಾದ್‌ ಪಟ್ಟಣ ಪಂಚಾಯತಿಯ 10ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಸರುಬಾಯಿ ವೈಜಿನಾಥ ಘೂಳೆ ಮತ್ತು ಉಪಾಧ್ಯಕ್ಷರಾಗಿ ರಾಧಾಬಾಯಿ ಕೃಷ್ಣ ನರೋಟೆ ಅವರು ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 20 ಸದಸ್ಯ ಬಲ ಹೊಂದಿರುವ ಪಟ್ಟಣ ಪಂಚಾಯತಿಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ವಾರ್ಡ್-19ರ ಸದಸ್ಯೆ ಸರುಬಾಯಿ ವೈಜಿನಾಥ ಘೂಳೆ ಅಧ್ಯಕ್ಷ ಸ್ಥಾನಕ್ಕೆ ಮತ್ತು ವಾರ್ಡ್-1ರ ಸದಸ್ಯೆ ರಾಧಾಬಾಯಿ ಕೃಷ್ಣ ನರೋಟೆ ಉಪಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ನಾಮಪತ್ರ ಸಲ್ಲಿಸದ ಕಾರಣಕ್ಕೆ ಇಬ್ಬರೂ ಅವಿರೋಧ ಆಯ್ಕೆ ಎಂದು ಚುನಾವಣಾಧಿಕಾರಿಗಳಾದ ಮಲಶೆಟ್ಟಿ ಚಿದ್ರೆ ಘೋಷಿಸಿದರು.

ಔರಾದ್ ಶಾಸಕ ಪ್ರಭು ಬಿ.ಚವ್ಹಾಣ ಅವರು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸನ್ಮಾನಿಸಿ ಮಾತನಾಡಿ, ʼಔರಾದ(ಬಿ) ಪಟ್ಟಣವನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಲು ನಿರಂತರ ಶ್ರಮ ವಹಿಸುತ್ತಿದ್ದೇನೆ. ಹೊಸದಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಎಲ್ಲ ಸದಸ್ಯರ ಸಹಯೋಗದೊಂದಿಗೆ ಔರಾದ ಪಟ್ಟಣದ ಅಭಿವೃದ್ಧಿಗಾಗಿ ಶ್ರಮಿಸಬೇಕು. ಕುಡಿಯುವ ನೀರು, ರಸ್ತೆ, ವಿದ್ಯುತ್, ಸ್ವಚ್ಛತೆ, ಬೀದಿ ದೀಪಗಳನ್ನು ಅಳವಡಿಸುವುದು ಒಳಗೊಂಡಂತೆ ಪಟ್ಟಣದ ನಿವಾಸಿಗಳಿಗೆ ಅಗತ್ಯವಾಗಿರುವ ಎಲ್ಲ ಸೌಕರ್ಯಗಳನ್ನು ಒದಗಿಸಬೇಕು. ನಿಮ್ಮ ಎಲ್ಲ ಅಭಿವೃದ್ಧಿಪರ ಕೆಲಸಗಳಿಗೆ ನನ್ನ ಸಹಕಾರ ಸದಾ ಇರುತ್ತದೆ. ಪಟ್ಟಣವನ್ನು ಮಾದರಿಯನ್ನಾಗಿಸಲು ಕಾರ್ಯಪ್ರವೃತ್ತರಾಗಬೇಕುʼ ಎಂದು ತಿಳಿಸಿದರು.

Advertisements

ಔರಾದ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿಸಲು ಶ್ರಮಿಸುತ್ತಿದ್ದೇನೆ. ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗುತ್ತಿದೆ. ಮುಂದಿನ ದಿನಗಳಲ್ಲಿ ಪುರಸಭೆಯನ್ನಾಗಿ ಮಾಡಲಾಗುತ್ತದೆ. ಪಟ್ಟಣದಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕಾರಂಜಾ ಜಲಾಶಯದಿಂದ ಪಟ್ಟಣಕ್ಕೆ ನೀರು ಪೂರೈಸುವ ಯೋಜನೆಗೆ ಮಂಜೂರಾತಿ ಸಿಕ್ಕಿದ್ದು, ಕೆಲಸ ಆರಂಭವಾಗಲಿದೆ. ಹೀಗೆ ಪಟ್ಟಣದ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದು, ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಪಟ್ಟಣದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಬೇಕು. ಯಾವುದೇ ರೀತಿಯ ದೂರುಗಳು ಬಾರದಂತೆ ಕೆಲಸ ಮಾಡಬೇಕುʼ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೀದರ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಕಿರಣ ಪಾಟೀಲ, ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಮಂಡಲ ಉಸ್ತುವಾರಿ ಮಹೇಶ್ವರ ಸ್ವಾಮಿ, ಕಾರ್ಯದರ್ಶಿ ಖಂಡೋಬಾ ಕಂಗಟೆ, ಪಟ್ಟಣ ಪಂಚಾಯತ್ ಸದಸ್ಯರಾದ ಅಂಬಿಕಾ ಕೇರಬಾ ಪವಾರ್, ಸಂತೋಷ ಪೋಕಲವಾರ, ಧೊಂಡಿಬಾ ನರೋಟೆ, ಶಿವಾಜಿ ಲಕ್ಷ್ಮಣ, ಸಂಜುಕುಮಾರ ವಡೆಯಾರ್, ಅಬ್ಜಲ್ ಪಠಾಣ್, ಶೀಲಾಬಾಯಿ ರಾಮಚಂದ್ರ, ಸಂಗೀತಾ ಯಾದವರಾವ, ಪ್ರೇರಣಾ ಬಾಬು, ಬನಸಿಲಾಲ ಖಿರಾನಾಯ್ಕ, ದಯಾನಂದ ಘೂಳೆ, ಸುರೆಖಾ ಸುರ್ಯಕಾಂತ, ಗುಂಡಪ್ಪಾ ಮುದಾಳೆ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶಿವರಾಜ ಅಲ್ಮಾಜೆ, ಮುಖಂಡರಾದ ರಮೇಶ ಉಪಾಸೆ, ಸಚಿನ ರಾಠೋಡ್, ಖಾಜಾಯಿಯ್ಯಾ, ಸಚಿನ್ ಬಿರಾದಾರ, ರವೀಂದ್ರ ರೆಡ್ಡಿ, ಪ್ರಕಾಶ ಜೀರ್ಗೆ, ರಾಜೇಂದ್ರ ಮಾಳಿ, ಬಸವರಾಜ ಹಳ್ಳೆ, ಗೋವಿಂದ ರೆಡ್ಡಿ, ಪ್ರದೀಪ ಪವಾರ್, ಸುಜಿತ್ ರಾಠೋಡ್, ಉದಯ ಸೋಲಾಪೂರೆ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X