ರಾಯಚೂರು | ವೇಶ್ಯಾವಾಟಿಕೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ. ಸಾತ್ವಿಕ್

Date:

Advertisements

ವೈಶ್ಯಾವಾಟಿಕೆ ಕಾನೂನಾತ್ಮಕವಾಗಿ ಅವಕಾಶವಿದೆ. ಆದರೆ ಒತ್ತಾಯಪೂರ್ವಕ ವೇಶ್ಯಾವಾಟಿಕೆ ದಂಧೆ ಅಪರಾಧವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿಯ ನ್ಯಾಯಾಧೀಶ ಎಚ್.ಎನ್.ಸಾತ್ವಿಕ್ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಉತ್ತರ ಕರ್ನಾಟಕ ಮಹಿಳಾ ಒಕ್ಕೂಟ, ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕ್ಸಸ್, ಸಂಗಮ ಮತ್ತು ಬೆಳದಿಂಗಳು ಮಹಿಳಾ ಒಕ್ಕೂಟಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ವಕಾಲತ್ತು ಸಭೆ ಉದ್ಘಾಟಿಸಿ ಮಾತನಾಡಿದರು.

ʼವೈಶ್ಯಾವಾಟಿಕೆ ಮಹಿಳೆಯರಿಗೆ ಕಾನೂನಿನ ರಕ್ಷಣೆಯಿದೆ. ವೇಶ್ಯಾವಾಟಿಕೆಯಲ್ಲಿ ತೊಡಗಿರುವ ಮಹಿಳೆಯರಿಗೆ ಸಂವಿಧಾನ ಹಕ್ಕುಗಳಿವೆ. ಸಾರ್ವಜನಿಕರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದು ಅವಶ್ಯಕವಾಗಿದೆ. ವೈಶ್ಯವಾಟಿಕೆ ಹೆಸರಿನಲ್ಲಿ ಮಹಿಳೆಯರ ಶೋಷಣೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವೈಶ್ಯವಾಟಿಕೆ ಮಹಿಳೆಯರ ಮೇಲೆ ಶೋಷಣೆಯಾದರೆ ಜಿಲ್ಲಾ ಮತ್ತು ತಾಲೂಕು ಕಾನೂನು ಸೇವಾ ಪ್ರಾಧಿಕಾರಗಳನ್ನು ಸಂಪರ್ಕಿಸಿ ನೆರವು ಪಡೆಯಬಹುದಾಗಿದೆʼ ಎಂದರು.

Advertisements

ಡಿವೈಎಸ್‌ಪಿ ಸತ್ಯನಾರಾಯಣ ಮಾತನಾಡಿ, ʼಲೈಂಗಿಕ ಶೋಷಣೆಗೆ ಒಳಗಾದ ಮಹಿಳೆಯರು ಸ್ವಇಚ್ಚೆಯಿಂದ ವೇಶ್ಯಾವಾಟಿಕೆಯಲ್ಲಿ ತೊಡಗಿರುವದಿಲ್ಲ. ಅವರ ನೋವು, ಸಂಕಷ್ಟಗಳಿಂದ ಶೋಷಣೆಗೆ ಒಳಪಡುತ್ತಾರೆ. ಶೋಷಣೆಗೆ ಒಳಗಾದ ಮಹಿಳೆಯರನ್ನು ರಕ್ಷಿಸಿ ಸರ್ಕಾರದ ಸೌಲಭ್ಯಗಳು ಒದಗಿಸಬೇಕುʼ ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ನಾಸೀರ್, ಮುಕ್ತಾ ಪೂಜಾರ, ವಂದನಾ, ಹುಲಿಗೆಮ್ಮ ಸೇರಿದಂತೆ ಅನೇಕರಿದ್ದರು. ಅನೇಕರು ಎದುರಿಸುತ್ತಿರುವ ಸಮಸ್ಯೆಗಳ, ಸವಾಲುಗಳ ಕುರಿತು ಅಭಿಪ್ರಾಯ ತಿಳಿಸಿದರು.

ವರದಿ: ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X