ಚಿಂತಾಮಣಿ | ಬೊಲೆರೋ ಟೆಂಪೋ ಬಸ್ ನಡುವೆ ಅಪಘಾತ; ಚಾಲಕ ಸಾವು

Date:

Advertisements

ಬೊಲೆರೋ ಟೆಂಪೊಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಚೇಳೂರು ರಸ್ತೆಯ ಸಿದ್ದೇಪಲ್ಲಿ ಕ್ರಾಸ್‌ ಬಳಿ ಮಂಗಳವಾರ ಬೆಳಗ್ಗೆ 7 ಗಂಟೆ ಸಮಯದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಪಾತಪಾಳ್ಯ ಸಮೀಪದ ಶಿವಪುರ ಗ್ರಾಮದ ರೆಡ್ಡಪ್ಪ(35) ಮೃತ ದುರ್ದೈವಿ. ಮಂಗಳವಾರ ಬೆಳಗ್ಗೆ ನೆರೆಯ ಆಂಧ್ರದಿಂದ ಚಿಂತಾಮಣಿ ಟೊಮೊಟೋ ಮಾರುಕಟ್ಟೆಗೆ ಟೊಮೊಟೋ ಸಾಗಿಸುತ್ತಿದ್ದ ಬೊಲೆರೋ ಟೆಂಪೋಗೆ ಚಿಂತಾಮಣಿ ಕಡೆಯಿಂದ ಆಂಧ್ರ ಕಡೆಗೆ ಚಲಿಸುತ್ತಿದ್ದ ಬಸ್‌ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೊಲೆರೋ ಟೆಂಪೋ ಚಾಲಕ ರೆಡ್ಡಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖಾಸಗಿ ಬಸ್‌ ಚಾಲಕ ಕಿರಣ್‌ ಹಾಗೂ ಇತರೆ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಕ್ಷೇತರರ ಪಾಲಾದ ಗೌರಿಬಿದನೂರು ನಗರಸಭೆ

Advertisements

ಅಪಘಾತದ ಹಿನ್ನೆಲೆ ರಸ್ತೆ ತುಂಭಾ ಟೊಮೊಟೋ ಚೆಲ್ಲಾಪಿಲ್ಲಿಯಾಗಿದ್ದ ಹಿನ್ನೆಲೆ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕಾಗಮಿಸಿದ ಕೆಂಚಾರ್ಲಹಳ್ಳಿ ಪೊಲೀಸರು ಟ್ರಾಫಿಕ್‌ ತೆರವುಗೊಳಿಸಿ ಸಂಚಾರಕ್ಕೆಅನುವು ಮಾಡಿಕೊಟ್ಟಿದ್ದಾರೆ. ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X