ರಾಮನಗರ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆ: ಪ್ರಗತಿಪರ ಸಂಘಟನೆಗಳಿಂದ ಬಹಿಷ್ಕಾರ

Date:

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ರಾಮನಗರ ಜಿಲ್ಲಾಧಿಕಾರಿಗಳು ಕರೆದಿದ್ದು, ಪ್ರಗತಿಪರ ಸಂಘಟನೆಗಳು ಆ ಸಭೆಯನ್ನು ಬಹಿಷ್ಕರಿಸಿವೆ.

- Advertisement -

ಜಿಲ್ಲಾಧಿಕಾರಿ ಕಚೇರಿಯ ಸುತ್ತಮುತ್ತಲಿನಲ್ಲಿ ಪ್ರತಿಭಟನೆ ನಡೆಸದಂತೆ ಹೊರಡಿಸಿರುವ 144 ಸೆಕ್ಷನ್ ಆದೇಶವನ್ನು ಹಿಂಪಡೆಯುವವರೆಗೂ ಜಿಲ್ಲಾಧಿಕಾರಿ ಕರೆಯುವ ಯಾವುದೇ ಸಭೆಯಲ್ಲಿ ಭಾಗವಹಿಸುವುದಿಲ್ಲವೆಂದು ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕನಕಪುರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾಡಳಿತ ಮತ್ತು ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸದಂತೆ ಜಿಲ್ಲಾಧಿಕಾರಿಗಳು 144 ಸೆಕ್ಷನ್ ಆದೇಶವನ್ನು ಹೊರಡಿಸಿದ್ದು, ಅದು ಪ್ರಜೆಗಳ ಸಾಂವಿಧಾನಿಕ ಹಕ್ಕನ್ನು ದಮನಗೊಳಿಸುವಂತೆ ಮಾಡಿದೆ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದ ಬಗ್ಗೆ ಎಲ್ಲ ಸಂಘಟನೆಗಳಿಗೆ ಅಪಾರ ಗೌರವವಿದೆ. ಆದರೆ ಪ್ರಜೆಗಳ ಹಕ್ಕುಗಳನ್ನು ನಿರ್ಲಕ್ಷಿಸುವ ಅಧಿಕಾರಿಗಳು ಅದನ್ನು ಆಚರಿಸಲು ಯೋಗ್ಯರಲ್ಲ. ಪ್ರತಿಭಟನೆಯ ವೇಳೆ ಅಧಿಕಾರಿಗಳು ಸಂಘಟನೆಗಳ ನಾಯಕರ ಬಗ್ಗೆ ತಿರಸ್ಕಾರ ತೋರಿರುವುದರಿಂದ, ಈಗ ಸಂಘಟನೆಗಳ ನಾಯಕರನ್ನು ಸಭೆಗೆ ಆಹ್ವಾನಿಸುವುದು ವ್ಯರ್ಥ ಎಂದು ಹೇಳಿದರು.

ಜಿಲ್ಲಾಧಿಕಾರಿಗಳ ಸರ್ವಾಧಿಕಾರಿ ನಡೆಯ ಎದುರು ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ವಿಷಯದ ಕುರಿತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಈ ಸಭೆಯನ್ನು ಬಹಿಷ್ಕಾರ ಮಾಡಿದ ಸಂಘಟನೆಗಳಲ್ಲಿ ಕರ್ನಾಟಕ ರಾಜ್ಯ ರೈತ ವಿಭಾಗೀಯ ಉಪಾಧ್ಯಕ್ಷರಾದ ಮಲ್ಲಯ್ಯ, ಸಂಚಾಲಕರಾದ ಚೀಲೂರು ಮುನಿರಾಜು, ಜಿಲ್ಲಧ್ಯಕ್ಷರಾದ ತಿಮ್ಮೇಗೌಡ, ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ನೀಲೇಶ್‌ಗೌಡ, ನವ ನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ನರಸಿಂಹಮೂರ್ತಿ, ಕರುನಾಡ ಸೇನೆಯ ರಾಜ್ಯ ಉಪಾಧ್ಯಕ್ಷ ಎಂ. ಜಗದೀಶ್, ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ರಾಜು, ಕರವೇ ಸ್ವಾಭಿಮಾನಿ ಬಣದ ರಾಜ್ಯ ಉಸ್ತುವಾರಿ ಶಿವುಗೌಡ, ಕೆಆರ್‌ಎಸ್ ಪಕ್ಷದ ಪ್ರಶಾಂತ್ ಹೊಸದುರ್ಗ, ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆಯ ಕನ್ನಡ ಭಾಸ್ಕರ್, ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ಕಿರಣ್ ಸಾಗರ್ , ಮೂಲನಿವಾಸಿ ಕಾವಲು ಪಡೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ ಮೌರ್ಯ, ಹಲವಾರು ಸಂಘಟನೆಗಳ ನಾಯಕರು ಸಭೆಯಿಂದ ದೂರ ಉಳಿಯುವ ಸಮಾನ ಮನಸ್ಕ ನಿಲುವು ತಳೆದಿದ್ದೇವೆಯೆಂದು ಬೆಂಬಲ ಸೂಚಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...