ಬೀದರ್‌ | ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಕೆ: ಕೇಂದ್ರ ಸಚಿವ ಖೂಬಾ

Date:

Advertisements
  • ನೂತನ ಅನುಭವ ಮಂಟಪ ಕಾಮಗಾರಿ ಪೂರ್ಣಗೊಳ್ಳಲು ಉಳಿದ ಅನುದಾನ ಬಿಡುಗಡೆಗೆ ಮನವಿ
  • ಸಿಪೇಟ್ ಕೇಂದ್ರ, ಬೀದರ್‌ – ನಾಂದೇಡ್‌ ರೈಲ್ವೆ ಲೈನ್ ಕಾಮಗಾರಿಗೆ ರಾಜ್ಯ ಸರ್ಕಾರ ಸಹಕಾರ ನೀಡುವಂತೆ ಕೋರಿಕೆ

ಹಿಂದಿನ ಬಿಜೆಪಿ ಸರ್ಕಾರ ಬಸವಕಲ್ಯಾಣದ ನೂತನ ಅನುಭವ ಮಂಟಪಕ್ಕೆ 600 ಕೋಟಿ ರೂ. ಅನುದಾನ ನೀಡಿ, ರೂ. 200 ಕೋಟಿ ಬಿಡಗುಡೆಗೊಳಿಸಲಾಗಿತ್ತು, ಆದರೆ ಈ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲು ಉಳಿದ ಅನುದಾನ ಕೂಡಲೇ ಬಿಡುಗಡೆ ಮಾಡುವಂತೆ ಕೇಂದ್ರ ನೂತನ ಹಾಗೂ ನವಿಕರಿಸಬಹುದಾದ ಇಂಧನ ಮೂಲ ಹಾಗೂ ರಸಾಯನಿಕ, ರಸಗೊಬ್ಬರ ಖಾತೆ ಸಹ ಸಚಿವ ಭಗವಂತ ಖೂಬಾ ಸಿಎಂ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ, ಬೀದರ ಲೋಕಸಭಾ ಕ್ಷೇತ್ರದ ಅಭಿವೃದ್ದಿಗೆ ಸಂಬಂಧಿಸಿದಂತೆ ಮನವಿ ಪತ್ರಗಳು ಸಲ್ಲಿಸಿದ ಅವರು, ” ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಾಗಿರುವ ಕಾರಣಕ್ಕಾಗಿ ಕೇಂದ್ರ ಸರ್ಕಾರವು ಬೀದರ ಜಿಲ್ಲೆಗೆ ಸಿಪೇಟ್ ಕೇಂದ್ರ ಮಂಜೂರಾತಿ ನೀಡಿದೆ. ಸದರಿ ಕೇಂದ್ರದ ಕಟ್ಟಡ ಕಾಮಗಾರಿಗಾಗಿ ಔರಾದ (ಬಿ) ತಾಲೂಕಿನ ಬಲ್ಲೂರ (ಜೆ) ಗ್ರಾಮದ ಹತ್ತಿರ 10 ಎಕ್ಕರೆ ಜಮೀನು ಜಿಲ್ಲಾಡಳಿತದಿಂದ ಮಂಜೂರಾಗಿ ಕಳೆದ ವರ್ಷ ಭೂಮಿ ಪೂಜೆ ನಡೆದಿದೆ. ಇದಕ್ಕೆ ರಾಜ್ಯ ಸರ್ಕಾರದಿಂದ ನೀಡಬೇಕಾಗಿರುವ 50% ಅನುದಾನ ನೀಡಿ, ಕಾಮಗಾರಿ ಪ್ರಾರಂಭಿಸಲು ಸಹಕರಿಸಬೇಕೆಂದು” ಕೋರಿದ್ದಾರೆ.

“ಕೇಂದ್ರದಿಂದ 2019 ಫೆಬ್ರುವರಿ ತಿಂಗಳ ಕೇಂದ್ರ ಬಜೇಟ್ ನಲ್ಲಿ 2152 ಕೋಟಿ ರೂ. ವೆಚ್ಚದಲ್ಲಿ 155 ಕಿ.ಮೀ. ಅಂತರದ ಬೀದರ ನಾಂದೇಡ ವಾಯಾ ಔರಾದ, ದೇಗಲೂರ ಹೊಸ ರೈಲ್ವೆ ಲೈನ್ ಮಂಜೂರಾತಿಯಾಗಿದೆ. ಈ ರೈಲ್ವೆ ಲೈನ್ ಬೀದರ ಮತ್ತು ಮಹಾರಾಷ್ಟ್ರಕ್ಕೆ ಎಲ್ಲಾ ರೀತಿಯ ಸಂಬಂಧವೃದ್ದಿಗೆ ಸಹಕಾರಿಯಾಗಲಿದೆ. ಹಾಗೂ ಬೀದರನಲ್ಲಿ ಮತ್ತು ನಾಂದೇಡನಲ್ಲಿ ಸಿಖ್ ಸಮುದಾಯದ ಗುರುಗಳಾದ ಗುರುನಾನಕ್‌ ಅವೆ ಪವಿತ್ರ ಗುರುದ್ವಾರಗಳಿರುವ ಕಾರಣ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ಸಿಗಲಿದೆ. ಈ ಎಲ್ಲಾ ದೃಷ್ಟಿಕೊನದಿಂದ ರೈಲ್ವೆ ಸಚಿವಾಲಯವು ಬೀದರ-ನಾಂದೇಡ ರೈಲ್ವೆ ಲೈನ್ ಕಾಮಗಾರಿಯನ್ನು ಅದೇ ವರ್ಷದ ಬಜೇಟನಲ್ಲಿ ಪಿಂಕ್ ಪುಸ್ತಕದಲ್ಲಿ ಸೇರಿಸಲಾಗಿದೆ” ಎಂದರು.

Advertisements

“2023-24ನೇ ಸಾಲಿನ ಬಜೇಟನಲ್ಲಿ ಸದರಿ ಯೋಜನೆಗೆ ಕೇಂದ್ರದಿಂದ 100 ಕೋಟಿ ಅನುದಾನ ಮಿಸಲಿಡಲಾಗಿದೆ ಹಾಗೆ ಮಹಾರಾಷ್ಟ್ರ ಸರ್ಕಾರದಿಂದ ಸಹ ಅವರ ಪಾಲಿನ ಭೂಮಿ ಹಾಗೂ ನಿರ್ಮಾಣ ವೆಚ್ಚದ 50% ಅನುದಾನ ನೀಡುವುದಾಗಿ ಬಜೇಟನಲ್ಲಿ ಘೋಷಿಸಿದ್ದಾರೆ ಮತ್ತು ರಾಜ್ಯದಲ್ಲಿದ್ದ ಹಿಂದಿನ ಸರ್ಕಾರದಲ್ಲಿಯೂ ಬೀದರ-ಔರಾದ (ಕರ್ನಾಟಕ ಬಾರ್ಡರವರೆಗೆ) ಅವಶ್ಯಕವಿರುವ ಭೂಮಿ ಹಾಗೂ ಅನುದಾನ ನೀಡುವುದಾಗಿ ಬಜೇಟನಲ್ಲಿ ಘೋಷಣೆ ಮಾಡಲಾಗಿದೆ. ಹೀಗಾಗಿ ಬೀದರ ಲೋಕಸಭಾ ಕ್ಷೇತ್ರದ ಅಭಿವೃದ್ದಿಯನ್ನು ಗಮನದಲ್ಲಿಟ್ಟುಕೊಂಡು, ಬೀದರ- ಔರಾದ (ಕರ್ನಾಟಕ ಬಾರ್ಡರವರೆಗೆ) ಅವಶ್ಯಕವಿರುವ ಭೂಮಿಯನ್ನು ಉಚಿತವಾಗಿ ರೈಲ್ವೆ ಇಲಾಖೆಗೆ ಒದಗಿಸುವುದು ಹಾಗೂ 50% ನಿರ್ಮಾಣ ವೆಚ್ಚವನ್ನು ಭರಿಸಲು, ಅವಶ್ಯಕವಾಗಿರುವ ಅನುದಾನವನ್ನು ನೀಡಬೇಕೆಂದು” ಮುಖ್ಯಮಂತ್ರಿಗಳಿಗೆ ನೀಡಿರುವ ಪತ್ರದಲ್ಲಿ ಸಚಿವರು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಹಣ-ಹೆಸರು ಗಳಿಕೆಗೆ ಧರ್ಮವೇ ಸುಲಭದ ಸಾಧನ

ಮುಖ್ಯಮಂತ್ರಿಗಳು ಸಹ ಕೇಂದ್ರ ಸಚಿವರ ಎಲ್ಲಾ ಪ್ರಸ್ತಾವನೆಗಳನ್ನು ಪರಿಗಣಿಸಿ, ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಅಭಯ ನೀಡಿದ್ದಾರೆ ಎಂದು ಸಚಿವ ಖೂಬಾ ಮಾಹಿತಿಯನ್ನು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X