ಕಲಬುರಗಿ | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಧರಣಿ

Date:

  • ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಕ್ರಮ ಕೈಗೊಳ್ಳಲು ಒತ್ತಾಯ
  • ತಿಂಗಳಿನಿಂದ ಧರಣಿ ನಡೆಸಿದರೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರ

ಕುಸ್ತಿಪಟುಗಳು ತಮಗಾದ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಹೋರಾಡುತ್ತಿದ್ದಾರೆ. ಅವರ ಹೋರಾಟವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರದ ಕ್ರೂರ ಧೋರಣೆಯನ್ನು ಖಂಡಿಸಿ ಕಲಬುರಗಿ ಸಂವಿಧಾನಪರ ಸಂಘಟನೆಗಳ ಒಕ್ಕೂಟ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದ್ದಾರೆ.

- Advertisement -

ಒಲಿಂಪಿಕ್‌ ಮಂದ್ಯಾವಳಿಗಳಲ್ಲಿ ಭಾಗವಹಿಸಿ ಪದಕವನ್ನು ಪಡೆದು, ರಾಷ್ಟ್ರದ ಕ್ರೀಡಾ ಜಗತ್ತಿನ ಕೀರ್ತಿಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ವಿನೇಶ್ ಪ್ರೋಗಾಟ್, ಸಾಕ್ಷಿ ಮಲ್ಲಿಕ್ ಮತ್ತು ಇನ್ನಿತರ ಕುಸ್ತಿಪಟುಗಳು ರಾಷ್ಟ್ರೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ದೂರು ಸಲ್ಲಿಸಿ, ಎಫ್‌ಐಆರ್‌ ದಾಖಲಿಸಿದ್ದು, ಈವರೆಗೂ ಆರೋಪಿಯನ್ನು ಬಂಧಿಸಿಲ್ಲ ಎಂದು ಪ್ರಭಟನಾಕಾರರು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಆರೋಪಿಯ ಬಂಧನಕ್ಕೆ ಆಗ್ರಹಿಸಿ ಒತ್ತಾಯಿಸಿ ಸಂತ್ರಸ್ತ ಕ್ರೀಡಾಪಟುಗಳು ಕಳೆದ ಒಂದು ತಿಂಗಳಿನಿಂದ ದೆಹಲಿಯಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿರುವುದು ಈಗ ಇಡೀ ವಿಶ್ವಕ್ಕೆ ಗೊತ್ತಾಗಿದೆ. ರಾಷ್ಟ್ರೀಯ ಕ್ರೀಡಾಪಟುಗಳ ಹೋರಾಟ ಬೆಂಬಲಿಸಿ ಕಲಬುರಗಿಯಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ರಾಷ್ಟ್ರಪತಿಗಳು ಕೂಡಲೇ ಮಧ್ಯ ಪ್ರವೇಶಿಸಿ ಆರೋಪಿಯನ್ನು ಫೋಕ್ಸೋ ಕಾಯ್ದೆಯಡಿ ಬಂಧಿಸುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪ್ರೊ. ಆರ್ ಕೆ ಹುಡಗಿ, ದತ್ತಾತ್ರೇಯ ಇಕ್ಕಳಕಿ, ಮಹಾಂತೇಶ್ ನವಲಕಲ್, ಮೋಹನ್ ಎಂ. ಕಟ್ಟಿಮನಿ, ಜಯಶ್ರೀ ಎಂ. ಕಟ್ಟಿಮನಿ, ಎಸ್ ಎನ್ ಜೋಗನ್, ಎಸ್ ಬಿ ರೋಲ್, ಆನಂದ ಎಸ್. ದೊಡ್ಡಮನಿ, ಅಶ್ವಿನಿ ಮದನಕರ್, ದಿಲೀಪ್ ಕುಮಾರ್, ಪವನ ಕುಮಾರ್, ಮಲ್ಲಿಕಾರ್ಜುನ ಖನ್ನಾ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...

ರಾಯಚೂರು | ಗಣೇಶ ಮೆರವಣಿಗೆಯಲ್ಲಿ ಮಿತಿ ಮೀರಿ ಡಿಜೆ ಸದ್ದು, 8 ಪ್ರಕರಣ ದಾಖಲು: ಎಸ್ ಪಿ

ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ...