- ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ, ರಸ್ತೆ ತಡೆ
- ನಂದಿನಿ ಹಾಲು, ಉತ್ಪನ್ನಗಳು ಕನ್ನಡಿಗರ ಅಸ್ಮಿತೆ
ಕೆಎಂಎಫ್ನ ನಂದಿನಿಯೊಂದಿಗೆ ಅಮುಲ್ ವಿಲೀನಗೊಳಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ ರಂ ಶ್ರೀನಿವಾಸಗೌಡ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, “ಕರ್ನಾಟಕದ ನಂದಿನಿ ಹಾಲು ಮತ್ತು ಉತ್ಪನ್ನಗಳು ಕನ್ನಡಿಗರ ಅಸ್ಮಿತೆ. ನಮ್ಮ ಸ್ವಾಭಿಮಾನದ ಸಂಕೇತ ಇದು. ಈ ನಂದಿನಿ ಹಾಲಿನ ಉತ್ಪನ್ನಗಳ ಮೇಲೆ ರಾಜ್ಯದಲ್ಲಿ ಲಕ್ಷಾಂತರ ರೈತರು, ಅವರು ಕುಟುಂಬ ಅವಲಂಬಿತರಾಗಿದ್ದಾರೆ” ಎಂದಿದ್ದಾರೆ.
“ನಂದಿನಿಯನ್ನು ಗುಜರಾತಿನ ಅಮುಲ್ನೊಂದಿಗೆ ವಿಲೀನ ಮಾಡಿದರೆ ಲಕ್ಷಾಂತರ ಜನರು ಬೀದಿಪಾಲಾಗುತ್ತಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ವಿಲೀನ ಮಾಡಬಾರದು. ಒಂದು ವೇಳೆ ಮಾಡಿದರೆ ರಾಜ್ಯದಾದ್ಯಂತ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೋದಿಯವರೇ, ಒಮ್ಮೆ ನಂದಿನಿ ಬ್ರ್ಯಾಂಡ್ನ ರುಚಿ ನೋಡಿ: ಗೌರವ್ ವಲ್ಲಭ್
ಚಾಮರಾಜನಗರದ ಚಾಮರಾಜೇಶ್ವರ ಉದ್ಯಾನದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ರಸ್ತೆ ತಡೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಶಾ ಮರುಳಿ, ಚಾ ವೆಂ ರಾಜ್ಗೋಪಾಲ್, ಪಣ್ಯದಹುಂಡಿ ರಾಜು, ಚಾ ರಾ ಕುಮಾರ್, ಗು ಪುರುಷೋತ್ತಮ್, ಮೂರ್ತಿ, ಶಿವರುದ್ರಸ್ವಾಮಿ, ಬಸವಣ್ಣ, ನಂಜಂಡಸ್ವಾಮಿ, ರವಿಚಂದ್ರ ಪ್ರಸಾದ್ಕಹಳೆ, ಅಭಿಷೇಕ್, ಸಂಜಯ್, ಶಿವಣ್ಣ, ತಾಂಡವಮೂರ್ತಿ ಹಾಗೂ ಇತರರು ಇದ್ದರು.