ಶಿವಮೊಗ್ಗ | ಪ್ರವಾದಿಗಳ ಅವಹೇಳನ: ಯತಿ ನರಸಿಂಹಾನಂದ್ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಮುಸ್ಲಿಮರಿಂದ ಪ್ರತಿಭಟನೆ

Date:

Advertisements

ಉತ್ತರ ಪ್ರದೇಶದ ಗಾಝಿಯಾಬಾದ್‌‌ನಲ್ಲಿ ಪ್ರವಾದಿ ಮೊಹಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ನರಸಿಂಹಾನಂದ ಸ್ವಾಮಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮರ್ಕಜಿ ಸುನ್ನಿ ಜಮೀಯತುಲ್ ಉಲಮಾ ಕಮಿಟಿಯ ಸುನ್ನಿ ಜಾಮಿಯಾ ಮಸ್ಜಿದ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು, ಕೇಂದ್ರ, ರಾಜ್ಯ, ಮುಖ್ಯಮಂತ್ರಿಗಳಿಗೆ, ಗೃಹಸಚಿವರಿಗೆ ಮನವಿ ಸಲ್ಲಿಸಿದರು.

ಕೋಮು ಸೌಹಾರ್ದತೆಯನ್ನ ಕದಡುವ ಭಾಷಣ ಮಾಡಿರುವ ಸ್ವಾಮೀಜಿ ವಿರುದ್ಧ ಬಿಎನ್ಎಸ್ 298, 299, 300, 152 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡು ಸ್ವಾಮೀಜಿಯನ್ನ ಬಂಧಿಸಬೇಕು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಯಿತು.

Advertisements
1002031472

ಉತ್ತರ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆ ಮಾಡುವವರ ಆಸ್ತಿ ಮುಟ್ಟುಗೋಲು ಮಾಡಿಕೊಳ್ಳಲಾಗುತ್ತದೆ. ಆದರೆ ಸ್ವಾಮಿಯು ಕಾನೂನು ಕದಡುವ ಭಾಷಣ ಮಾಡಿದರೂ ಯಾವುದೇ ಕ್ರಮ ಜರುಗಿಸದೆ ಇರುವ ಬಗ್ಗೆ ಪ್ರತಿಭಟನಾಕಾರರು ಆಕ್ಷೇಪಿಸಿದರು.

ಮನವಿ ನೀಡುವ ಸಂದರ್ಭದಲ್ಲಿ ಎಸ್ ಜೆವಿ ಅಧ್ಯಕ್ಷರಾದ ಸತ್ತಾರ್ ಬೇಗ್, ಸುನ್ನಿ ಜಾಮಿಯಾ ಮಸೀದಿ ಅಧ್ಯಕ್ಷ ಮುನಾವರ್ ಪಾಷಾ, ಎಸ್ ಜಿ ವಿ ಕಾರ್ಯದರ್ಶಿ ಇಜಾಝದ ಪಾಷಾ, ಜಾಮಿಯಾ ಮಸೀದಿಯ ಕಾರ್ಯದರ್ಶಿ ಅಶ್ರಫ್ ಮೊಹ್ಮದ್, ವಕೀಲ ನಯಾಜ್ ಅಹ್ಮದ್ ಖಾನ್ ಮೊದಲಾದವರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X