ಮುಧೋಳ | ಪ್ರವಾದಿ ಮುಹಮ್ಮದರ ಬಗ್ಗೆ ರಾಮಗಿರಿ ಮಹಾರಾಜರಿಂದ ಅವಹೇಳನಕಾರಿ ಹೇಳಿಕೆ: ಆಕ್ರೋಶ

Date:

Advertisements

ಪ್ರವಾದಿ ಮುಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಪ್ರಚೋದನಾಕಾರಿ ಮತ್ತು ಅತ್ಯಂತ ಆಕ್ಷೇಪಾರ್ಹ ಹೇಳಿಕೆಗಾಗಿ ರಾಮಗಿರಿ ಮಹಾರಾಜ್ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳದ ವಿವಿಧ ಸಂಘಟನೆಗಳ ಒಕ್ಕೂಟಗಳ ಜನರು ತೀವ್ರವಾಗಿ ಖಂಡಿಸಿದರು.

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಶಾ ಪಾಂಚಾಲ್ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದ್ದು, ಮಹಾರಾಜರ ಭಾಷಣದಲ್ಲಿ ಪ್ರವಾದಿಯವರ ಬಗ್ಗೆ ಅವಹೇಳನ ಮತ್ತು ಮುಸ್ಲಿಮರ ಬಗ್ಗೆ ದ್ವೇಷವಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುಧೋಳ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮೌಲಾನಾ ಅಣ್ಣಿಗೇರಿ, ಮಹಾರಾಜರ ಮಾತುಗಳು ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ. ಮಹಾರಾಜರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisements

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ರಾಮಗಿರಿ ಮಹಾರಾಜರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ್ದಕ್ಕಾಗಿ ಟೀಕೆಗಳನ್ನು ಎದುರಿಸಿದ್ದಾರೆ. ಕೋಮು ದ್ವೇಷವನ್ನು ಹರಡಿದ ಆರೋಪಿ ಸ್ವಾಮೀಜಿಯನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.

WhatsApp Image 2024 08 28 at 9.07.58 AM

ಶಿಂಧೆಯವರ ಹೇಳಿಕೆಯು ಮುಸುಕು ಬೆದರಿಕೆಗಳು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪ ಹೊತ್ತಿರುವ ರಾಮಗಿರಿ ಮಹಾರಾಜರನ್ನು ರಕ್ಷಿಸುವ ಪ್ರಯತ್ನ ನಡೆದಿದೆ. ರಾಮಗಿರಿ ಮಹಾರಾಜರು ಮತ್ತು ಸಿಎಂ ಶಿಂಧೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮೌಲಾನಾ ಅಣ್ಣಿಗೇರಿ ಎಚ್ಚರಿಕೆ ನೀಡಿದರು.

ಪ್ರಗತಿಪರ ಚಿಂತಕ ವಕೀಲ ಯಲ್ಲಪ್ಪ ಹೆಗಡೆ, ಡಿ.ಎಸ್.ಎಸ್ ಪ್ರಮುಖ ಪ್ರಕಾಶ ಮಾಂಗ, ಎಸ್ ಡಿಪಿಐ ಅಧ್ಯಕ್ಷ ರಾಜು ಜಮಾದರ ಮಾತನಾಡಿದರು. ಕೋಮುಗಲಭೆ ಸೃಷ್ಟಿಸಿದ ಆರೋಪ ಹೊತ್ತಿರುವ ರಾಮಗಿರಿ ಮಹಾರಾಜರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮುಧೋಳ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ? ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ನಗರಸಭೆ ಜೆಡಿಎಸ್ ಪಾಲು

ವಿವಿಧ ಸಂಘಟನೆಗಳ ಒಕ್ಕೂಟಗಳ ನೇತೃತ್ವದ ಪ್ರಮುಖರಾದ ಜನತಾ ಸುಲ್ತಾನ ಅಧ್ಯಕ್ಷ ಶಫೀಕ ಬೇಪಾರಿ, ಅಲ್ ಅಮೀನ ಸಂಸ್ಥೆಯ ಅಧ್ಯಕ್ಷ ಜಾವೇದ ಹವಾಲ್ದಾರ, ನದಾಫ್ ಸಮಾಜದ ಅಧ್ಯಕ್ಷ ಎಂ.ಗೌಸ್, ಹಫೀಜ್ ಹೈದರಾಲಿ, ಮೈನು ಅಂಬಿ, ಜಮ್ಮಿರ ಮುಲ್ಲಾ, ಮುಸ್ತಪ್ ಮೋಮಿನ, ಅಸೀಮ ಜಕಲಿ, ಅಲ್ಲಾಭಕ್ಷ ಪಠಾಣ್, ಜಮೀರ ಜಮಾದರ ಸೇರಿದಂತೆ ಹಲವಾರು ಮುಸ್ಲಿಂ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X