ಮೈಸೂರು | ಚರಂಡಿ ಸ್ವಚ್ಛತೆಗಾಗಿ ಆಗ್ರಹಿಸಿ ಪ್ರತಿಭಟನೆ

Date:

Advertisements

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಿರೇಹಳ್ಳಿ ‘ ಬಿ ‘ ಗ್ರಾಮದ ಚರಂಡಿ ಸ್ವಚ್ಛತೆಗೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರಾದ ರಾಜೇಗೌಡ ಮಾತನಾಡಿ ” ಪ್ರತಿ ಬಾರಿಯೂ ಮಳೆ ಬಂದಾಗ ಚರಂಡಿಯ ನೀರು ಮನೆಯ ಒಳಗಡೆ ನುಗ್ಗುವುದರಿಂದ ವಾಸ ಮಾಡುವುದೇ ಬಹಳ ಕಷ್ಟವಾಗಿದೆ. ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಯ ಗಮನಕ್ಕೆ ತಂದರು ಸಹ ಯಾವುದೇ ಸಮಸ್ಯೆ ಬಗೆಹರಿದಿಲ್ಲ, ಚರಂಡಿಯೂ ಸಂಪೂರ್ಣವಾಗಿ ಮುಚ್ಚಿ ಹೋಗಿರುವುದರಿಂದ ಮಳೆ ನೀರು ಹರಿದು ಹೋಗಲು ಜಾಗವೇ ಇಲ್ಲದಾಗಿದೆ. ಈ ಕೂಡಲೇ ಸಮಸ್ಯೆಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಗಮನಹರಿಸಬೇಕು, ಸರಿಪಡಿಸಬೇಕು. ಸರಾಗವಾಗಿ ಚರಂಡಿಯಲ್ಲಿ ನೀರು ಹರಿಯುವಂತೆ ವ್ಯವಸ್ಥೆ ಕಲ್ಪಿಸಬೇಕು ” ಎಂದು ಮನವಿ ಮಾಡಿದರು.

ಸಿದ್ದೇಗೌಡ ಮಾತನಾಡಿ ” ಗ್ರಾಮ ಪಂಚಾಯಿತಿ ಗ್ರಾಮದ ಸ್ವಚ್ಛತೆ ಕಡೆಗೆ ಗಮನ ಹರಿಸದೆ ಸಮಸ್ಯೆ ಹೀಗೆ ಮುಂದುವರೆದರೆ ಚರಂಡಿಯ ಕಸವನ್ನು ತೆಗೆದುಕೊಂಡು ಹೋಗಿ ಪಂಚಾಯತಿ ಮುಂದೆ ಸುರಿದು ಧರಣಿ ಮಾಡಬೇಕಾಗುತ್ತದೆ. ಇದಕ್ಕೂ ಭಾಗದಿದ್ದರೆ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯವರೆಗೂ ಹೋಗಿ ಧರಣಿ ಮಾಡಬೇಕಾಗುತ್ತದೆ ” ಎಂದು ಎಚ್ಚರಿಕೆ ನೀಡಿದರು.

Advertisements

ರಂಗರಾಜು ಮಾತನಾಡಿ ” ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೇವಲ ತೆರಿಗೆ ಸಂಗ್ರಹಿಸಲು ಜನಗಳ ಬಳಿ ಬರುತ್ತಾರೆ ಹೊರತು ಜನಗಳ ಕಷ್ಟವನ್ನು ಆಲಿಸಲು ಬರುತ್ತಿಲ್ಲ.’ ಸ್ವಚ್ಛ ಭಾರತ್ ‘ ಹೆಸರಿನಲ್ಲಿ ನೂರಾರು ಕೋಟಿ ಖರ್ಚು ಮಾಡುವ ಸರ್ಕಾರಗಳು ಕೇವಲ ಪ್ರಚಾರ, ಜಾಹೀರಾತುಗಳಿಗೆ ಮಾತ್ರ ಸೀಮಿತವಾಗಿವೆ. ಸ್ವಚ್ಛತೆ, ಗ್ರಾಮ ನೈರ್ಮಲ್ಯದ ಕುರಿತು ಯಾವುದೇ ಗಮನ ಹರಿಸುತ್ತಿಲ್ಲ. ಈ ಹಿಂದೆಯೂ ಸಹ ಹಲವು ಬಾರಿ ಗಮನಕ್ಕೆ ತಂದರು ಸಹ ನಿರ್ಲಕ್ಷ ವಹಿಸುತ್ತಿದ್ದಾರೆ. ಇದರಿಂದಾಗಿ ಪ್ರತಿನಿತ್ಯ ಚರಂಡಿಯ ಅನೈರ್ಮಲ್ಯದಿಂದಾಗಿ ಜ್ವರ ,ವಾಂತಿ, ಭೇದಿ ರೋಗರುಜಿನಗಳು ಹೆಚ್ಚುತ್ತಿದ್ದು. ಚರಂಡಿಯ ನಿಂತ ನೀರಲ್ಲಿ ಸೊಳ್ಳೆಗಳು ಸಹ ಹೆಚ್ಚಾಗಿದೆ ಇದರಿಂದಾಗಿ ಜನ ಜೀವನ ಬಹಳ ಸಂಕಷ್ಟಮಯವಾಗಿದೆ. ಹಾಗಾಗಿ, ಈ ಕೂಡಲೇ ಸಂಬಂಧಪಟ್ಟ ಇಲಾಖೆ ಗಮನಹರಿಸಬೇಕೆಂದು ಆಗ್ರಹಿಸಿದರು. “

ಈ ಸುದ್ದಿ ಓದಿದ್ದೀರಾ? ಮೈಸೂರು | ಭಯದ ಬದುಕಲ್ಲಿ ಕಾಡಂಚಿನ ವಾಸಿಗಳು

ಹಿರೇಹಳ್ಳಿ ‘ ಬಿ ‘ ಗ್ರಾಮದ ಗ್ರಾಮಸ್ಥರುಗಳಾದ ರಂಗರಾಜು, ಎಸ್.ಯು.ಸಿ.ಐ (ಸಿ) ಸಂಘಟನೆಯ ಸುನಿಲ್ ಟಿ. ಆರ್ , ರಾಜೇಗೌಡ, ಉಮೇಶ್, ಸಿದ್ದೇಗೌಡ, ಶಿವನಂಜು, ನಾಗೇಶ, ಎಂ. ಹೆಚ್. ಗೌಡ, ಮಲ್ಲಿಗಮ್ಮ, ರಾಜಮ್ಮ, ಶಿವಮ್ಮ, ಗೌರಮ್ಮ, ತಾಯಮ್ಮ, ಗೀತಾ, ಮಲ್ಲಿಗಮ್ಮ, ಚಲುವಮ್ಮ, ನಾಗರಾಜೇಗೌಡ, ಜಯರಾಮ್, ಮಾದೇವ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X