ಅತಿಥಿ ಉಪನ್ಯಾಸಕರ ಉದ್ಯೋಗ ಭದ್ರತೆಗೆ ಸಂಘದ ಒತ್ತಾಯ

Date:

ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರವು ಉದ್ಯೋಗ ಭದ್ರತೆ ನೀಡಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಒತ್ತಾಯಿಸಿದೆ.

ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಾ. ಹನುಮಂತಗೌಡ ಆರ್. ಕಲ್ಮನಿ, “ಬಿಜೆಪಿ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಆಗ ಅವರನ್ನು ಭೇಟಿ ಮಾಡಿ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದ್ದೆವು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ನಮ್ಮ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರು. ಈಗ, ಅವರೇ ಮುಖ್ಯಮಂತ್ರಿಯಾಗಿದ್ದಾರೆ. ನಮಗೆ ಉದ್ಯೋಗ ಭದ್ರತೆ ಒದಗಿಸಬೇಕು” ಎಂದರು.

“ಕಾಂಗ್ರೆಸ್‌ ತನ್ನ ಪ್ರಣಾಳಿಯಲ್ಲಿಯೂ ನಮ್ಮ ಸಮಸ್ಯೆಗಳನ್ನು ಪರಿಹರಿಸುವುದಾಗಿ ಹೇಳಿದೆ. ಹೀಗಾಗಿ, ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಅತಿಥಿ ಉಪನ್ಯಾಸಕರಿಗೆ ವರ್ಷದಲ್ಲಿ ಹತ್ತು ತಿಂಗಳ ಬದಲು, ಇಡೀ ವರ್ಷದ ವೇತನ ನೀಡಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ವಿನೋದಚಂದ ಪೀಟರ್, ಪ್ರೊ. ದಿವ್ಯಾ ಪರಾಂಡೆ, ಪ್ರೊ. ವಿಜಯಲಕ್ಷ್ಮಿ ಜೋಶಿ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಯಡಿಯೂರಪ್ಪ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ತಪ್ಪಿದೆ: ಶಾಸಕ ಚಂದ್ರಪ್ಪ

ರಘು ಚಂದನ್‌ಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ...

ಧಾರವಾಡ | ‘ದಿಂಗಾಲೇಶ್ವರ ಸ್ವಾಮೀಜಿ ನೀಡಿದ ಹೇಳಿಕೆಗೂ, ಮುರುಘಾಮಠಕ್ಕೂ ಯಾವುದೇ ಸಂಬಂಧವಿಲ್ಲ’

ಮಾರ್ಚ್ 27ರಂದು ಹುಬ್ಬಳ್ಳಿ ಮೂರುಸಾವಿರ ಮಠದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...