ಮೈಸೂರು | ವಂಚಿತರಿಗೆ ಸಾಮಾಜಿಕ ನ್ಯಾಯ ನೀಡುವುದು ಕಾನೂನು ಶಿಕ್ಷಣದ ಮುಖ್ಯ ಗುರಿ: ಪ್ರೊ ಎಂ ಕೆ ರಮೇಶ್

Date:

Advertisements

ಕಾನೂನು ಶಿಕ್ಷಣದ ಮುಖ್ಯ ಗುರಿಯೇ ವಂಚಿತರಿಗೆ ಸಾಮಾಜಿಕ ನ್ಯಾಯ ನೀಡುವುದು ಎಂದು ಬೆಂಗಳೂರಿನ ನ್ಯಾಷನಲ್ ಲಾ ಆಫ್ ಇಂಡಿಯಾ ಯುನಿವರ್ಸಿಟಿಯ ನಿವೃತ್ತ ಕಾನೂನು ಪ್ರಾಧ್ಯಾಪಕ ಪ್ರೊ ಎಂ ಕೆ ರಮೇಶ್ ಅಭಿಪ್ರಾಯಿಸಿದರು.

ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜು ಆಯೋಜಿಸಿದ್ದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕಾನೂನೇತರ ಕಾರಣಗಳಿಂದಾಗಿ ವಂಚಿತರಾದ ದೇಶದ ಜನಕ್ಕೆ ಕಾನೂನಿನ ಮೂಲಕ ನ್ಯಾಯ ಒದಗಿಸುವುದು ಮುಖ್ಯ ಕೆಲಸ ಆಗಬೇಕಿದೆ. ಸಾಮಾಜಿಕ ಅಸಮಾನತೆಗೆ ನೂರಾರು ಕಾರಣ ನೀಡಬಹುದು ಆದರೆ ಕಾನೂನು ಒಂದು ಅಸ್ತ್ರವಾಗಿ, ಒಂದು ಸಾಧನವಾಗಿ ಬಳಸುವುದರ ಮೂಲಕ ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಬಹುದು ಎಂದರು.

Advertisements

“ಕೆ ಪುಟ್ಟಸ್ವಾಮಿಯವರ ನಿರಂತರ ಶ್ರಮದಿಂದ ಗುಂಡಪ್ಪ ಗೌಡ ಹಾಗೂ ಪಿ ಎಂ ಚಿಕ್ಕಬೋರಯ್ಯ ನೆರವಿನ ಫಲವಾಗಿ ವಿದ್ಯಾವರ್ಧಕ ಕಾನೂನು ಕಾಲೇಜು ಆರಂಭವಾಯಿತು. ನಾನು ಸಹ ಮೊದಲ ಬ್ಯಾಚಿನ ವಿದ್ಯಾರ್ಥಿ ಎಂದ ಅವರು, “ಈ ಹಿಂದೆಯಲ್ಲ ಕಾನೂನು ಶಿಕ್ಷಣ ಕೈಗೆಟಕುವ ರೀತಿಯಲ್ಲಿ ಇರಲಿಲ್ಲ. ನೆರೆ ರಾಜ್ಯಗಳಿಗೆ, ಉತ್ತರ ಭಾರತದ ಕಡೆಗೆ ತೆರಳಬೇಕಾದ ಪರಿಸ್ಥಿತಿ ಇತ್ತು ಆಗ ಇದನ್ನೆಲ್ಲ ಮನಗಂಡು ಹಿರಿಯರ ಶ್ರಮದ ಫಲ ಕಾನೂನಿನ ಅಭ್ಯಾಸಕ್ಕೆ ವೇದಿಕೆಯಾಯಿತು” ಎಂದು ತಿಳಿಸಿದರು.

WhatsApp Image 2024 08 14 at 11.05.12 AM 1

“ಕಾನೂನು ಶಿಕ್ಷಣವನ್ನು ಗಂಭೀರವಾಗಿ ತೆಗೆದುಕೊಂಡ ಹಾಗೆ, ಕಾನೂನು ವೃತ್ತಿಯನ್ನು ಗಂಭೀರವಾಗಿ ತೆಗೆದುಕೊಳ್ಳಿ. ಕಾನೂನು ಕೇವಲ ವ್ಯವಹಾರದಂತೆ ಆಗಬಾರದು. ನೊಂದವರಿಗೆ, ವಂಚಿತರಿಗೆ ನ್ಯಾಯ ಒದಗಿಸುವ ಅಸ್ತ್ರವಾಗಬೇಕು. ಯಾವುದೇ ರಾಜಕೀಯದ ದಾಳವಾಗಿ ಉರುಳದೆ, ಸಾಮಾಜಿಕ ಕಳಕಳಿಯ ಮೂಲವಾಗಬೇಕು. ಕಾಲುದಾರಿಯಲ್ಲಿ ನಡೆಯುವುದರ ಬದಲು ಹೆದ್ದಾರಿಯಲ್ಲಿ ನಡೆಯುವ ದಿಟ್ಟತನ ನಿಮ್ಮಲ್ಲಿರಬೇಕು ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಪ್ರೊ ಎಂ ಕೆ ರಮೇಶ್ ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ಶಿರೂರು ದುರಂತ | ಮತ್ತೆ ಕಾರ್ಯಾಚರಣೆ ಮುಂದುವರಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ

ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ ವಿಶ್ವನಾಥ್, ಎಸ್ ಶಿವಲಿಂಗಯ್ಯ, ಪ್ರಾಂಶುಪಾಲ ಡಾ ಪಿ ದೀಪು, ಡಾ ಕೆ ಎಲ್ ಚಂದ್ರಶೇಖರ್ ಐಜೂರು, ಐ ಜಿ ಸ್ವಾತಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ: ಪ್ರಾಣಿ ವಧೆ ಹಾಗೂ ಮೀನು-ಮಾಂಸ ಮಾರಾಟ ನಿಷೇಧ

"ಗಣೇಶ ಚತುರ್ಥಿ ಪ್ರಯುಕ್ತ ಆಗಸ್ಟ್ 27 ರಂದು ಬುಧವಾರ ಪ್ರಾಣಿ ವಧೆ...

ಬೀದರ್ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ‌ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬೀದರ್ ವತಿಯಿಂದ...

ವಿಜಯಪುರ-ಬಬಲೇಶ್ವರ ಆ.27ರಿಂದ ಎರಡು ಬಸ್ಸುಗಳ ಸೇವೆ ಪ್ರಾರಂಭ

ವಿಜಯಪುರ-ಬಬಲೇಶ್ವರ ಮತ್ತು ಬಬಲೇಶ್ವರ-ವಿಜಯಪುರ ನಡುವೆ ಆಗಸ್ಟ್ 27 ರಿಂದ ಸಾಮಾನ್ಯ ಸಾರಿಗೆ...

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ....

Download Eedina App Android / iOS

X