ಹಾಸನ | ಬೇಲೂರು ರಥೋತ್ಸವದ ವೇಳೆ ಕುರಾನ್‌ ಪಠಣಕ್ಕೆ ವಿರೋಧ; ಪ್ರತಿಭಟನೆಗೆ ಕರೆ

Date:

  • ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವ ಹಂತದಲ್ಲಿರುವ ದೇವಸ್ಥಾನ
  • ಮಾ. 28ರಂದು ಪ್ರತಿಭನಾ ಮೆರವಣಿಗೆ ಕರೆ ನೀಡಿದ ಸಂಘಟನೆಗಳು

ವಿಶ್ವ ವಿಖ್ಯಾತ ಬೇಲೂರು ಚನ್ನಕೇಶವ ರಥೋತ್ಸವ ಏಪ್ರಿಲ್‌ 4ರಂದು ನಡೆಯಲಿದೆ. ರಥೋತ್ಸವಕ್ಕೂ ಮುನ್ನ ಕುರಾನ್‌ ಪಠಣ ಮಾಡುವುದು ಇಲ್ಲಿನ ವಿಶೇಷವಾಗಿದ್ದು, ಇದು ಹಿಂದೂ – ಮುಸ್ಲಿಂ ಸಾಮರಸ್ಯಕ್ಕೆ ಕಾರಣವಾಗಿದೆ. ಆದರೆ, ಈಗ ಹಿಂದಿನಿಂದಲೂ ನಡೆಸಿಕೊಂಡು ಬರುತ್ತಿರುವ ಕುರಾನ್ ಪಠಣವನ್ನು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ.

ರಥೋತ್ಸವಕ್ಕೂ ಮೊದಲು ಕುರಾನ್‌ ಪಠಣ ಬೇಡ ಎಂದು ಆಗ್ರಹಿಸಿ ಹಿಂದೂ ಸಘಟನೆಗಳು ಮಾರ್ಚ್‌ 28ಕ್ಕೆ ಬೇಲೂರಿನಲ್ಲಿ ಹೋರಾಟಕ್ಕೆ ಕರೆ ನೀಡಿವೆ. ಆ ಮೂಲಕ ಐತಿಹಾಸಿಕ ಬೇಲೂರು ಚನ್ನಕೇಶವ ರಥೋತ್ಸವದ ಮೇಲೆ ವಿವಾದದ ಕರಿನೆರಳು ಬಿದ್ದಿದೆ.

ಹೊಯ್ಸಳರ ಕಾಲದ ವಿಶ್ವ ವಿಖ್ಯಾತ ಐತಿಹಾಸಿಕ ಬೇಲೂರಿನ ಚನ್ನಕೇಶವಸ್ವಾಮಿ ದೇವಾಲಯ ತನ್ನ ವಾಸ್ತು ಶಿಲ್ಪ ಕಲೆಗಳ ಮೂಲಕ ಕೆಲವೇ ದಿನಗಳಲ್ಲಿ ವಿಶ್ವ ಪಾರಂಪರಿಕ ತಾಣವಾಗುವ ಹೊತ್ತಿನಲ್ಲಿ, ರಥೊತ್ಸವದ ವೇಳೆ ಪರಂಪರಾಗತವಾಗಿ ನಡೆಯುತ್ತಿದ್ದ ಕುರಾನ್ ಪಠಣಕ್ಕೆ ಹಿಂದೂ ಧರ್ಮ ವಿರೋಧ ವ್ಯಕ್ತಪಡಿಸಿದೆ.

ಕಳೆದ ವರ್ಷ ಹಿಂದೂ ದೇವಾಲಯಗಳ ವ್ಯಾಪ್ತಿಯಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬಾರದು ಎಂಬ ವಿವಾದ ನಡೆದು, ಕೊನೆಗೆ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿದಿತ್ತು. ಕುರಾನ್ ಪಠಣದ ಮೂಲಕವೇ ಸಂಪ್ರದಾಯದಂತೆ ಜಾತ್ರೆ ನಡೆದಿತ್ತು.

ಎರಡು ದಿನಗಳ ಹಿಂದೆ ಹಾಸನದ ಡಾ. ಎನ್‌ ರಮೇಶ್ ರಚಿಸಿರುವ ‘ಬೇಲೂರಿನ ಶ್ರೀಚನ್ನಕೇಶವನಿಗೆ ಬೇಕಿಲ್ಲ ಕುರಾನ್ ಪಠಣ’ ಎಂಬ ಪುಸ್ತಕವನ್ನು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಬಿಡುಗಡೆ ಮಾಡಿದ್ದರು. ಈ ಪುಸ್ತಕದಲ್ಲಿ ‘1932ರಲ್ಲಿ ರಥೋತ್ಸವಕ್ಕೂ ಮುನ್ನ ಕುರಾನ್‌ ಪಠಣ ಮಾಡುವ ಸಂಪ್ರದಾಯವನ್ನು ದೇವಾಲಯದ ಮ್ಯಾನ್ಯುಯಲ್​ನಲ್ಲಿ ಸೇರಿಸುವ ಮೂಲಕ ಪರಂಪರೆಗೆ ಅಪಚಾರ ಎಸಗಲಾಗಿದೆ’ ಎಂಬುವುದನ್ನು ವಿವರಿಸಲಾಗಿದೆ.

“ಸೌಹಾರ್ದತೆ ಸರಿ, ಎಲ್ಲರೂ ಒಂದಾಗಿ ಇರಬೇಕು ಎಂಬುವುದು ಸರಿ. ಆದರೆ, ಚನ್ನಕೇಶವನ ಜಾತ್ರೆ ವೇಳೆ ಗೋವಿಂದ ನಾಮಸ್ಮರಣೆ ಮೊಳಗಬೇಕೇ ವಿನಃ ಕುರಾನ್ ಪಠಣ ಸರಿಯಲ್ಲ. ನಾವು ದರ್ಗಾಗೆ ಹೋಗಿ ಹನುಮಾನ್ ಚಾಲಿಸ ಹೇಳಲು ಸಾಧ್ಯವೇ? ಹಾಗೆಯೇ ಕೆಲವೇ ವರ್ಷಗಳ ಹಿಂದೆ ಸೇರಿಸಲಾಗಿರುವ ಇಂತಹ ಆಚರಣೆಯನ್ನು ಕೈಬಿಡಬೇಕು” ಎಂಬುದು ಪುಸ್ತಕದ ರಚನಕಾರ ಡಾ. ಎನ್‌ ರಮೇಶ್ ಅವರ ಒತ್ತಾಯವಾಗಿದೆ.

ಮುಂದುವರಿದು, ‘ಬೇಲೂರಿನ ಶ್ರೀಚನ್ನಕೇಶವನಿಗೆ ಬೇಕಿಲ್ಲ ಕುರಾನ್ ಪಠಣ’ ಎಂಬ ಪುಸ್ತಕ ಮತ್ತು ಕೆಲವು ದಾಖಲೆಗಳನ್ನು ಮುಂದಿಟ್ಟು ರಥೋತ್ಸವದ ವೇಳೆ ಕುರಾನ್ ಪಠಣೆ ನಿಲ್ಲಬೇಕು ಎಂದು ಹಿಂದೂ ಸಂಘಟನೆಗಳು ಹೋರಾಟಕ್ಕಿಳಿದಿವೆ. ಪುಸ್ತಕ ಬಿಡುಗಡೆಯಾದ ಬಳಿಕ ಮಾ. 26ರಂದು ಬೇಲೂರಿನಲ್ಲಿ ಹಿಂದೂ ಸಂಘಟನೆಗಳ ಮುಖಂಡರು ತಹಶೀಲ್ದಾರ್​ಗೆ ಮನವಿ ಸಲ್ಲಿಸಿ, ‘ಹಿಂದೂಗಳ ಭಾವನೆಗೆ ಧಕ್ಕೆ ತರುವ ಇಂತಹ ಆಚರಣೆ ಬೇಡ’ ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜೇನು ದಾಳಿ; ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಒಟ್ಟಿನಲ್ಲಿ ಕಳೆದ ವರ್ಷ ವ್ಯಾಪಾರದ ವಿಚಾರಕ್ಕೆ ಆರಂಭವಾಗಿದ್ದ ವಿವಾದ ಮುಗಿದು ಈ ವರ್ಷ ಹೊಸ ವಿವಾದ ಹುಟ್ಟಿಕೊಂಡಿದೆ. ಹಿಂದೂ ದೇವರ ರಥೊತ್ಸವದ ವೇಳೆ ಕುರಾನ್​ ಪಠಣ ಸೌಹಾರ್ದತೆಯ ಸಂಕೇತ ಎಂದು ಹೇಳಲಾಗುತ್ತಿದ್ದ ವಿಚಾರವೇ ಈಗ ವಿವಾದದ ರೂಪ ಪಡೆದಿದ್ದು, ಈ ಆಚರಣೆಯನ್ನ ನಿಲ್ಲಿಸಲು ಆಗ್ರಹ ಕೇಳಿ ಬಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ...

ಧಾರವಾಡ | ಮಹದಾಯಿ ಯೋಜನೆ; ಸದನದಲ್ಲಿ ಚರ್ಚೆಯಾಗದಿದ್ದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆಯ ಎಚ್ಚರಿಕೆ

ಕಳಸಾ ಬಂಡೂರಿ ನಾಲಾ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಸಾಕಷ್ಟು ಹೋರಾಟ...

ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ...

ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಅಪಘಾತಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ...