ರಾಯಚೂರು | ದೀಪಾವಳಿ ಬಂದರೂ ನಗರದ ಬೀದಿ ದೀಪಗಳಿಗೆ ಇನ್ನೂ ಬಂದಿಲ್ಲ ‘ಬೆಳಕು’

Date:

Advertisements

ನಾಡಿನಾದ್ಯಂತ ದೀಪಾವಳಿ ಆಚರಿಸಲಾಗುತ್ತಿದೆ. ಆದರೆ, ರಾಯಚೂರು ನಗರದ ಪ್ರಮುಖ ರಸ್ತೆಗಳಲ್ಲಿರುವ ಬೀದಿದೀಪಗಳಿಗೆ ಕೂಡ ಬೆಳಕು ಹರಿಸುವ ಭಾಗ್ಯ ದೊರಕಿಲ್ಲ.

ಬೀದಿಗಳಲ್ಲಿ ವಿದ್ಯುತ್ ಕಂಬಗಳಿದ್ದರು ಕೂಡ ಇಲ್ಲದೆ ಸಾರ್ವಜನಿಕರು ಕತ್ತಲೆಯಲ್ಲಿ ಓಡಾಡುವಂತಹ ಪರಿಸ್ಥಿತಿ ಇದೆ. ಬೆಳಕಿನ ವ್ಯವಸ್ಥೆ ಕಲ್ಪಿಸಬೇಕಾದ ನಗರಸಭೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ದೀಪಾವಳಿಗೆ ದೀಪವಿಲ್ಲದೆ ಕತ್ತಲಲ್ಲಿ ನಗರವಾಗಿದೆ ಎಂಬುದು ನಗರದ ನಿವಾಸಿಗಳು, ವಾಹನ ಚಾಲಕರು ಶಾಪ ಹಾಕುತ್ತಿದ್ದಾರೆ.

ನಗರದ ಪ್ರಮುಖ ರಸ್ತೆಯಲ್ಲಿ ವಿದ್ಯುತ್‌ ಕಂಬಗಳಿದ್ದರೂ ಬೆಳಕಿನ ವ್ಯವಸ್ಥೆ ಇಲ್ಲ. ಹೆಸರಿಗೆ ಮಾತ್ರ ಕಂಬಗಳಿವೆ. ಇದನ್ನು ಕಂಡರೂ ನಗರಸಭೆ ಅಧಿಕಾರಿಗಳು ದುರಸ್ತಿಗೆ ಮುಂದಾಗುತ್ತಿಲ್ಲ ಎಂಬುದು ಸಾರ್ವಜನಿಕರ ದೂರು.

Advertisements

ನಗರದ ಪ್ರವಾಸಿ ಮಂದಿರ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳಿಗೆ ಅಲ್ಲೊಂದು ಇಲ್ಲೊಂದು ಬೀದಿ ದೀಪಗಳು ಬೆಳಗುತ್ತವೆ. ಹಗಲು-ರಾತ್ರಿ ಬೀಡಾಡಿ ದನಗಳು ಈ ರಸ್ತೆಯಲ್ಲಿ ಓಡಾಡುತ್ತಾ ಇರುತ್ತವೆ. ಸ್ವಲ್ಪ ಅಜಾಗರೂಕತೆಯಾದರೂ ವಾಹನ ಸವಾರರು ಅಪಘಾತಕ್ಕೀಡಾಗುವುದು ಖಚಿತ.

ಹಿರಿಯ ನಾಗರಿಕರು, ಮಕ್ಕಳು ರಾತ್ರಿ ವೇಳೆ ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಾರೆ. ಬೀದಿ ದೀಪ ನಿರ್ವಹಣೆಗೆ ನಗರಸಭೆಗೆ ಪ್ರತ್ಯೇಕ ಅನುದಾನ ಇಲ್ಲ. ಹೀಗಾಗಿ ದುರಸ್ತಿ ಭಾಗ್ಯ ಸಿಗುತ್ತಿಲ್ಲ ಎಂಬ ವಿಚಾರ ಕೂಡ ತಿಳಿದುಬಂದಿದೆ.

ಈ ಸಮಸ್ಯೆಯ ಬಗ್ಗೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತ ಅಝೀಝ್ ಜಾಗೀರದಾರ್, “ಬೀಡಾಡಿ ದನಗಳು ಇಡೀ ರಾತ್ರಿಯಲ್ಲೇ ಮಲಗಿರುತ್ತವೆ. ಸ್ವಲ್ಪ ಜಾಗರೂಕತೆ ತಪ್ಪಿದ್ದರೆ ದೊಡ್ಡ ಅನಾಹುತಗಳು ಸಂಭವಿಸಲಿದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ವಕ್ಫ್‌ ಆಸ್ತಿ | ರೈತರಿಗೆ ನೋಟಿಸ್ ಕೊಟ್ಟಿದ್ದರೆ ತಕ್ಷಣ ವಾಪಸ್‌: ಸಚಿವ ಜಮೀರ್

“ವಿದ್ಯುತ್ ಕಂಬಗಳಿಗೆ ಬೆಳಕು ಇಲ್ಲದೆ ಕತ್ತಲಲ್ಲಿ ಓಡಾಡುವ ಪರಿಸ್ಥಿತಿಯಿದೆ. ವಿದ್ಯುತ್ ಕಂಬಗಳಿಗೆ ಬೆಳಕು ಹೋಗುವುದು ಬರೋದು ಚಾಲ್ತಿ ಇರುತ್ತದೆ. ನಗರಸಭೆಯ ಅಧಿಕಾರಿಗಳು ನಗರದ ಬಗ್ಗೆ ತಮಗೆ ಸಂಬಂಧವಿಲ್ಲದಂತೆ ಇದ್ದಾರೆ .ಇದಕ್ಕೆ ಗಮನ ಹರಿಸಿ ಕಾರ್ಯನಿವಹಿಸಬೇಕು. ಏನಾದರೂ ಅಹಿತಕರ ಘಟನೆ ಸಂಭವಿಸಿದರೆ ನಗರಸಭೆಯೇ ನೇರ ಕಾರಣ ಎಂದು ಹೇಳಿದರು.

WhatsApp Image 2024 11 01 at 1.11.13 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X