ರಾಯಚೂರು | ಗ್ರಾಮೀಣ ಬ್ಯಾಂಕ್ ವಿರುದ್ಧದ ಹೋರಾಟಕ್ಕೆ 100 ದಿನ; ಮಾ.29ಕ್ಕೆ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ

Date:

Advertisements
  • ಗ್ರಾಮೀಣ ಬ್ಯಾಂಕ್‌ ಕೃಷಿ ಸಾಲ ವಸೂಲಾತಿ ಪದ್ಧತಿಗೆ ವಿರೋಧ
  • ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವ

ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಆಡಳಿತ ಮಂಡಳಿಯು ರೈತರಿಗೆ ನೀಡಿದ ಕೃಷಿ ಸಾಲದ ವಸೂಲಾತಿ ಪದ್ಧತಿಯನ್ನು ವಿರೋಧಿಸಿ ಮಾ. 29ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಿಳಿಸಿದೆ.

ಸಂಘಟನೆಯು ಮಾ.6 ರಿಂದ ರಾಜ್ಯದಾದ್ಯಂತ ಚೈತನ್ಯ ಯಾತ್ರೆಯನ್ನು ಹಮ್ಮಿಕೊಂಡಿತ್ತು. ಇದರ ಸಮಾರೋಪದ ಅಂಗವಾಗಿ ಮಾ.29 ರಂದು ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಆರ್ ಮಾದವರೆಡ್ಡಿ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದಾಗಿ ಬೆಳೆನಾಶವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಕೋವಿಡ್-19 ಬಂದಾಗಿನಿಂದ ರೈತರು ತಾವು ಬೆಳೆದ ಬೆಳೆಗಳಿಗೆ ಉತ್ತಮ ದರ ಸಿಗದೇ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲವರು ಇದನ್ನು ಎದುರಿಸಲಾಗದೇ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ರೈತರ ಆತ್ಮಹತ್ಯೆ ತಪ್ಪಿಸಲು ಎಸ್‌ಬಿಐ ಬ್ಯಾಂಕ್ ರೈತರ ಸಾಲದ ಅಸಲಿನ ಶೇ.10 ರಷ್ಟು ಪಾವತಿಸಿಕೊಂಡು, ಉಳಿದ ಸಾಲವನ್ನು ಮನ್ನಾ ಮಾಡಿದೆ. ಆದರೆ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಯಾವುದೇ ರಿಯಾಯತಿ ನೀಡದೇ, ವಕೀಲರ ಮೂಲಕ ಲೀಗಲ್ ನೋಟಿಸ್ ನೀಡಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? : ರಾಯಚೂರು |ಭೂಮಿ ಮಂಜೂರಾತಿ, ಹಕ್ಕುಪತ್ರ ವಿತರಣೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

“ಸುಸ್ತಿದಾರರ ಸಾಲದ ಅಸಲಿನ ಶೇ.30ರಷ್ಟು ಪಾವತಿಸಲು ರೈತರು ಒಪ್ಪಿಕೊಂಡು ಶೇ.40ರಷ್ಟು ಪಾವತಿಸಲು ಮನವೊಲಿಸುತ್ತೇವೆ. ಆದರೆ, ಬ್ಯಾಂಕ್ ಅಧಿಕಾರಿಗಳು ಉಳಿದ ಮೊತ್ತವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು” ಎಂದು ಒತ್ತಾಯಿಸಿದರು.

ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸಾಲ ವಸೂಲಾತಿ ಪದ್ಧತಿಯ ಬಗ್ಗೆ ರಾಜ್ಯದ ರೈತರಿಗೆ ಅರಿವು ಮೂಡಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಚೈತನ್ಯ ಯಾತ್ರೆ ಆರಂಭಿಸಿದ್ದು ಮಾ.30ಕ್ಕೆ 100 ದಿನ ಪೂರೈಸಲಿದೆ” ಎಂದು ತಿಳಿಸಿದರು.

“ಮಾ. 29ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಿಂದ ಕಾಲ್ನಡಿಗೆ ಜಾಥಾದ ಮೂಲಕ ಆರ್‌ಬಿಐ ಮತ್ತು ಕೆನರಾ ಬ್ಯಾಂಕ್ ಕಚೇರಿಗೆ ಮನವಿ ಸಲ್ಲಿಸಲಾಗುವುದು” ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ಮಾರೆಪ್ಪ ಹರವಿ, ವಿಶ್ವನಾಥ, ಸುರೇಂದ್ರ, ಪ್ರಭಾಕರ ರೆಡ್ಡಿ, ಉಮಾಪತಿ ಗೌಡ ಸೇರಿದಂತೆ ಹಲವರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X