ರಾಯಚೂರು | ನಗರಸಭೆಗೆ ಪೌರ ಕಾರ್ಮಿಕರ ಮುತ್ತಿಗೆ

Date:

Advertisements

ಪಾವತಿಯಾಗದೇ ಉಳಿದಿರುವ ಬಾಕಿ ವೇತನವನ್ನು ಪಾವತಿ ಮಾಡಬೇಕು. ನಗರಸಭೆ ವ್ಯಾಪ್ತಿಯಲ್ಲಿರುವ 250ಕ್ಕೂ ಅಧಿಕ ದಿನಗೂಲಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ, ಅವನ್ನು ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗೆ ನಿಯೋಜನೆ ಮಾಡಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ರಾಯಚೂರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ನಗರಸಭೆಯಲ್ಲಿ ಪೌರ ಕಾರ್ಮಿಕರ ಕೊರತೆ ಇದೆ. ಅದಕ್ಕಾಗಿ, ಹೆಚ್ಚುವರಿಯಾಗಿ ಪೌರಾಯುಕ್ತ ಗುರುಲಿಂಗಪ್ಪ ಅವರು 120 ಮಂದಿಯನ್ನು ದಿನಗೂಲಿ ಪೌರ ಕಾರ್ಮಿಕರನ್ನಾಗಿ ನೇಮಕ ಮಾಡಿಕೊಂಡಿದ್ದರು. ಪ್ರತಿ ತಿಂಗಳು ವೇತನ ಪಾವತಿಯಾಗುತ್ತಿತ್ತು. ಆದರೆ, ಈಗ ಕಳೆದ ಮೂರು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ದೂರಿದರು.

ಮೂರು ತಿಂಗಳಿನಿಂದ ವೇತನ ನೀಡದೇ ಇರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜೀವನ ದೂಡಲೂ ಸಂಕಷ್ಟ ಅನುಭವಿಸುವಂತಾಗಿದೆ. ಕೂಡಲೇ ಬಾಕಿ ಉಳಿದಿರುವ ವೇತನ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು.

Advertisements

ಪ್ರತಿಭಟನೆಯಲ್ಲಿ ಎಸ್. ರಾಜು, ನರಸಿಂಹಲು, ನರಸಪ್ಪ, ಯಾಕೋಬ, ಹುಸೇನಪ್ಪ, ನರಸಮ್ಮ, ಪಾರ್ವತಿ, ಜಂಬಮ್ಮ, ಹನುಮಂತಿ, ರಾಜು, ರಾಜೇಂದ್ರ, ಶಿವು, ಸೇರಿದಂತೆ ಹಲವು ದಿನಗೂಲಿ ಪೌರ ಕಾರ್ಮಿಕರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X