ರಾಯಚೂರು | ಏಳು ಗಂಟೆ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ವಿಷ ಸೇವಿಸಿದ ರೈತ

Date:

Advertisements

ಕೃಷಿ ಪಂಪ್‌ಸೆಟ್‌ಗಳಿಗೆ ಏಳು ಗಂಟೆಗಳ ಕಾಲ ನಿರಂತರ ವಿದ್ಯುತ್ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ರೈತರೊಬ್ಬರು ಕೀಟನಾಶಕ ಕುಡಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯುತ್ ಕೊಡಿ, ಇಲ್ಲ ವಿಷ ಕೊಡಿ ಎಂದು ಬಾಪುರು ತಿಮ್ಮಪ್ಪ ಎಂಬ ರೈತ ತನ್ನ ಕೈಯಲ್ಲಿದ್ದ ಕ್ರಿಮಿನಾಶಕ ಕುಡಿದಿದ್ದಾರೆ. ಅವರನ್ನು ಕೂಡಲೇ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರಿನ ಜೆಸ್ಕಾಂ ಕಚೇರಿ ಮುಖ್ಯ ದ್ವಾರದ ಗೇಟ್‌ ಬಂದ್ ಮಾಡಿ, ಭತ್ತ ಕೈಯಲ್ಲಿ ಹಿಡಿದುಕೊಂಡು ರೈತರು ಪ್ರತಿಭಟನೆ ನಡೆಸಿದ್ದಾರೆ. ರೈತರ ಹೋರಾಟಕ್ಕೆ ಶಾಸಕ ಶಿವರಾಜ ಪಾಟೀಲ್ ಬೆಂಬಲ ನೀಡಿದ್ದಾರೆ.

Advertisements

ಬೆಳೆಗಳಿಗೆ ನೀರು ಹರಿಸಲು ಸಮರ್ಪಕವಾಗಿ ವಿದ್ಯುತ್ ಇಲ್ಲದೆ, ಬೆಳೆ ಒಣಗುತ್ತಿವೆ, ಸಮಯಕ್ಕೆ ವಿದ್ಯುತ್ ಸಿಗದೆ, ನೀರು ಹರಿಸಲಾಗದೇ ಬೆಳೆಗಳು ಹಾಳಾಗಿವೆ. ಒಂದು ಕಡೆ ಕಾಲುವೆಗೆ  ನೀರು ಹರಿಸಿದರೂ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ. ಮತ್ತೊಂದೆಡೆ, ಬೋರ್ ವೆಲ್ ಮೂಲಕ ನೀರು ಹರಿಸಿಕೊಳ್ಳಲು ನೀರು ಇದ್ದರೂ, ಸಮರ್ಪಕವಾಗಿ ವಿದ್ಯುತ್ ನೀಡುತ್ತಿಲ್ಲ, ಎಂದು ಅಧಿಕಾರಿಗಳ ವಿರುದ್ಧ ರೈತರು ಕಿಡಿ ಕಾರಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಬಂದ ಜೆಸ್ಕಾಂ ಇಇ ಚಂದ್ರಶೇಖರ ದೇಸಾಯಿ, “ಮೂರು ಗಂಟೆ ನಿರಂತರವಾಗಿ ವಿದ್ಯುತ್ ಕೊಡಲಾಗುತ್ತಿದೆ. ಐದರಿಂದ ಏಳು ಗಂಟೆ ಕಾಲ ವಿದ್ಯುತ್ ಪೂರೈಕೆ ಸಾಧ್ಯವಿಲ್ಲ” ಎಂದಿದ್ದಾರೆ.

ಇದರಿಂದ ಆಕ್ರೊಶಗೊಂಡ ರೈತರು ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ. ಕೆಲವು ರೈತರು ರಸ್ತೆಯಲ್ಲಿ ಉರುಳು ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ರವೀಂದ್ರ ಜಲ್ದಾರ, ಲಕ್ಷ್ಮಣಗೌಡ ಕಡಗಂದೊಡ್ಡಿ, ನರಸಪ್ಪ ಯಾದವ, ಹುಲಿಗೆಪ್ಪ ಜಾಲಿಬೆಂಚಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್‌, ರಾಯಚೂರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X