ರಾಯಚೂರು | ಜಿಲ್ಲೆಯ ಲೇಖಕರ ಪುಸ್ತಕಗಳನ್ನು ಖರೀದಿಸುವಂತೆ ಲೇಖಕರ ವೇದಿಕೆಯಿಂದ ಮನವಿ

Date:

Advertisements

ರಾಯಚೂರು ಜಿಲ್ಲೆಯ ಲೇಖಕರ ಪುಸ್ತಕಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಖರೀದಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ಲೇಖಕರ ವೇದಿಕೆಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ಅನೇಕ ಸಾಹಿತಿಗಳು, ಲೇಖಕರು, ಕಥೆಗಾರರಿದ್ದಾರೆ. ಪ್ರತಿ ವರ್ಷ ಪುಸ್ತಕಗಳನ್ನು ಹೊರ ತರುತ್ತಿದ್ದಾರೆ. ಆದರೆ ಪ್ರಕಟಣೆಯಾದ ಪುಸ್ತಕಗಳನ್ನು ಮಾರಾಟ ಮಾಡುವ ಕೌಶಲ್ಯವಿಲ್ಲದೇ ಆರ್ಥಿಕ ಸಮಸ್ಯೆಗೆ ಸಿಲುಕಿದ್ದಾರೆ. ಕೇಂದ್ರ ಗ್ರಂಥಾಲಯದಿಂದ ಪ್ರೋತ್ಸಾಹ ನೀಡುತ್ತಿಲ್ಲ ಎಂದು ಆರೋಪಿಸಿದರು.

ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯವರು ಒಂದು ವರ್ಷ ಹೈ.ಕ. ವಿಭಾಗದ ಲೇಖಕರಿಗೆ ಪ್ರೋತ್ಸಾಹ ನೀಡಿ ಪುಸ್ತಕ ಖರೀದಿಸಿದ್ದರು. ಈಗ ಐದಾರು ವರ್ಷಗಳಿಂದ ಖರೀದಿ ಮಾಡಿಲ್ಲ ಎಂದು ತಿಳಿಸಿದರು.

Advertisements
manavi1

ಕಲ್ಯಾಣ ಕರ್ನಾಟಕದ ಕವಿ-ಸಾಹಿತಿಗಳ ಪುಸ್ತಕ ಗಳನ್ನು ಖರೀದಿಸಿ ಪ್ರೋತ್ಸಾಹಿಸಬೇಕು, 1200 ಗ್ರಾಮ ಪಂಚಾಯಿತಿ ಗ್ರಂಥಾಲಯಗಳು ಕಲ್ಯಾಣ ಕರ್ನಾಟಕದಲ್ಲಿದ್ದು,ಇವುಗಳಿಗೆ ಪುಸ್ತಕಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಖರೀದಿಸಿ ಗ್ರಂಥಾಲಯಗಳಿಗೆ ಒದಗಿಸಿದರೆ ತುಂಬಾ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ನಿರ್ದೇಶಕರು,ಈ ಕುರಿತು ಪುಸ್ತಕ ಖರೀದಿಗೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲು ಸೂಚನೆ ನೀಡಬೇಕೆಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ವೀರಹನುಮಾನ್, ಈರಣ್ಣ ಬೆಂಗಾಲಿ, ಬಶೀರ್ ಅಹ್ಮದ್, ಅಯ್ಯಪ್ಪಯ್ಯ ಹುಡಾ, ಭಗತರಾಜ ನಿಜಾಮಕರ್, ಆಂಜನೇಯ ಜಾಲಿಬೆಂಚಿ ಹೊಸಮನಿ, ಯಲ್ಲಪ್ಪ ಎಂ. ಮರ್ಚೇಡ, ಎಂ.ಬಿ. ನರಸಿಂಹಲು ವಡವಾಟಿ ರಾಮಣ್ಣ ಬೋಯರ್ ಸೇರಿದಂತೆ ಅನೇಕರು ಇದ್ದರು.

ವರದಿ : ಹಫೀಜುಲ್ಲ

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X