ರಾಯಚೂರು | ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದರೆ ಶೈಕ್ಷಣಿಕ ಪ್ರಗತಿ ಸಾಧ್ಯ: ಕುಮಾರ ನಾಯ್ಕ

Date:

Advertisements

ಕಲ್ಯಾಣ ಕರ್ನಾಟಕ ಭಾಗವು ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶವೆಂದು ಗುರುತಿಸಲಾಗಿದ್ದು, ಈ ಹಣೆಪಟ್ಟಿ ತೊಲಗಿಸಲು ಯುವಕರು ಸಾಧನೆ ಮಾಡುವುದು ಅತ್ಯವಶ್ಯಕ. ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಓದಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಿದರೆ ಮಾತ್ರ ನಾವು ಶೈಕ್ಷಣಿಕ ಪ್ರಗತಿಯತ್ತ ಹೆಜ್ಜೆ ಇಡಬಹುದು ಎಂದು ಸಂಸದ ಕುಮಾರ ನಾಯಕರ ಅಭಿಪ್ರಾಯಪಟ್ಟರು.

ನಗರದ ಜಂಬಲದಿನ್ನಿ ಸಿದ್ದರಾಮ ರಂಗಮಂದಿರದಲ್ಲಿ ಎಸ್ ಕೆ ಎಸ್ ಗ್ರೂಪ್ ಆಫ್ ಎಜುಕೇಶನ್ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಹೇಗೆ ಎದುರಿಸಬೇಕು ಎಂಬ ಕುರಿತು ಒಂದು ದಿನದ ಉಚಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸ್ಪರ್ಧಾತ್ಮ ಪರೀಕ್ಷೆಗಳನ್ನು ಎದುರಿಸಲು ಕಾರ್ಯಾಗಾರಗಳು ಧೈರ್ಯ, ಛಲ, ಮಾರ್ಗದರ್ಶನ ಪಡೆಯುವ ಅವಕಾಶವನ್ನು ಒದಗಿಸುತ್ತವೆ. ವಿದ್ಯಾರ್ಥಿಗಳಿಗೆ ಇವು ಸ್ಪೂರ್ತಿದಾಯಕ ವೇದಿಕೆಯಾಗಬೇಕು. ಸದಾ ಮುನ್ನಡೆಯುವ ಮನೋಭಾವನೆ ಮತ್ತು ದೃಢ ಸಂಕಲ್ಪವೇ ಯಶಸ್ಸಿನ ಮಾರ್ಗ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಾಳಿ ಮಳೆಗೆ ಬೆಳೆ ಹಾನಿ; ಪರಿಹಾರ ನೀಡಲು ಒತ್ತಾಯ

ನಂತರ ಮಾತನಾಡಿದ ಭೌತಶಾಸ್ತ್ರದ ಜೇಮ್ಸ್ ಬಾಂಡ್ ಖ್ಯಾತಿಯ ನೀಲಮಣಿ ಶ್ರೀವಾಸ್ತವ್, “ವಿದ್ಯಾರ್ಥಿಗಳು ಉನ್ನತ ದರ್ಜೆಯ ಕನಸು ಕಾಣಬೇಕು. ಕನಸಿನ ಪ್ರಕಾರ ಗುರಿ ಸಾಧಿಸಲು ಸಾಧನೆ ಮಾಡಬೇಕು. ಸಾಧಿಸುವ ಛಲ ಪ್ರತಿಯೊಬ್ಬರಲ್ಲಿಯೂ ಮೂಡಬೇಕಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಯಶಸ್ಸು ದೊರೆಯುತ್ತದೆ” ಎಂದರು.

ಕಾರ್ಯಕ್ರಮದಲ್ಲಿ ರಾಯಚೂರು ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಮುಖ್ಯಸ್ಥ ಪ್ರೊ. ಹರೀಶ ಕುಮಾರ ಸರದಾನಾ, ಎಸ್‌ಕೆಇಎಸ್ ಪ್ಯಾರಾಮೆಡಿಕಲ್, ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಬಾಬುರಾವ್ ಶೇಗುಣಸಿ ಸೇರಿದಂತೆ ಇತರರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X