ರಾಯಚೂರು | ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಎಐಸಿಸಿಟಿಯು ಪ್ರತಿಭಟನೆ

Date:

Advertisements

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ರಸ್ತೆ ಬದಿಗಳಲ್ಲಿ ಡಬ್ಬಾ ಅಂಗಡಿ, ಶೆಡ್‌ಗಳನ್ನು ತೆರವುಗೊಳಿಸಿದ್ದರಿಂದ ಸಾವಿರಾರು ಸಣ್ಣಪುಟ್ಟ ವ್ಯಾಪಾರಸ್ಥರು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಜಿಲ್ಲಾ ಘಟಕ ನಿನ್ನೆ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ 200ಕ್ಕೂ ಅಧಿಕ ಬೀದಿ ಬದಿ ವ್ಯಾಪಾರಸ್ಥರು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಎಐಸಿಸಿಟಿಯು ಜಿಲ್ಲಾಧ್ಯಕ್ಷ ನಾಗರಾಜ ಪೂಜಾರ್ ಮಾತನಾಡಿ, “ಬೀದಿಬದಿ ವ್ಯಾಪಾರ ಮಾಡಿಕೊಂಡು ಕಳೆದ ಹತ್ತಾರು ವರ್ಷಗಳಿಂದ ಜೀವನ ಸಾಗಿಸುತ್ತಿದ್ದೆವು. ಏಕಾಏಕಿ ಕಾರ್ಯಾಚರಣೆ ನಡೆಸಿ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ದೈನಂದಿನ ಜೀವನ ನಡೆಸಲು ಕಷ್ಟಕರವಾಗಿದೆ. ಆದಾಯದಿಂದ ಕುಟುಂಬ ನಿರ್ವಹಣೆ ಮಾಡುತ್ತಿದ್ದ ನಮಗೆ ಬರಸಿಡಿಲು ಬಡಿದಂತಾಗಿದೆ. ತೆರವುಗೊಳಿಸಿದ ದಿನದಿಂದ ಇಲ್ಲಿಯವರೆಗೂ ಕೈಯಲ್ಲಿ ಕೆಲಸವಿಲ್ಲದೇ, ಜೀವನ ನಿರ್ವಹಣೆಗೆ ಆದಾಯವಿಲ್ಲದೇ ಮುಂದೇನು ಎಂಬ ಆತಂಕದಲ್ಲಿ ಜೀವನ ನಡೆಸುತ್ತಿದ್ದೇವೆ” ಎಂದು ಅಳಲು ತೋಡಿಕೊಂಡರು.

ಬೀದಿಬದಿ ವ್ಯಾಪಾರಸ್ಥೆ ರೇಖಾ ಅಡವಿ ಮಾತನಾಡಿ, “ನಗರದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಜಿಲ್ಲಾ, ತಾಲೂಕು ಹಾಗೂ ನಗರಸಭೆ ಆಡಳಿತ ಮುನ್ನೆಚ್ಚರಿಕೆ ವಹಿಸದೇ ಬೇಜವಾಬ್ದಾರಿಯಿಂದ ವರ್ತಿಸಿದ್ದೇ ಇದಕ್ಕೆ ಕಾರಣ. ಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಂಡಿರುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಪ್ರಭಾವಿಗಳ ಕಟ್ಟಡ, ಮಳಿಗೆಗಳನ್ನು ತೆರವುಗೊಳಿಸುವಲ್ಲಿ ಆದೇಶ ಪಾಲಿಸದೇ ಇರುವುದು ಯಾಕೆ? ಹಾಗಾದರೆ ಬೀದಿ ಬದಿ ವ್ಯಾಪಾರಸ್ಥರಿಗೆ ಒಂದು ನ್ಯಾಯ, ಪ್ರಭಾವಿಗಳಿಗೆ ಒಂದು ನ್ಯಾಯವೇ?” ಎಂದು ಪ್ರಶ್ನಿಸಿದರು.

“ಬೀದಿ ಬದಿ ವ್ಯಾಪಾರಸ್ಥರನ್ನು ತೆರವುಗೊಳಿಸುವ ಮುನ್ನ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ಹಲವು ಮಾರ್ಗದರ್ಶಿಗಳನ್ನು ನೀಡಿದೆ. ಆದರೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ಅವುಗಳನ್ನು ಪಾಲಿಸಿಲ್ಲ. ಇದರಿಂದ ರಸ್ತೆ ಬದಿ ವ್ಯಾಪಾರವನ್ನೇ ಜೀವನ ನಿರ್ವಹಣೆಗೆ ಆಧರಿಸಿದ್ದ ಕುಟುಂಬಗಳು ಬೀದಿಪಾಲಾಗಿವೆ. ಸರ್ಕಾರ ಮತ್ತು ಜಿಲ್ಲಾಡಳಿತ ಬಡವರ ಹೊಟ್ಟೆಯ ಮೇಲೆ ಹೊಡೆಯದೇ ಈ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು. ಇಲ್ಲದೇ ಹೋದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ” ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಟೋಲ್ ಗೇಟ್ ನಿರ್ಮಿಸಿ ವಸೂಲಿಗೆ ಮುಂದಾದರೆ ಕಾನೂನು ಹೋರಾಟ: ಶಾಸಕಿ ಕರೆಮ್ಮ ನಾಯಕ್

ಪ್ರತಿಭಟನೆಯಲ್ಲಿ ಅಜೀಜ್ ಜಾಗೀರ್ದಾರ್, ರವಿಚಂದ್ರನ್, ಎಐಸಿಸಿಟಿಯು ಮುಖಂಡ ಖಾಸಿಂ ಸಾಬ್ ಕಾರ್ಪೋರೇಟರ್, ಸಾದಿಕ್ ಹುಸೇನ್, ಲಾಲ್ ಸಾಬ್, ರಸೂಲ್ ಸಾಬ್, ರಹೀಮ್ ಸಾಬ್, ಮೆಹಬೂಬ್, ಸಾದಿಕ್ ಮೈಕೀನಿಕ್, ಯಾಕುಬ್, ಹುಸೇನ್ ಸೇರಿದಂತೆ ಇತರರು ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X