ರಾಯಚೂರು | ಉಮಲೂಟಿ ಗ್ರಾಮದಲ್ಲಿ ‘ಮನೆ ಮನೆಗೆ ಅಂಬೇಡ್ಕರ್’ ಕಾರ್ಯಕ್ರಮ

Date:

Advertisements

ಮಹಿಳೆಯರಿಗೆ ದುಡಿಯುವ-ಹಣ ಗಳಿಸುವ ಹಕ್ಕು ನೀಡಿದವರು ಅಂಬೇಡ್ಕರ್ ಎಂದು ಕಾರಟಿಗಿ ಸಿಎಂಎನ್ ಕಾಲೇಜಿನ ಉಪನ್ಯಾಸಕ ಈಶ್ವರ ಹಲಗಿ ಹೇಳಿದರು.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ರೇಣುಕಮ್ಮ- ಮೌನೇಶ ಇವರ ಮನೆಯಲ್ಲಿ ಬಹುಜನ ಸಂಘರ್ಷ ಸಮಿತಿಯಿಂದ ಶನಿವಾರ ಆಯೋಜಿಸಿದ್ದ, ʼ79ನೇ ಮನೆ-ಮನೆಗೆ ಅಂಬೇಡ್ಕರ್ʼ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಾಯಿ, ಹಂದಿಗಿಂತ ಕೀಳಾಗಿ ಬದುಕುತ್ತಿದ್ದ ಮಹಿಳೆಯರಿಗೆ ಅಕ್ಷರ ಕಲಿಯುವ ಹಕ್ಕು, ಆಸ್ತಿ ಹೊಂದುವ ಹಕ್ಕು, ವೈವಾಹಿಕ ಜೀವನದಲ್ಲಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಮತ್ತು ತಿರಸ್ಕರಿಸುವ ಹಕ್ಕುಗಳು ಸೇರಿದಂತೆ ಹಲವು ಹಕ್ಕು ಅಧಿಕಾರಗಳನ್ನು ನೀಡಿದವರು ಬಾಬಾಸಾಹೇಬ್ ಅಂಬೇಡ್ಕರ್” ಎಂದು ಹೇಳಿದರು.

Advertisements

“ದಲಿತರು ಜಾತಿ ಮತ್ತು ಸಂಪ್ರದಾಯದ ಸಂಕೋಲೆಗಳಲ್ಲಿ ಸಿಲುಕಿಕೊಂಡಿದ್ದಾರೆ. ಮೇಲ್ಜಾತಿಯ ಕೆಲವು ವರ್ಗಗಳು ಇವರ ಮೆದುಳಿಗೆ ಮತ್ತು ಮನಸ್ಸಿಗೆ ಹಾಕಿದ ಬೇಡಿಯನ್ನು ಕಳಚಿಕೊಳ್ಳಬೇಕಾಗಿದೆ. ಮೌಢ್ಯತೆಯಿಂದ ಹೊರಬರಲು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಚಿಂತನೆ ಮತ್ತು ವಿಚಾರಗಳ ಅರಿವನ್ನು ಮಕ್ಕಳಿಗೆ ತಿಳಿಸಬೇಕು” ಎಂದರು.

ಕರ್ನಾಟಕ ಜನಶಕ್ತಿ ಮುಖಂಡ ಶಿವಪುತ್ರಪ್ಪ ತುರ್ವಿಹಾಳ ಮಾತನಾಡಿ, “ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ಅಪಾರ ಜ್ಞಾನ ಸಂಪಾದಿಸಲು ಮತ್ತು ಶೋಷಿತರಿಗೆ ಸಮಾನತೆಯಿಂದ, ಸ್ವಾತಂತ್ರ್ಯದಿಂದ ಬದುಕುವ ಹಕ್ಕಗಳನ್ನು ನೀಡುವುದಕ್ಕೆ ಹೋರಾಟ ಮಾಡಲು ರಮಾಬಾಯಿ ಅವರು ಮಾಡಿದ ತ್ಯಾಗ ಸಹಕಾರ ಬಹಳ ದೊಡ್ಡದಿದೆ” ಎಂದರು.

ಈ ಸುದ್ದಿ ಓದಿದ್ದೀರಾ?  ತುಮಕೂರು | ಕೆಎಸ್‌ಆರ್‌ಟಿಸಿ ನಿಲ್ದಾಣಾಧಿಕಾರಿ ಅಮಾನತು

ಬಹುಜನ ಸಂಘರ್ಷ ಸಮಿತಿ ಅಧ್ಯಕ್ಷ ಜೆ ಶರಣಪ್ಪ ಬಲ್ಲಟಗಿ, ಹಿರಿಯ ಹೋರಾಟಗಾರ, ದಸಂಸ ಮಹಾಪೋಷಕ ಎಂ ಆರ್ ಭೇರಿ, ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ಸಿಂಧನೂರು ಸಂಚಾಲಕ ಮೌನೇಶ ಉಮಲೂಟಿ, ನಾಗರಾಜ, ಶಾಮ್ ಮುಳ್ಳೂರು, ಮಾಬುಶುಭಾನಿ ಚಲುವಾದಿ, ನಾಗರಾಜ, ದುರುಗೇಶ, ಹುಲುಗಪ್ಪ, ಬಸವರಾಜ, ಮರಿಯಪ್ಪ, ದೊಡ್ಡಮ್ಮ ರೇಣುಕಮ್ಮ, ಅಡಿವೆಪ್ಪ, ಮರಿಯಮ್ಮ ಸೇರಿದಂತೆ ಮಹಿಳೆಯರು, ಮಕ್ಕಳು ಇದ್ದರು.

ವರದಿ : ಬಸವರಾಜ್ ಬಾದರ್ಲಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X